AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ

ponmudy: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಮೇಲೆ ಇ.ಡಿ ದಾಳಿ ನಡೆದಿದೆ. ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.

Tamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ
ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ
ಅಕ್ಷಯ್​ ಪಲ್ಲಮಜಲು​​
|

Updated on:Jul 17, 2023 | 10:57 AM

Share

ಚೆನ್ನೈ ಜುಲೈ 17:  ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ಭಾರೀ ಜೋರಾಗಿಯೇ ನಡೆಯುತ್ತಿದೆ, ಎಂ.ಕೆ ಸ್ಟಾಲಿನ್​​ ಸರ್ಕಾರದ ಸಚಿವರು ಈ ದಾಳಿಗೆ ಒಳಗಾಗಿದ್ದಾರೆ. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಸಿದಂತೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಮೇಲೆ ಇ.ಡಿ ದಾಳಿ ನಡೆದಿದೆ. ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಜತೆಗೆ ಅವರ ಪುತ್ರ ಹಾಗೂ ಸಂಸದ ಗೌತಮ್ ಸಿಗಮಣಿ ಅವರ ಮನೆಯಲ್ಲೂ ಹುಡುಕಾಟ ನಡೆದಿದೆ.

ಸಚಿವ ಕೆ ಪೊನ್ಮುಡಿ ಅವರಿಗೆ ಸಂಬಂಧಿಸಿದ 9 ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯವನ್ನು ಮಾಡುತ್ತಿದ್ದು, ಕೇಂದ್ರ ಭದ್ರತಾ ಪಡೆಯ ಜತೆಗೆ ಸೇರಿ ಇ.ಡಿ ಕಾರ್ಯಚರಣೆಯನ್ನು ನಡೆಸುತ್ತಿದೆ. ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇಂಧನ ಮತ್ತು ಅಬಕಾರಿ ಇಲಾಖೆ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮೇಲೆ ಇ.ಡಿ ದಾಳಿ ನಡೆಸಿ, ಅನೇಕ ಕಡೆ ಶೋಧ ಕಾರ್ಯವನ್ನು ನಡೆಸಿತ್ತು. ಅವರ ಆಪ್ತರ ಮೇಲೂ ಇ.ಡಿ ದಾಳಿ ನಡೆಸಿತ್ತು. ಜೂ.14ರಂದು ವಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿ, ಈಗ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ; ತಮಿಳುನಾಡಿನ ಸಚಿವ ವಿ ಸೆಂಥಿಲ್ ಬಾಲಾಜಿ ಮನೆಯ ಮೇಲೆ ಐಟಿ ದಾಳಿ

ಇದೀಗ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ ನಂತರ ತಮಿಳುನಾಡಿನ ಸರ್ಕಾರದ ಸಚಿವರ ಮೇಲೆ ಇ.ಡಿ ಒಂದು ಕಣ್ಣಿಟ್ಟಿದ್ದು, ಅವರ ವ್ಯವಹಾರಗಳ ಮೇಲೆ ಗಮನ ನೀಡಿದೆ. ಇದರ ಜತೆಗೆ ಈಗಾಗಲೇ ವಿ ಸೆಂಥಿಲ್ ಬಾಲಾಜಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಆದೇಶವನ್ನು ರಾಜ್ಯಪಾಲರು ತಡೆಹಿಡಿದಿದ್ದು, ಕಾನೂನು ಕ್ರಮಗಳನ್ನು ಬಗ್ಗೆ ತಿಳಿದುಕೊಂಡು ರಾಜೀನಾಮೆ ಪಡೆಯಬೇಕೇ? ಬೇಡವೇ? ಎಂಬುದನ್ನು ನಿರ್ಧಾರಿಸುತ್ತೇವೆ ಎಂದು ಹೇಳಿದ್ದಾರೆ. ಈ ಸಮಯದಲ್ಲೇ ಇನ್ನೊಬ್ಬ ಸಚಿವ ಮೇಲೆ ಇ.ಡಿ ದಾಳಿ ನಡೆದಿದೆ. ಇದು ರಾಜಕೀಯ ಎಂದು ಸ್ಟಾಲಿನ್​ ಸರ್ಕಾರ ಹೇಳುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Mon, 17 July 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್​​​ ವಿಭಾಗದಲ್ಲಿ​​​​ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More