AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಕಾಲೇಜಿನಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗಾವಕಾಶ; ವಿವಾದಕ್ಕೀಡಾಯ್ತು ಜಾಹೀರಾತು

ಕೊಲತ್ತೂರಿನಲ್ಲಿರುವ ಅರುಲ್ಮಿಗು ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಕ್ಟೋಬರ್ 13ರಂದು ಅರ್ಜಿ ಆಹ್ವಾನಿಸಲಾಗಿತ್ತು.

ತಮಿಳುನಾಡಿನ ಕಾಲೇಜಿನಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗಾವಕಾಶ; ವಿವಾದಕ್ಕೀಡಾಯ್ತು ಜಾಹೀರಾತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 18, 2021 | 5:10 PM

Share

ಚೆನ್ನೈ: ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ಚಾರಿಟಬಲ್ ದತ್ತಿ ಇಲಾಖೆಯಿಂದ ಸರ್ಕಾರಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಜಾಹೀರಾತಿನಲ್ಲಿ ಶಿಕ್ಷಕ ಮತ್ತು ಬೋಧಕೇತರ ಸಿಬ್ಬಂದಿಯ ಹುದ್ದೆಗೆ ಹಿಂದೂಗಳು ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಈ ಜಾಹೀರಾತು ಈಗ ತಮಿಳುನಾಡಿನಲ್ಲಿ ಭಾರೀ ಚರ್ಚೆಗೊಳಗಾಗಿದೆ.

ಕೊಲತ್ತೂರಿನಲ್ಲಿರುವ ಅರುಲ್ಮಿಗು ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಕ್ಟೋಬರ್ 13ರಂದು ಅರ್ಜಿ ಆಹ್ವಾನಿಸಲಾಗಿತ್ತು. ಪತ್ರಿಕೆಗಳಲ್ಲಿ ಈ ಬಗ್ಗೆ ಜಾಹೀರಾತು ನೀಡಲಾಗಿತ್ತು. ಆದರೆ, ಆ ಜಾಹೀರಾತಿನ ಕೆಳ ಭಾಗದಲ್ಲಿ ‘ಹಿಂದುಗಳು ಮಾತ್ರ ಅರ್ಜಿ ಸಲ್ಲಿಸಬಹುದು’ ಎಂದು ನಮೂದಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

ಕೊಲತ್ತೂರಿನ ಕಪಲೀಶ್ವರರ್ ಕಾಲೇಜಿನ ಜಾಹೀರಾತಿನಲ್ಲಿ, ಬಿಕಾಂ, ಬಿಬಿಎ, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಬಿಸಿಎ, ತಮಿಳು, ಇಂಗ್ಲಿಷ್, ಗಣಿತ ಕೋರ್ಸ್‌ಗಳನ್ನು ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಬೋಧಿಸಲು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ ಹಾಗೂ ಕಚೇರಿ ಸಹಾಯಕ, ಕಿರಿಯ ಸಹಾಯಕ, ಕಾವಲುಗಾರ ಮತ್ತು ಸ್ವೀಪರ್ ಸೇರಿದಂತೆ ಬೋಧಕೇತರ ಸಿಬ್ಬಂದಿಯ ಹುದ್ದೆಗೆ ವಾಕ್-ಇನ್-ಇಂಟರ್​ವ್ಯೂಗಳ ಬಗ್ಗೆ ಜಾಹೀರಾತು ನೀಡಲಾಗಿತ್ತು.

ಸರ್ಕಾರದಿಂದ ನಡೆಸಲ್ಪಡುವ ಇಲಾಖೆಯು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಲು ಸಾಧ್ಯವಿಲ್ಲ. ಇದರಿಂದ ಬೇರೆ ಧರ್ಮಗಳಲ್ಲಿನ ಅರ್ಹರಿಗೆ ಅವಕಾಶ ಸಿಗದಂತಾಗುತ್ತದೆ ಎಂಬ ಅಸಮಾಧಾನ ಕೇಳಿಬಂದಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲಿ ಇಂದು ವ್ಯಾಪಕ ಮಳೆ; ಬೆಂಗಳೂರಿನಲ್ಲೂ ಹೈ ಅಲರ್ಟ್

ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದವರನ್ನು ಹುಡುಕಿ, ಶಿಕ್ಷೆ ನೀಡುತ್ತೇವೆ; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಭರವಸೆ

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ