Senthil Balaji: ಇಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು

ಎಐಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ನೇಮಕಾತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ  ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರೂರ್ ಶಾಸಕ ವಿ ಸೆಂಥಿಲ್ ಬಾಲಾಜಿ ಅವರು ದಿವಂಗತ ಜಯಲಲಿತಾ ಅವರ 2011-2016 ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದರು.

Senthil Balaji: ಇಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು
ಸೆಂಥಿಲ್ ಬಾಲಾಜಿ
Image Credit source: India Today

Updated on: Oct 09, 2023 | 9:50 AM

ಎಐಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ನೇಮಕಾತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ(Senthil Balaji)  ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರೂರ್ ಶಾಸಕ ವಿ ಸೆಂಥಿಲ್ ಬಾಲಾಜಿ ಅವರು ದಿವಂಗತ ಜಯಲಲಿತಾ ಅವರ 2011-2016 ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದರು.

2014ರ ಮೇ ತಿಂಗಳಲ್ಲಿ ಸೆಂಥಿಲ್ ಬಾಲಾಜಿ ವಿರುದ್ಧ ಸಾರಿಗೆ ಇಲಾಖೆಯಲ್ಲಿ ಚಾಲಕರು, ಕಂಡಕ್ಟರ್‌ಗಳು ಮತ್ತು ಇಂಜಿನಿಯರ್‌ಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಭ್ರಷ್ಟಾಚಾರದ ದೂರುಗಳು ಕೇಳಿಬಂದಿತ್ತು. ಸರ್ಕಾರಿ ನೌಕರಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದರೂ ನೇಮಕಾತಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಂಧಿಸಿದ ಬಳಿಕ ಜೈಲಿನಲ್ಲಿ ಇರಿಸಲಾಗಿದೆ. ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿಯನ್ನು ಬಂಧಿಸಿದ ಸಂಸ್ಥೆ, ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಕೂಡ ಬಾಲಾಜಿ ಅವರನ್ನು ಸ್ಥಳಾಂತರಿಸಲು ಅನುಮತಿ ನೀಡಿತ್ತು.

ಮತ್ತಷ್ಟು ಓದಿ: ರಾಜ್ಯಪಾಲರಿಂದ ಏಕಪಕ್ಷೀಯ ನಿರ್ಧಾರ: ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಸಚಿವ ಸಂಪುಟದಿಂದ ವಜಾ

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ಕಚೇರಿಯ ನಡುವೆ ಹಲವಾರು ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳಿದ್ದು ಆಗಾಗ್ಗೆ ಜಗಳ ನಡೆಯುತ್ತಲೇ ಇದೆ. ರಾಜ್ಯಪಾಲ ರವಿ ಅವರ ಅಸಾಂವಿಧಾನಿಕ ನಡವಳಿಕೆ ಮತ್ತು ಅಸೆಂಬ್ಲಿ ಅಂಗೀಕರಿಸಿದ ಗಣನೀಯ ಸಂಖ್ಯೆಯ ಮಸೂದೆಗಳಿಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಡಿಎಂಕೆ ಕಳೆದ ವರ್ಷ ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us