Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​ಕ್ರೀಂ ತಿನ್ನಿಸಲು ಮೂವರು ಮಕ್ಕಳನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ, ಪಿಕ್​ಅಪ್​ ವ್ಯಾನ್ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ಮಕ್ಕಳಿಗೆ ಐಸ್​ಕ್ರೀಂ ಕೊಡಿಸಬೇಕೆಂದು ಬೈಕ್​ನಲ್ಲಿ ಕೂರಿಸಿಕೊಂಡು ಹೋಗುತ್ತಿರುವಾಗ ಪಿಕ್​ಅಪ್​ ವ್ಯಾನ್​ ಗುದ್ದಿ ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನಲ್ಲಿ ರಸ್ತೆಯ ಎದುರುಗಡೆಯಿಂದ ವೇಗವಾಗಿ ಬಂದ ಪಿಕಪ್ ವ್ಯಾನ್ ಅವರ ಮೇಲೆ ಹರಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಐಸ್​ಕ್ರೀಂ ತಿನ್ನಿಸಲು ಮೂವರು ಮಕ್ಕಳನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ, ಪಿಕ್​ಅಪ್​ ವ್ಯಾನ್ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ
ಅಪಘಾತImage Credit source: India Today
Follow us
ನಯನಾ ರಾಜೀವ್
|

Updated on:Aug 21, 2023 | 8:48 AM

ಮಕ್ಕಳಿಗೆ ಐಸ್​ಕ್ರೀಂ ಕೊಡಿಸಬೇಕೆಂದು ಬೈಕ್​ನಲ್ಲಿ ಕೂರಿಸಿಕೊಂಡು ಹೋಗುತ್ತಿರುವಾಗ ಪಿಕ್​ಅಪ್​ ವ್ಯಾನ್​ ಗುದ್ದಿ ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನಲ್ಲಿ ರಸ್ತೆಯ ಎದುರುಗಡೆಯಿಂದ ವೇಗವಾಗಿ ಬಂದ ಪಿಕಪ್ ವ್ಯಾನ್ ಅವರ ಮೇಲೆ ಹರಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಐಸ್​ಕ್ರೈಂ ಶಾಪ್ ಎದುರು ಬೈಕ್ ನಿಲ್ಲಿಸಿ ಇಬ್ಬರು ಮಕ್ಕಳು ಇಳಿದಿದ್ದಾರೆ, ಇನ್ನಿಬ್ಬರು ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಪಿಕ್ ಅಪ್ ವ್ಯಾನ್ ಅವರ ಮೇಲೆ ಹರಿದಿದೆ.

ವಾಹನದ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ, ತಂದೆಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತನ್ನ ಬೈಕ್ ಅನ್ನು ನಿಲ್ಲಿಸುತ್ತಿರುವುದು ಕಂಡುಬಂದಿದೆ. ಅವರನ್ನು ಮೀನಾಕ್ಷಿ ಆಸ್ಪತ್ರೆ ಬಳಿಯ ಐಸ್ ಕ್ರೀಮ್ ಪಾರ್ಲರ್​ಗೆ ಕರೆದುಕೊಂಡು ಹೋಗಬೇಕಿತ್ತು.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು ಚಾಲಕ, ಇಬ್ಬರು ಸಾವು

ಅವರು ತಮ್ಮ ಮಕ್ಕಳನ್ನು ಬೈಕ್‌ನಿಂದ ಇಳಿಸಲು ಸಹಾಯ ಮಾಡುತ್ತಿದ್ದಾಗ, ಮೆಟ್ಟುಪಾಳ್ಯಂನಿಂದ ಕರಾಮಡೈ ಕಡೆಗೆ ವೇಗವಾಗಿ ಬಂದ ಪಿಕಪ್ ವ್ಯಾನ್ ರಸ್ತೆಯ ಎದುರು ಬದಿಗೆ ನುಗ್ಗಿ ಟ್ರಾಫಿಕ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಘರ್ಷಣೆಯ ನಂತರ, ಹಲವಾರು ದಾರಿಹೋಕರು ಸಂತ್ರಸ್ತರಿಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು ಮತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:47 am, Mon, 21 August 23

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ