AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Man Chews Snake: ಕೊರೊನಾಗೆ ಔಷಧ ಎಂದು ಸತ್ತ ಹಾವನ್ನೇ ಜಗಿದ ಭೂಪ!

ಅರಣ್ಯ ಅಧಿಕಾರಿ (ಡಿಎಫ್​ಒ) ಎಸ್. ಆನಂದ್ ವಡಿವೇಲುವನ್ನು ಬಂಧಿಸಿ, 7,000 ರೂಪಾಯಿ ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ. ವಿಡಿಯೋ ವೈರಲ್ ಆದ ಬಳಿಕ ಆತನನ್ನು ಬಂಧಿಸಲಾಗಿದೆ.

Man Chews Snake: ಕೊರೊನಾಗೆ ಔಷಧ ಎಂದು ಸತ್ತ ಹಾವನ್ನೇ ಜಗಿದ ಭೂಪ!
ಹಾವು (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Aug 14, 2021 | 1:12 PM

Share

ಮಧುರೈ: ಇಲ್ಲಿನ 50 ವರ್ಷ ವಯಸ್ಸಿನ ವಡಿವೇಲು ಎಂಬ ಕೃಷಿಕನೊಬ್ಬ ಸತ್ತ ಹಾವನ್ನು ಜಗಿದಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಅರಣ್ಯ ಅಧಿಕಾರಿಗಳು ಬಂಧಿಸಿ, 7,000 ರೂಪಾಯಿ ದಂಡ ವಿಧಿಸಿರುವ ಘಟನೆ ನಡೆದಿದೆ. ವಡಿವೇಲು ಎಂಬಾತ ಸತ್ತ ಹಾವನ್ನು ಜಗಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವೈರಲ್ ವಿಡಿಯೋದಲ್ಲಿ ಆತ ಕೊರೊನಾ ಸೋಂಕಿಗೆ ಹಾವುಗಳು ಉತ್ತಮ ಔಷಧ ಎಂಬ ಬಗ್ಗೆಯೂ ಹೇಳಿಕೊಂಡಿದ್ದಾನೆ. ಇದೀಗ ಅರಣ್ಯ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.

ಪೆರುಮಾಪಟ್ಟಿ ಎಂಬಲ್ಲಿನ ನಿವಾಸಿ ವಡಿವೇಲು, ಸತ್ತುಹೋಗಿರುವ ಕಟ್ಟು ಹಾವನ್ನು ಜಗಿಯುತ್ತಿದ್ದುದು ವಿಡಿಯೋದಲ್ಲಿ ವೈರಲ್ ಆಗಿದೆ. ಈ ಹಾವು ವಿಷಜಂತುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ, ಕೊರೊನಾ ವೈರಸ್​ನಿಂದ ರಕ್ಷಿಸಲು ಹಾವು ಉತ್ತಮ ಆಯ್ಕೆ ಎಂದು ವಿಡಿಯೋದಲ್ಲಿ ಆತ ಹೇಳಿಕೊಂಡಿದ್ದಾನೆ. ಕೊರೊನಾದಿಂದ ರಕ್ಷಿಸಿಕೊಳ್ಳಲು ಆತ ಹಾವು ಜಗಿದಿರುವುದಾಗಿ ಆತ ಹೇಳಿಕೊಂಡಿದ್ದಾನೆ.

ಟೈಮ್ಸ್ ಆಫ್ ಇಂಡಿಯಾ ವರದಿಯಂತೆ, ಅರಣ್ಯ ಅಧಿಕಾರಿ (ಡಿಎಫ್​ಒ) ಎಸ್. ಆನಂದ್ ವಡಿವೇಲುವನ್ನು ಬಂಧಿಸಿ, 7,000 ರೂಪಾಯಿ ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ. ವಿಡಿಯೋ ವೈರಲ್ ಆದ ಬಳಿಕ ಆತನನ್ನು ಬಂಧಿಸಲಾಗಿದೆ.

ಕೆಲವರು ಆತನಿಗೆ ಹಾವನ್ನು ಜಗಿಯುವಂತೆ ಹೇಳಿದ್ದಾರೆ. ಒತ್ತಾಯಿಸಿದ್ದಾರೆ. ವಡಿವೇಲು ಆ ವೇಳೆ ಕುಡಿದ ಮತ್ತಿನಲ್ಲಿದ್ದ ಎಂದು ಡಿಎಫ್​ಒ ಮಾಹಿತಿ ನೀಡಿದ್ದಾರೆ. ವಡಿವೇಲು ಅದಾಗಲೇ ಸತ್ತಿರುವ ಹಾವನ್ನು ಜಗಿದಿದ್ದಾನೆ. ಅದೃಷ್ಟವಷಾತ್ ವಿಷಕಾರಿ ಭಾಗವನ್ನು ಆತ ಜಗಿದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕೊರೊನಾ ತಡೆಯಲು ಈ ಮಾರ್ಗ ಅನುಸರಿಸಿ ಕೊರೊನಾ ಸೋಂಕು ತಡೆಗಟ್ಟಲು ಈ ರೀತಿಯ ಮಾರ್ಗಗಳನ್ನು ಅನುಸರಿಸುವುದು ಯಾವುದೇ ಕಾರಣಕ್ಕೂ ಒಳ್ಳೆಯದಲ್ಲ. ಅಸಂಬದ್ಧ ವಿಧಾನಗಳಿಂದ ಕೊರೊನಾ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ. ಈ ಬಗ್ಗೆ ನಾವು ಜಾಗೃತರಾಗಿರಬೇಕು. ಕೊವಿಡ್-19 ಹರಡದಂತೆ ತಡೆಯಲು ಸಾಮಾಜಿಕ ಅಂತರ ಪಾಲಿಸುವುದು, ಮಾಸ್ಕ್ ಧರಿಸುವುದು, ಸ್ವಚ್ಛತಾ ಮಾರ್ಗಗಳನ್ನು ಅನುಸರಿಸುವುದು ಮುಖ್ಯವಾಗಿದೆ. ಜೊತೆಗೆ, ಅರ್ಹರು ಲಸಿಕೆ ಪಡೆದುಕೊಳ್ಳುವುದು ಅವಶ್ಯವಾಗಿದೆ.

ಇದನ್ನೂ ಓದಿ: ಕೊರೊನಾ ಹಾವಳಿ ಮಧ್ಯೆ ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ; 138 ಲೀಟರ್ ಗೋವಾ ಮದ್ಯ ವಶ: ಆರೋಪಿಗಳು ಪರಾರಿ

ನಮಗೆ ಕೊರೊನಾ​ ಕಲಿಸಿದ ಪಾಠ ಜೀವನಪರ್ಯಂತ ಮರೆಯುವಂತಿಲ್ಲ; ನಟ ಶರಣ್​

Published On - 6:03 pm, Fri, 28 May 21

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ