AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ ಎಂದು ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು IRS ಅಧಿಕಾರಿ

ನಿರ್ಮಲಾ ಸೀತಾರಾಮನ್ ಅವರು ಜಾರಿ ನಿರ್ದೇಶನಾಲಯವನ್ನು ಬಿಜೆಪಿಯ ವಿಸ್ತೃತ ಅಂಗವಾಗಿ ಪರಿವರ್ತಿಸಿದ್ದಾರೆ . ತಮಿಳುನಾಡಿನ ಸೇಲಂನಲ್ಲಿನ ರೈತರಿಗೆ PMLA ಕಾಯಿದೆಯಡಿ (ಹಣ ಲಾಂಡರಿಂಗ್ ತಡೆ ಕಾಯಿದೆ, 2002) ಇಡಿ ಸಮನ್ಸ್ ಕಳುಹಿಸಿದ್ದರಿಂದ ಹಣಕಾಸು ಸಚಿವರನ್ನು ವಜಾ ಮಾಡಬೇಕು ಎಂದು ತಮಿಳುನಾಡು ಐಆರ್‌ಎಸ್ ಅಧಿಕಾರಿ ಬಿ ಬಾಲಮುರುಗನ್ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ ಎಂದು ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು IRS ಅಧಿಕಾರಿ
ನಿರ್ಮಲಾ ಸೀತಾರಾಮನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 03, 2024 | 2:49 PM

Share

ಚೆನ್ನೈ ಜನವರಿ 03: ತಮಿಳುನಾಡು (Tamil nadu)  ಐಆರ್‌ಎಸ್ (ಭಾರತೀಯ ಕಂದಾಯ ಸೇವೆ) ಅಧಿಕಾರಿ ಬಿ ಬಾಲಮುರುಗನ್ ಎಂಬವರು   ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sithraman) ವಿರುದ್ಧ ಆರೋಪವೊಂದನ್ನು ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಜಾರಿ ನಿರ್ದೇಶನಾಲಯವನ್ನು (ED) ಬಿಜೆಪಿಯ ವಿಸ್ತೃತ ಅಂಗವಾಗಿ ಪರಿವರ್ತಿಸಿದ್ದಾರೆ . ತಮಿಳುನಾಡಿನ ಸೇಲಂನಲ್ಲಿನ ರೈತರಿಗೆ PMLA ಕಾಯಿದೆಯಡಿ (ಹಣ ಲಾಂಡರಿಂಗ್ ತಡೆ ಕಾಯಿದೆ, 2002) ಇಡಿ ಸಮನ್ಸ್ ಕಳುಹಿಸಿದ್ದರಿಂದ ಹಣಕಾಸು ಸಚಿವರನ್ನು ವಜಾ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಚೆನ್ನೈ (ಉತ್ತರ) ಜಿಎಸ್‌ಟಿ ಮತ್ತು ಸಿಇಎಕ್ಸ್‌ನ ಡೆಪ್ಯುಟಿ ಕಮಿಷನರ್ ಬಿ ಬಾಲಮುರುಗನ್ ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಮಿಳುನಾಡಿನ ಇಬ್ಬರು ಹಿರಿಯ ಅನಕ್ಷರಸ್ಥ ಮತ್ತು ಬಡ ದಲಿತ ರೈತರು, 72 ವರ್ಷ ವಯಸ್ಸಿನ ಕಣ್ಣಿಯಾನ್ ಮತ್ತು 67 ವರ್ಷ ವಯಸ್ಸಿನ ಕೃಷ್ಣನ್ ಅವರು ತಮಿಳುನಾಡಿನ ಅತ್ತೂರಿನಲ್ಲಿ 6.5 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಅವರು ಪ್ರಸ್ತುತ ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ಅವರೊಂದಿಗೆ ಕಾನೂನು ವಿವಾದದಲ್ಲಿ ತೊಡಗಿದ್ದು ಅವರಿಗೆ ಜಾರಿ ನಿರ್ದೇಶನಾಲಯದಿಂದ (ಇಡಿ) ಸಮನ್ಸ್ ಕಳುಹಿಸಲಾಗಿದೆ.

ಭೂ ವಿವಾದ ಪ್ರಕರಣದಲ್ಲಿ ಇಡಿ ಭಾಗಿಯಾಗಿದ್ದು, ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಅಕ್ರಮ ಭೂ ಕಬಳಿಕೆಗೆ ಯತ್ನಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಆದಾಗ್ಯೂ ಲಕೋಟೆಯ ಮೇಲೆ ರೈತರ ಜಾತಿಯನ್ನು ‘ಹಿಂದೂ ಪಲ್ಲರು’ ಎಂದು ನಮೂದಿಸಿರುವ ಸಮನ್ಸ್ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಜಮೀನು ಸಮಸ್ಯೆಗಳಿಂದಾಗಿ, ರೈತರು ಕಳೆದ ನಾಲ್ಕು ವರ್ಷಗಳಿಂದ ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ, ಅವರ ಬ್ಯಾಂಕ್ ಖಾತೆಯಲ್ಲಿ ಕೇವಲ 450 ರೂ ಇತ್ತು, ಅವರು ವೃದ್ಧಾಪ್ಯ ಪಿಂಚಣಿ ರೂ. 1000 ಪಡೆಯುತ್ತಿದ್ದಾರೆ. ಅವರ ಜೀವನೋಪಾಯಕ್ಕಾಗಿ ಸರ್ಕಾರ ಒದಗಿಸಿದ ಉಚಿತ ಪಡಿತರವನ್ನು ಆಶ್ರಯಿಸಿದ್ದಾರೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಇಡಿಯ ಸಹಾಯಕ ನಿರ್ದೇಶಕರಾದ ರಿತೇಶ್ ಕುಮಾರ್ ಅವರು ರೈತರಿಗೆ ಜೂನ್ 26, 2023 ರಂದು ಸಮನ್ಸ್ ನೀಡಿದ್ದಾರೆ. ಸಮನ್ಸ್ ಪ್ರಕಾರ, ತನಿಖಾಧಿಕಾರಿ (IO) ರಿತೇಶ್ ಕುಮಾರ್ ಅವರು 2002 ರ ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ತನಿಖೆ ನಡೆಸುತ್ತಿದ್ದು, ಕಣ್ಣಿಯಾನ್ ಮತ್ತು ಕೃಷ್ಣನ್ ಅವರಲ್ಲಿ ಜುಲೈ 5, 2023 ರಂದು ಏಜೆನ್ಸಿಯ ಮುಂದೆ ಹಾಜರಾಗಲು ಹೇಳಲಾಗಿದೆ.

ಸದರಿ ಕಾಯಿದೆಯ ಸೆಕ್ಷನ್ 50 ರ ಉಪ-ವಿಭಾಗ (2) ಮತ್ತು ಉಪ-ವಿಭಾಗ (3) ರ ಅಡಿಯಲ್ಲಿ ನನಗೆ ನೀಡಲಾದ ಅಧಿಕಾರಗಳನ್ನು ಬಳಸುವಾಗ ಚಿನ್ನಸಾಮಿ ಅವರ ಮಗ ಕಣ್ಣಿಯಾನ್ ಅವರು ಲಗತ್ತಿಸಲಾದ ವೇಳಾಪಟ್ಟಿಯ ಪ್ರಕಾರ ದಾಖಲೆಗಳೊಂದಿಗೆ 05/07/2023 ರಂದು ನನ್ನ ಕಛೇರಿಯಲ್ಲಿ ನನ್ನ ಮುಂದೆ ಹಾಜರಾಗಬೇಕು ಎಂದು ಸಮನ್ಸ್ ನಲ್ಲಿ ಹೇಳಿದೆ.

ಇದನ್ನೂ ಓದಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ತಮ್ಮ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸಹೋದರರು ಆರೋಪಿಸಿದ್ದಾರೆ ಎಂದು ತಮಿಳುನಾಡು ಐಆರ್‌ಎಸ್ ಅಧಿಕಾರಿ ಹೇಳಿದ್ದಾರೆ. ಕೃಷ್ಣನ್ ಅವರ ದೂರಿನ ಮೇರೆಗೆ 2020 ರಲ್ಲಿ ಗುಣಶೇಖರ್ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಪ್ರಾರಂಭಿಸಲಾಯಿತು. ಇದು ಅವರ ಬಂಧನ ಮತ್ತು ನಂತರದ ನ್ಯಾಯಾಂಗ ಬಂಧನಕ್ಕೆ ಕಾರಣವಾಯಿತು. ಅದೇ ಸಮಯದಲ್ಲಿ, ಕೃಷ್ಣನ್ ಮತ್ತು ಗುಣಶೇಖರ್ ನಡುವೆ ನಡೆಯುತ್ತಿರುವ ಭೂ ವಿವಾದವನ್ನು ಪರಿಹರಿಸುವ ಸಿವಿಲ್ ಪ್ರಕರಣವು ಪ್ರಸ್ತುತ ಅತ್ತೂರು ನ್ಯಾಯಾಲಯದಲ್ಲಿದೆ.

ಈ ಮೇಲಿನ ಘಟನೆಯು ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುದನ್ನು ತೋರಿಸುತ್ತದೆ. ವಾಸ್ತವವಾಗಿ  ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ಯಶಸ್ವಿಯಾಗಿ ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಬಾಲಮುರುಗನ್ ಪತ್ರದಲ್ಲಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?