AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸವಾರನ ಜೀವಕ್ಕೆ ಕುತ್ತು ತಂದ ಎರಡು ಹಸುಗಳ ಕಾದಾಟ

ರಸ್ತೆಯಲ್ಲಿ ಎರಡು ಹಸುಗಳ ನಡುವೆ ನಡೆದ ಕಾದಾಟವು ವ್ಯಕ್ತಿಯ ಜೀವವನ್ನೇ ತೆಗೆದಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು, ಎದುರು ಬದಿಯಿಂದ ಬಸ್​ ಬರುತ್ತಿತ್ತು, ಹಾಗೆಯೇ ಇತ್ತ ಬೈಕ್​ ಒಂದು ಹೋಗುತ್ತಿತ್ತು ಅದೇ ಸಮಯದಲ್ಲಿ ಎರಡು ಹಸುಗಳು ಕಾದಾಟಕ್ಕಿಳಿದಿದ್ದವು, ಏಕಾಏಕಿ ಒಂದು ಹಸು ಮತ್ತೊಂದು ಹಸುವನ್ನು ತಿವಿದಿದ್ದು ಆ ಹಸು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಆಯತಪ್ಪಿ ಬಿದ್ದು ಬಸ್​ನ ಚಕ್ರದಡಿ ಸಿಲುಕಿರುವ ಘಟನೆ ಇದಾಗಿದೆ.

ಬೈಕ್​ ಸವಾರನ ಜೀವಕ್ಕೆ ಕುತ್ತು ತಂದ ಎರಡು ಹಸುಗಳ ಕಾದಾಟ
ಸಾವು
ನಯನಾ ರಾಜೀವ್
|

Updated on: Jun 23, 2024 | 2:40 PM

Share

ಎರಡು ಹಸುಗಳ ಕಾದಾಟವು ವ್ಯಕ್ತಿಯೊಬ್ಬನ ಜೀವಕ್ಕೆ ಆಪತ್ತು ತಂದ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ನಡೆದಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು, ಎದುರು ಬದಿಯಿಂದ ಬಸ್​ ಬರುತ್ತಿತ್ತು, ಹಾಗೆಯೇ ಇತ್ತ ಬೈಕ್​ ಒಂದು ಹೋಗುತ್ತಿತ್ತು ಅದೇ ಸಮಯದಲ್ಲಿ ಎರಡು ಹಸುಗಳು ಕಾದಾಟಕ್ಕಿಳಿದಿದ್ದವು, ಏಕಾಏಕಿ ಒಂದು ಹಸು ಮತ್ತೊಂದು ಹಸುವನ್ನು ತಿವಿದಿದ್ದು ಆ ಹಸು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಆಯತಪ್ಪಿ ಬಿದ್ದು ಬಸ್​ನ ಚಕ್ರದಡಿ ಸಿಲುಕಿರುವ ಘಟನೆ ಇದಾಗಿದೆ.

ತಮಿಳುನಾಡಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಉದ್ಯೋಗಿಯಾಗಿರುವ ವೇಲಾಯುಧರಾಜ್ ಅವರು ತಮ್ಮ ಮೋಟಾರ್ ಸೈಕಲ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು, ಇದೆಲ್ಲವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದು ಹಸು ಅವರ ಎದುರೇ ಹೋಗುತ್ತಿರುತ್ತದೆ, ಬಲ ಭಾಗದಿಂದ ಮತ್ತೊಂದು ಹಸು ಬಂದು ಆ ಹಸುವಿಗೆ ಡಿಕ್ಕಿ ಹೊಡೆದಿದೆ, ಆ ಹಸು ಬೈಕ್​ ಸವಾರನ ಮೇಲೆ ಬಿದ್ದಿತ್ತು.

ಬೈಕ್​ ಸವಾರನ ಮೇಲೆ ಬಸ್​ ಹರಿಯುತ್ತಿದ್ದಂತೆ ಕೂಡಲೇ ಚಾಲಕ ಹಾಗೂ ಎಲ್ಲರೂ ಅವರ ಬಳಿ ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಪೊಲೀಸ್‌ನ ಸಂಚಾರ ತನಿಖಾ ವಿಭಾಗದ ಅಧಿಕಾರಿಗಳ ತಂಡವು ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿತು.

ಅವರು ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಪಳಯಂಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಘಟನೆಯಲ್ಲಿ ಎರಡೂ ಹಸುವಿಗೆ ಯಾವುದೇ ಅಪಾಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸಾಯೋವರೆಗೆ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
‘ಸಾಯೋವರೆಗೆ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ
ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ
ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ
ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ