AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Senthil Balaji: ಇಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು

ಎಐಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ನೇಮಕಾತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ  ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರೂರ್ ಶಾಸಕ ವಿ ಸೆಂಥಿಲ್ ಬಾಲಾಜಿ ಅವರು ದಿವಂಗತ ಜಯಲಲಿತಾ ಅವರ 2011-2016 ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದರು.

Senthil Balaji: ಇಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು
ಸೆಂಥಿಲ್ ಬಾಲಾಜಿImage Credit source: India Today
ನಯನಾ ರಾಜೀವ್
|

Updated on: Oct 09, 2023 | 9:50 AM

Share

ಎಐಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ನೇಮಕಾತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ(Senthil Balaji)  ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರೂರ್ ಶಾಸಕ ವಿ ಸೆಂಥಿಲ್ ಬಾಲಾಜಿ ಅವರು ದಿವಂಗತ ಜಯಲಲಿತಾ ಅವರ 2011-2016 ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದರು.

2014ರ ಮೇ ತಿಂಗಳಲ್ಲಿ ಸೆಂಥಿಲ್ ಬಾಲಾಜಿ ವಿರುದ್ಧ ಸಾರಿಗೆ ಇಲಾಖೆಯಲ್ಲಿ ಚಾಲಕರು, ಕಂಡಕ್ಟರ್‌ಗಳು ಮತ್ತು ಇಂಜಿನಿಯರ್‌ಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಭ್ರಷ್ಟಾಚಾರದ ದೂರುಗಳು ಕೇಳಿಬಂದಿತ್ತು. ಸರ್ಕಾರಿ ನೌಕರಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದರೂ ನೇಮಕಾತಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಂಧಿಸಿದ ಬಳಿಕ ಜೈಲಿನಲ್ಲಿ ಇರಿಸಲಾಗಿದೆ. ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿಯನ್ನು ಬಂಧಿಸಿದ ಸಂಸ್ಥೆ, ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಕೂಡ ಬಾಲಾಜಿ ಅವರನ್ನು ಸ್ಥಳಾಂತರಿಸಲು ಅನುಮತಿ ನೀಡಿತ್ತು.

ಮತ್ತಷ್ಟು ಓದಿ: ರಾಜ್ಯಪಾಲರಿಂದ ಏಕಪಕ್ಷೀಯ ನಿರ್ಧಾರ: ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಸಚಿವ ಸಂಪುಟದಿಂದ ವಜಾ

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ಕಚೇರಿಯ ನಡುವೆ ಹಲವಾರು ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳಿದ್ದು ಆಗಾಗ್ಗೆ ಜಗಳ ನಡೆಯುತ್ತಲೇ ಇದೆ. ರಾಜ್ಯಪಾಲ ರವಿ ಅವರ ಅಸಾಂವಿಧಾನಿಕ ನಡವಳಿಕೆ ಮತ್ತು ಅಸೆಂಬ್ಲಿ ಅಂಗೀಕರಿಸಿದ ಗಣನೀಯ ಸಂಖ್ಯೆಯ ಮಸೂದೆಗಳಿಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಡಿಎಂಕೆ ಕಳೆದ ವರ್ಷ ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ