AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಗೆದ್ದ ಖುಷಿಗೆ ದೇಗುಲದ ಮುಂದೆ ಪ್ರಾಣತ್ಯಾಗ ಮಾಡಿದ ಅಭಿಮಾನಿ!

ಶುಕ್ರವಾರ ಆಷಾಡ ಅಮಾವಾಸ್ಯೆ ಆಗಿದ್ದರಿಂದ ಅದೇ ದಿನ ತಮ್ಮ ಹರಕೆ ತೀರಿಸಬೇಕೆಂದು ಉಳಗನಾಥನ್ ಕಾಯುತ್ತಿದ್ದರು. ಅದರಂತೆ, ನಿನ್ನೆ ಮುಂಜಾನೆ ಸ್ನಾನ ಮಾಡಿ, ದೇವರಿಗೆ ನಮಸ್ಕರಿಸಿ, ದೇವಸ್ಥಾನದ ಎದುರು ಬೆಂಕಿಗೆ ಆಹುತಿಯಾಗಿದ್ದಾರೆ.

Tamil Nadu: ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಗೆದ್ದ ಖುಷಿಗೆ ದೇಗುಲದ ಮುಂದೆ ಪ್ರಾಣತ್ಯಾಗ ಮಾಡಿದ ಅಭಿಮಾನಿ!
ಸಂಗ್ರಹ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Jul 10, 2021 | 12:02 PM

Share

ಚೆನ್ನೈ: ತಮ್ಮ ಮೆಚ್ಚಿನ ನಾಯಕ ಚುನಾವಣೆಯಲ್ಲಿ ಗೆದ್ದು ಬರಲಿ ಎಂದು ಹೋಮ, ಹವನಗಳನ್ನು ಮಾಡುವವರಿದ್ದಾರೆ, ತಮ್ಮ ಫೇವರೆಟ್ ಕ್ರಿಕೆಟ್ ತಂಡ ಜಯಭೇರಿ ಬಾರಿಸಲಿ ಎಂದು ಏನೇನೋ ಹರಕೆಗಳನ್ನು ಕಟ್ಟಿಕೊಳ್ಳುವ ಅಭಿಮಾನಿಗಳೂ ಇದ್ದಾರೆ. ಆದರೆ, ತಮಿಳುನಾಡಿನಲ್ಲಿ ಒಬ್ಬ ವ್ಯಕ್ತಿ ಈ ಬಾರಿ ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದರೆ ತನ್ನನ್ನೇ ದೇವರಿಗೆ ಬಲಿ ಕೊಡುತ್ತೇನೆ ಎಂದು ಹರಕೆ ಕಟ್ಟಿಕೊಂಡಿದ್ದರು. ಕಾಕತಾಳೀಯ ಎಂಬಂತೆ ಈ ಬಾರಿ ಡಿಎಂಕೆ ಪಕ್ಷ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತು. ಹೀಗಾಗಿ, ಆ ಅಭಿಮಾನಿ ನಿನ್ನೆ ದೇವರಿಗೆ ಹೇಳಿಕೊಂಡಿದ್ದ ಹರಕೆಯನ್ನು ತೀರಿಸಿದ್ದಾರೆ. ದೇವಸ್ಥಾನದ ಮುಂದೆ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ!

ಹೌದು, ತಮಿಳುನಾಡಿನ ಕರೂರು ಜಿಲ್ಲೆಯ ದೇವಸ್ಥಾನವೊಂದರ ಎದುರು ಶುಕ್ರವಾರ ನಸುಕಿನ ಜಾವ ವ್ಯಕ್ತಿಯೊಬ್ಬರು ಜೀವಂತ ದಹನವಾಗಿದ್ದಾರೆ. ದೇಗುಲದ ಎದುರು ಬೆಂಕಿ ಹೊತ್ತಿ ಉರಿಯುತ್ತಿದ್ದುದನ್ನು ಕಂಡ ಊರಿನವರು ಆ ಸ್ಥಳಕ್ಕೆ ಬಂದು ನೋಡುವಷ್ಟರಲ್ಲಿ ಆ ವ್ಯಕ್ತಿಯ ಶರೀರ ಬೆಂಕಿಯಲ್ಲಿ ಬೆಂದು ಹೋಗಿತ್ತು. ಡಿಎಂಕೆ ಪಕ್ಷದ ಅಭಿಮಾನಿಯಾಗಿದ್ದ 60 ವರ್ಷದ ಉಳಗನಾಥನ್ ಎಂಬುವವರು ದೇವಸ್ಥಾನದ ಮುಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ವ್ಯಕ್ತಿ.

ಈ ವರ್ಷ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಸ್ಥಳೀಯ ಅಭ್ಯರ್ಥಿ ಸೆಂಥಿಲ್ ಬಾಲಾಜಿ ಗೆದ್ದು, ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದರೆ ಪ್ರಾಣತ್ಯಾಗ ಮಾಡುವುದಾಗಿ ಉಳಗನಾಥನ್ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈ ಬಾರಿ ಡಿಎಂಕೆ ಪಕ್ಷ ಗೆದ್ದು, ಎಂ.ಕೆ. ಸ್ಟಾಲಿನ್ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ್ದರು. ತನ್ನ ಬೇಡಿಕೆಗೆ ದೇವರು ತಥಾಸ್ತು ಎಂದಿದ್ದಾನೆ ಎಂದು ಖುಷಿ ಪಟ್ಟ ಉಳಗನಾಥನ್​ಗೆ ಈ ಹಿಂದೆ ದೇವರಿಗೆ ಕಟ್ಟಿಕೊಂಡಿದ್ದ ಹರಕೆ ನೆನಪಾಗಿತ್ತು. ಹೀಗಾಗಿ, ಶುಕ್ರವಾರ ಮುಂಜಾನೆ ದೇವಸ್ಥಾನಕ್ಕೆ ಹೋದ ಉಳಗನಾಥನ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಜೀವವನ್ನೇ ಬಲಿ ಕೊಟ್ಟಿದ್ದಾರೆ.

ದೇವಸ್ಥಾನದ ಕಟ್ಟೆಯ ಮೇಲೆ ಇಟ್ಟಿದ್ದ ಸೂಸೈಡ್ ನೋಟ್​ನಿಂದಾಗಿ ಉಳಗನಾಥನ್ ಅವರ ಸಾವಿನ ಕಾರಣ ಬಯಲಾಗಿದೆ. 60 ವರ್ಷದ ಉಳಗನಾಥನ್ ಇತ್ತೀಚೆಗಷ್ಟೆ ಸರ್ಕಾರಿ ಉದ್ಯೋಗದಿಂದ ನಿವೃತ್ತರಾಗಿದ್ದರು. ಡಿಎಂಕೆ ಪಕ್ಷದ ಪಕ್ಕಾ ಅಭಿಮಾನಿಯಾಗಿದ್ದ ಅವರು ಸ್ಥಳೀಯ ನಾಯಕ ಸೆಂಥಿಲ್ ಬಾಲಾಜಿ ಪರವಾಗಿ ಪ್ರಚಾರವನ್ನೂ ಮಾಡಿದ್ದರು. ಚುನಾವಣೆಯಲ್ಲಿ ಸೆಂಥಿಲ್ ದಿಗ್ವಿಜಯ ಸಾಧಿಸಿದ್ದರು. ಶುಕ್ರವಾರ ಆಷಾಡ ಅಮಾವಾಸ್ಯೆ ಆಗಿದ್ದರಿಂದ ಅದೇ ದಿನ ತಮ್ಮ ಹರಕೆ ತೀರಿಸಬೇಕೆಂದು ಉಳಗನಾಥನ್ ಕಾಯುತ್ತಿದ್ದರು. ಅದರಂತೆ, ನಿನ್ನೆ ಮುಂಜಾನೆ ಸ್ನಾನ ಮಾಡಿ, ದೇವರಿಗೆ ನಮಸ್ಕರಿಸಿ, ದೇವಸ್ಥಾನದ ಎದುರು ಬೆಂಕಿಗೆ ಆಹುತಿಯಾಗಿದ್ದಾರೆ.

ಕರೂರು ಪೊಲೀಸರು ಸೂಸೈಡ್ ನೋಟ್ ಅನ್ನು ವಶಕ್ಕೆ ಪಡೆದಿದ್ದು, ಈ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಚುನಾವಣೆಗೂ ಮುನ್ನ ನೀಡಿದ ಭರವಸೆಗಳನ್ನೆಲ್ಲ ಗಾಳಿ ತೂರುವ ರಾಜಕಾರಣಿಗಳ ನಡುವೆ ಒಂದು ಪಕ್ಷಕ್ಕಾಗಿ ತನ್ನ ಪ್ರಾಣವನ್ನೇ ಬಲಿ ಕೊಟ್ಟ ಕಾರ್ಯಕರ್ತನ ವರ್ತನೆ ಅಚ್ಚರಿ ಮತ್ತು ಆಘಾತಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ: ಜುಲೈ 12 ರಂದು ಸರ್ವಪಕ್ಷ ಸಭೆಗೆ ಕರೆ ನೀಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

ಇದನ್ನೂ ಓದಿ: K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

Published On - 11:46 am, Sat, 10 July 21

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ