AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸವಾರನ ಜೀವಕ್ಕೆ ಕುತ್ತು ತಂದ ಎರಡು ಹಸುಗಳ ಕಾದಾಟ

ರಸ್ತೆಯಲ್ಲಿ ಎರಡು ಹಸುಗಳ ನಡುವೆ ನಡೆದ ಕಾದಾಟವು ವ್ಯಕ್ತಿಯ ಜೀವವನ್ನೇ ತೆಗೆದಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು, ಎದುರು ಬದಿಯಿಂದ ಬಸ್​ ಬರುತ್ತಿತ್ತು, ಹಾಗೆಯೇ ಇತ್ತ ಬೈಕ್​ ಒಂದು ಹೋಗುತ್ತಿತ್ತು ಅದೇ ಸಮಯದಲ್ಲಿ ಎರಡು ಹಸುಗಳು ಕಾದಾಟಕ್ಕಿಳಿದಿದ್ದವು, ಏಕಾಏಕಿ ಒಂದು ಹಸು ಮತ್ತೊಂದು ಹಸುವನ್ನು ತಿವಿದಿದ್ದು ಆ ಹಸು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಆಯತಪ್ಪಿ ಬಿದ್ದು ಬಸ್​ನ ಚಕ್ರದಡಿ ಸಿಲುಕಿರುವ ಘಟನೆ ಇದಾಗಿದೆ.

ಬೈಕ್​ ಸವಾರನ ಜೀವಕ್ಕೆ ಕುತ್ತು ತಂದ ಎರಡು ಹಸುಗಳ ಕಾದಾಟ
ಸಾವು
ನಯನಾ ರಾಜೀವ್
|

Updated on: Jun 23, 2024 | 2:40 PM

Share

ಎರಡು ಹಸುಗಳ ಕಾದಾಟವು ವ್ಯಕ್ತಿಯೊಬ್ಬನ ಜೀವಕ್ಕೆ ಆಪತ್ತು ತಂದ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ನಡೆದಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು, ಎದುರು ಬದಿಯಿಂದ ಬಸ್​ ಬರುತ್ತಿತ್ತು, ಹಾಗೆಯೇ ಇತ್ತ ಬೈಕ್​ ಒಂದು ಹೋಗುತ್ತಿತ್ತು ಅದೇ ಸಮಯದಲ್ಲಿ ಎರಡು ಹಸುಗಳು ಕಾದಾಟಕ್ಕಿಳಿದಿದ್ದವು, ಏಕಾಏಕಿ ಒಂದು ಹಸು ಮತ್ತೊಂದು ಹಸುವನ್ನು ತಿವಿದಿದ್ದು ಆ ಹಸು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಆಯತಪ್ಪಿ ಬಿದ್ದು ಬಸ್​ನ ಚಕ್ರದಡಿ ಸಿಲುಕಿರುವ ಘಟನೆ ಇದಾಗಿದೆ.

ತಮಿಳುನಾಡಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಉದ್ಯೋಗಿಯಾಗಿರುವ ವೇಲಾಯುಧರಾಜ್ ಅವರು ತಮ್ಮ ಮೋಟಾರ್ ಸೈಕಲ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು, ಇದೆಲ್ಲವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದು ಹಸು ಅವರ ಎದುರೇ ಹೋಗುತ್ತಿರುತ್ತದೆ, ಬಲ ಭಾಗದಿಂದ ಮತ್ತೊಂದು ಹಸು ಬಂದು ಆ ಹಸುವಿಗೆ ಡಿಕ್ಕಿ ಹೊಡೆದಿದೆ, ಆ ಹಸು ಬೈಕ್​ ಸವಾರನ ಮೇಲೆ ಬಿದ್ದಿತ್ತು.

ಬೈಕ್​ ಸವಾರನ ಮೇಲೆ ಬಸ್​ ಹರಿಯುತ್ತಿದ್ದಂತೆ ಕೂಡಲೇ ಚಾಲಕ ಹಾಗೂ ಎಲ್ಲರೂ ಅವರ ಬಳಿ ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಪೊಲೀಸ್‌ನ ಸಂಚಾರ ತನಿಖಾ ವಿಭಾಗದ ಅಧಿಕಾರಿಗಳ ತಂಡವು ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿತು.

ಅವರು ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಪಳಯಂಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಘಟನೆಯಲ್ಲಿ ಎರಡೂ ಹಸುವಿಗೆ ಯಾವುದೇ ಅಪಾಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ