AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​ಕ್ರೀಂ ತಿನ್ನಿಸಲು ಮೂವರು ಮಕ್ಕಳನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ, ಪಿಕ್​ಅಪ್​ ವ್ಯಾನ್ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ಮಕ್ಕಳಿಗೆ ಐಸ್​ಕ್ರೀಂ ಕೊಡಿಸಬೇಕೆಂದು ಬೈಕ್​ನಲ್ಲಿ ಕೂರಿಸಿಕೊಂಡು ಹೋಗುತ್ತಿರುವಾಗ ಪಿಕ್​ಅಪ್​ ವ್ಯಾನ್​ ಗುದ್ದಿ ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನಲ್ಲಿ ರಸ್ತೆಯ ಎದುರುಗಡೆಯಿಂದ ವೇಗವಾಗಿ ಬಂದ ಪಿಕಪ್ ವ್ಯಾನ್ ಅವರ ಮೇಲೆ ಹರಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಐಸ್​ಕ್ರೀಂ ತಿನ್ನಿಸಲು ಮೂವರು ಮಕ್ಕಳನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ, ಪಿಕ್​ಅಪ್​ ವ್ಯಾನ್ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ
ಅಪಘಾತImage Credit source: India Today
ನಯನಾ ರಾಜೀವ್
|

Updated on:Aug 21, 2023 | 8:48 AM

Share

ಮಕ್ಕಳಿಗೆ ಐಸ್​ಕ್ರೀಂ ಕೊಡಿಸಬೇಕೆಂದು ಬೈಕ್​ನಲ್ಲಿ ಕೂರಿಸಿಕೊಂಡು ಹೋಗುತ್ತಿರುವಾಗ ಪಿಕ್​ಅಪ್​ ವ್ಯಾನ್​ ಗುದ್ದಿ ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನಲ್ಲಿ ರಸ್ತೆಯ ಎದುರುಗಡೆಯಿಂದ ವೇಗವಾಗಿ ಬಂದ ಪಿಕಪ್ ವ್ಯಾನ್ ಅವರ ಮೇಲೆ ಹರಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಐಸ್​ಕ್ರೈಂ ಶಾಪ್ ಎದುರು ಬೈಕ್ ನಿಲ್ಲಿಸಿ ಇಬ್ಬರು ಮಕ್ಕಳು ಇಳಿದಿದ್ದಾರೆ, ಇನ್ನಿಬ್ಬರು ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಪಿಕ್ ಅಪ್ ವ್ಯಾನ್ ಅವರ ಮೇಲೆ ಹರಿದಿದೆ.

ವಾಹನದ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ, ತಂದೆಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತನ್ನ ಬೈಕ್ ಅನ್ನು ನಿಲ್ಲಿಸುತ್ತಿರುವುದು ಕಂಡುಬಂದಿದೆ. ಅವರನ್ನು ಮೀನಾಕ್ಷಿ ಆಸ್ಪತ್ರೆ ಬಳಿಯ ಐಸ್ ಕ್ರೀಮ್ ಪಾರ್ಲರ್​ಗೆ ಕರೆದುಕೊಂಡು ಹೋಗಬೇಕಿತ್ತು.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು ಚಾಲಕ, ಇಬ್ಬರು ಸಾವು

ಅವರು ತಮ್ಮ ಮಕ್ಕಳನ್ನು ಬೈಕ್‌ನಿಂದ ಇಳಿಸಲು ಸಹಾಯ ಮಾಡುತ್ತಿದ್ದಾಗ, ಮೆಟ್ಟುಪಾಳ್ಯಂನಿಂದ ಕರಾಮಡೈ ಕಡೆಗೆ ವೇಗವಾಗಿ ಬಂದ ಪಿಕಪ್ ವ್ಯಾನ್ ರಸ್ತೆಯ ಎದುರು ಬದಿಗೆ ನುಗ್ಗಿ ಟ್ರಾಫಿಕ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಘರ್ಷಣೆಯ ನಂತರ, ಹಲವಾರು ದಾರಿಹೋಕರು ಸಂತ್ರಸ್ತರಿಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು ಮತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:47 am, Mon, 21 August 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್