AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸವಾರನ ಜೀವಕ್ಕೆ ಕುತ್ತು ತಂದ ಎರಡು ಹಸುಗಳ ಕಾದಾಟ

ರಸ್ತೆಯಲ್ಲಿ ಎರಡು ಹಸುಗಳ ನಡುವೆ ನಡೆದ ಕಾದಾಟವು ವ್ಯಕ್ತಿಯ ಜೀವವನ್ನೇ ತೆಗೆದಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು, ಎದುರು ಬದಿಯಿಂದ ಬಸ್​ ಬರುತ್ತಿತ್ತು, ಹಾಗೆಯೇ ಇತ್ತ ಬೈಕ್​ ಒಂದು ಹೋಗುತ್ತಿತ್ತು ಅದೇ ಸಮಯದಲ್ಲಿ ಎರಡು ಹಸುಗಳು ಕಾದಾಟಕ್ಕಿಳಿದಿದ್ದವು, ಏಕಾಏಕಿ ಒಂದು ಹಸು ಮತ್ತೊಂದು ಹಸುವನ್ನು ತಿವಿದಿದ್ದು ಆ ಹಸು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಆಯತಪ್ಪಿ ಬಿದ್ದು ಬಸ್​ನ ಚಕ್ರದಡಿ ಸಿಲುಕಿರುವ ಘಟನೆ ಇದಾಗಿದೆ.

ಬೈಕ್​ ಸವಾರನ ಜೀವಕ್ಕೆ ಕುತ್ತು ತಂದ ಎರಡು ಹಸುಗಳ ಕಾದಾಟ
ಸಾವು
ನಯನಾ ರಾಜೀವ್
|

Updated on: Jun 23, 2024 | 2:40 PM

Share

ಎರಡು ಹಸುಗಳ ಕಾದಾಟವು ವ್ಯಕ್ತಿಯೊಬ್ಬನ ಜೀವಕ್ಕೆ ಆಪತ್ತು ತಂದ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ನಡೆದಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು, ಎದುರು ಬದಿಯಿಂದ ಬಸ್​ ಬರುತ್ತಿತ್ತು, ಹಾಗೆಯೇ ಇತ್ತ ಬೈಕ್​ ಒಂದು ಹೋಗುತ್ತಿತ್ತು ಅದೇ ಸಮಯದಲ್ಲಿ ಎರಡು ಹಸುಗಳು ಕಾದಾಟಕ್ಕಿಳಿದಿದ್ದವು, ಏಕಾಏಕಿ ಒಂದು ಹಸು ಮತ್ತೊಂದು ಹಸುವನ್ನು ತಿವಿದಿದ್ದು ಆ ಹಸು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಆಯತಪ್ಪಿ ಬಿದ್ದು ಬಸ್​ನ ಚಕ್ರದಡಿ ಸಿಲುಕಿರುವ ಘಟನೆ ಇದಾಗಿದೆ.

ತಮಿಳುನಾಡಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಉದ್ಯೋಗಿಯಾಗಿರುವ ವೇಲಾಯುಧರಾಜ್ ಅವರು ತಮ್ಮ ಮೋಟಾರ್ ಸೈಕಲ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು, ಇದೆಲ್ಲವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದು ಹಸು ಅವರ ಎದುರೇ ಹೋಗುತ್ತಿರುತ್ತದೆ, ಬಲ ಭಾಗದಿಂದ ಮತ್ತೊಂದು ಹಸು ಬಂದು ಆ ಹಸುವಿಗೆ ಡಿಕ್ಕಿ ಹೊಡೆದಿದೆ, ಆ ಹಸು ಬೈಕ್​ ಸವಾರನ ಮೇಲೆ ಬಿದ್ದಿತ್ತು.

ಬೈಕ್​ ಸವಾರನ ಮೇಲೆ ಬಸ್​ ಹರಿಯುತ್ತಿದ್ದಂತೆ ಕೂಡಲೇ ಚಾಲಕ ಹಾಗೂ ಎಲ್ಲರೂ ಅವರ ಬಳಿ ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಪೊಲೀಸ್‌ನ ಸಂಚಾರ ತನಿಖಾ ವಿಭಾಗದ ಅಧಿಕಾರಿಗಳ ತಂಡವು ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿತು.

ಅವರು ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಪಳಯಂಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಘಟನೆಯಲ್ಲಿ ಎರಡೂ ಹಸುವಿಗೆ ಯಾವುದೇ ಅಪಾಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ