AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​ಕ್ರೀಂ ತಿನ್ನಿಸಲು ಮೂವರು ಮಕ್ಕಳನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ, ಪಿಕ್​ಅಪ್​ ವ್ಯಾನ್ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ಮಕ್ಕಳಿಗೆ ಐಸ್​ಕ್ರೀಂ ಕೊಡಿಸಬೇಕೆಂದು ಬೈಕ್​ನಲ್ಲಿ ಕೂರಿಸಿಕೊಂಡು ಹೋಗುತ್ತಿರುವಾಗ ಪಿಕ್​ಅಪ್​ ವ್ಯಾನ್​ ಗುದ್ದಿ ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನಲ್ಲಿ ರಸ್ತೆಯ ಎದುರುಗಡೆಯಿಂದ ವೇಗವಾಗಿ ಬಂದ ಪಿಕಪ್ ವ್ಯಾನ್ ಅವರ ಮೇಲೆ ಹರಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಐಸ್​ಕ್ರೀಂ ತಿನ್ನಿಸಲು ಮೂವರು ಮಕ್ಕಳನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ, ಪಿಕ್​ಅಪ್​ ವ್ಯಾನ್ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ
ಅಪಘಾತImage Credit source: India Today
ನಯನಾ ರಾಜೀವ್
|

Updated on:Aug 21, 2023 | 8:48 AM

Share

ಮಕ್ಕಳಿಗೆ ಐಸ್​ಕ್ರೀಂ ಕೊಡಿಸಬೇಕೆಂದು ಬೈಕ್​ನಲ್ಲಿ ಕೂರಿಸಿಕೊಂಡು ಹೋಗುತ್ತಿರುವಾಗ ಪಿಕ್​ಅಪ್​ ವ್ಯಾನ್​ ಗುದ್ದಿ ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನಲ್ಲಿ ರಸ್ತೆಯ ಎದುರುಗಡೆಯಿಂದ ವೇಗವಾಗಿ ಬಂದ ಪಿಕಪ್ ವ್ಯಾನ್ ಅವರ ಮೇಲೆ ಹರಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಐಸ್​ಕ್ರೈಂ ಶಾಪ್ ಎದುರು ಬೈಕ್ ನಿಲ್ಲಿಸಿ ಇಬ್ಬರು ಮಕ್ಕಳು ಇಳಿದಿದ್ದಾರೆ, ಇನ್ನಿಬ್ಬರು ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಪಿಕ್ ಅಪ್ ವ್ಯಾನ್ ಅವರ ಮೇಲೆ ಹರಿದಿದೆ.

ವಾಹನದ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ, ತಂದೆಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತನ್ನ ಬೈಕ್ ಅನ್ನು ನಿಲ್ಲಿಸುತ್ತಿರುವುದು ಕಂಡುಬಂದಿದೆ. ಅವರನ್ನು ಮೀನಾಕ್ಷಿ ಆಸ್ಪತ್ರೆ ಬಳಿಯ ಐಸ್ ಕ್ರೀಮ್ ಪಾರ್ಲರ್​ಗೆ ಕರೆದುಕೊಂಡು ಹೋಗಬೇಕಿತ್ತು.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು ಚಾಲಕ, ಇಬ್ಬರು ಸಾವು

ಅವರು ತಮ್ಮ ಮಕ್ಕಳನ್ನು ಬೈಕ್‌ನಿಂದ ಇಳಿಸಲು ಸಹಾಯ ಮಾಡುತ್ತಿದ್ದಾಗ, ಮೆಟ್ಟುಪಾಳ್ಯಂನಿಂದ ಕರಾಮಡೈ ಕಡೆಗೆ ವೇಗವಾಗಿ ಬಂದ ಪಿಕಪ್ ವ್ಯಾನ್ ರಸ್ತೆಯ ಎದುರು ಬದಿಗೆ ನುಗ್ಗಿ ಟ್ರಾಫಿಕ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಘರ್ಷಣೆಯ ನಂತರ, ಹಲವಾರು ದಾರಿಹೋಕರು ಸಂತ್ರಸ್ತರಿಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು ಮತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:47 am, Mon, 21 August 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ