AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಕಾಲೇಜಿನಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗಾವಕಾಶ; ವಿವಾದಕ್ಕೀಡಾಯ್ತು ಜಾಹೀರಾತು

ಕೊಲತ್ತೂರಿನಲ್ಲಿರುವ ಅರುಲ್ಮಿಗು ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಕ್ಟೋಬರ್ 13ರಂದು ಅರ್ಜಿ ಆಹ್ವಾನಿಸಲಾಗಿತ್ತು.

ತಮಿಳುನಾಡಿನ ಕಾಲೇಜಿನಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗಾವಕಾಶ; ವಿವಾದಕ್ಕೀಡಾಯ್ತು ಜಾಹೀರಾತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 18, 2021 | 5:10 PM

Share

ಚೆನ್ನೈ: ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ಚಾರಿಟಬಲ್ ದತ್ತಿ ಇಲಾಖೆಯಿಂದ ಸರ್ಕಾರಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಜಾಹೀರಾತಿನಲ್ಲಿ ಶಿಕ್ಷಕ ಮತ್ತು ಬೋಧಕೇತರ ಸಿಬ್ಬಂದಿಯ ಹುದ್ದೆಗೆ ಹಿಂದೂಗಳು ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಈ ಜಾಹೀರಾತು ಈಗ ತಮಿಳುನಾಡಿನಲ್ಲಿ ಭಾರೀ ಚರ್ಚೆಗೊಳಗಾಗಿದೆ.

ಕೊಲತ್ತೂರಿನಲ್ಲಿರುವ ಅರುಲ್ಮಿಗು ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಕ್ಟೋಬರ್ 13ರಂದು ಅರ್ಜಿ ಆಹ್ವಾನಿಸಲಾಗಿತ್ತು. ಪತ್ರಿಕೆಗಳಲ್ಲಿ ಈ ಬಗ್ಗೆ ಜಾಹೀರಾತು ನೀಡಲಾಗಿತ್ತು. ಆದರೆ, ಆ ಜಾಹೀರಾತಿನ ಕೆಳ ಭಾಗದಲ್ಲಿ ‘ಹಿಂದುಗಳು ಮಾತ್ರ ಅರ್ಜಿ ಸಲ್ಲಿಸಬಹುದು’ ಎಂದು ನಮೂದಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

ಕೊಲತ್ತೂರಿನ ಕಪಲೀಶ್ವರರ್ ಕಾಲೇಜಿನ ಜಾಹೀರಾತಿನಲ್ಲಿ, ಬಿಕಾಂ, ಬಿಬಿಎ, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಬಿಸಿಎ, ತಮಿಳು, ಇಂಗ್ಲಿಷ್, ಗಣಿತ ಕೋರ್ಸ್‌ಗಳನ್ನು ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಬೋಧಿಸಲು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ ಹಾಗೂ ಕಚೇರಿ ಸಹಾಯಕ, ಕಿರಿಯ ಸಹಾಯಕ, ಕಾವಲುಗಾರ ಮತ್ತು ಸ್ವೀಪರ್ ಸೇರಿದಂತೆ ಬೋಧಕೇತರ ಸಿಬ್ಬಂದಿಯ ಹುದ್ದೆಗೆ ವಾಕ್-ಇನ್-ಇಂಟರ್​ವ್ಯೂಗಳ ಬಗ್ಗೆ ಜಾಹೀರಾತು ನೀಡಲಾಗಿತ್ತು.

ಸರ್ಕಾರದಿಂದ ನಡೆಸಲ್ಪಡುವ ಇಲಾಖೆಯು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಲು ಸಾಧ್ಯವಿಲ್ಲ. ಇದರಿಂದ ಬೇರೆ ಧರ್ಮಗಳಲ್ಲಿನ ಅರ್ಹರಿಗೆ ಅವಕಾಶ ಸಿಗದಂತಾಗುತ್ತದೆ ಎಂಬ ಅಸಮಾಧಾನ ಕೇಳಿಬಂದಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲಿ ಇಂದು ವ್ಯಾಪಕ ಮಳೆ; ಬೆಂಗಳೂರಿನಲ್ಲೂ ಹೈ ಅಲರ್ಟ್

ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದವರನ್ನು ಹುಡುಕಿ, ಶಿಕ್ಷೆ ನೀಡುತ್ತೇವೆ; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಭರವಸೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ