AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಆರ್​ಎನ್ ರವಿ ರಾಜ್ಯಪಾಲ ಹುದ್ದೆಗೆ ಅರ್ಹರಲ್ಲ, ರಾಷ್ಟ್ರಪತಿ ಮುರ್ಮುಗೆ ಪತ್ರ ಬರೆದ ಎಂಕೆ ಸ್ಟಾಲಿನ್

ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ(RN Ravi)) ಅವರ ಕಾರ್ಯವೈಖರಿ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರಿಗೆ ಸಿಎಂ ಎಂಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ.

Tamil Nadu: ಆರ್​ಎನ್ ರವಿ ರಾಜ್ಯಪಾಲ ಹುದ್ದೆಗೆ ಅರ್ಹರಲ್ಲ, ರಾಷ್ಟ್ರಪತಿ ಮುರ್ಮುಗೆ ಪತ್ರ ಬರೆದ ಎಂಕೆ ಸ್ಟಾಲಿನ್
ಎಂಕೆ ಸ್ಟಾಲಿನ್
ನಯನಾ ರಾಜೀವ್
|

Updated on: Jul 10, 2023 | 9:52 AM

Share

ತಮಿಳುನಾಡು ರಾಜ್ಯಪಾಲ ಆರ್​ಎನ್​ ರವಿ(RN Ravi)) ಅವರ ಕಾರ್ಯವೈಖರಿ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರಿಗೆ ಸಿಎಂ ಎಂಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ.  15 ಪುಟಗಳ  ಪತ್ರ ಬರೆದಿದ್ದು, ಇದರಲ್ಲಿ ರಾಜ್ಯಪಾಲ ಆರ್.ಎನ್.ರವಿ ಅವರು ಹೇಳಿದ ಹುದ್ದೆಗೆ ಅರ್ಹರಲ್ಲ ಎಂದು ಹೇಳಿದ್ದಾರೆ. ರಾಜ್ಯಪಾಲರ ಚಟುವಟಿಕೆಗಳು ತಮಿಳುನಾಡಿನ ಜನತೆಯ ವಿರುದ್ಧ ಮತ್ತು ಚುನಾಯಿತ ಸರ್ಕಾರದ ವಿರುದ್ಧವಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ವಿವಿಧ ಚಟುವಟಿಕೆಗಳು ಅವರು ರಾಜ್ಯಪಾಲರಾಗಲು ಯೋಗ್ಯರಲ್ಲ ಎಂಬುದನ್ನು ತೋರಿಸುತ್ತದೆ ಎಂದು ದೂರು ಪತ್ರದಲ್ಲಿ ತಿಳಿಸಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲ ರವಿ ಒಪ್ಪಿಗೆ ನೀಡುವಲ್ಲಿ ಅನಗತ್ಯ ವಿಳಂಬ ಮಾಡುತ್ತಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಎಐಎಡಿಎಂಕೆ ಮಾಜಿ ಸಚಿವರ ಮೇಲಿನ ಪ್ರಕರಣಗಳನ್ನು ತೆರವುಗೊಳಿಸಲು ರಾಜ್ಯಪಾಲರು ಅನುಮತಿ ನೀಡುತ್ತಿಲ್ಲ.

ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರದ ನೀತಿಗಳು ಮತ್ತು ಸಿದ್ಧಾಂತಗಳಿಗೆ ರಾಜ್ಯಪಾಲರು ಶತ್ರುಗಳಂತೆ ವರ್ತಿಸುತ್ತಾರೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ. ರಾಜ್ಯಪಾಲರು ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದಿದ್ದಾರೆ.

V Senthil Balaji: ಸೆಂಥಿಲ್ ಬಾಲಾಜಿ ಬಿಡುಗಡೆ ಕೋರಿ ಅರ್ಜಿ, ಮದ್ರಾಸ್ ಹೈಕೋರ್ಟ್​ನಿಂದ ವಿಭಜಿತ ತೀರ್ಪು

ಚಿದಂಬರಂ ನಟರಾಜ ದೇಗುಲದಲ್ಲಿ ಬಾಲ್ಯವಿವಾಹ ನಡೆದಿಲ್ಲ ಎಂದು ರಾಜ್ಯಪಾಲ ರವಿ ಹೇಳಿದ್ದು, ಬಳಿಕ ಬಾಲ್ಯವಿವಾಹದ ವಿಡಿಯೋವನ್ನು ಬಿಡುಗಡೆ ಮಾಡಿ ರಾಜ್ಯಪಾಲರ ಹೇಳಿಕೆಯನ್ನು ಸುಳ್ಳು ಎಂದು ಬಣ್ಣಿಸಲಾಗಿತ್ತು. ಅದೇ ರೀತಿ ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾ ಮಾಡುವ ಮೂಲಕ ರಾಜ್ಯಪಾಲರು ದೊಡ್ಡ ಪ್ರಮಾಣದಲ್ಲಿ ಸಂವಿಧಾನವನ್ನು ಉಲ್ಲಂಘಿಸಿ ನಂತರ ತಮ್ಮ ನಿರ್ಧಾರವನ್ನು ಮುಂದೂಡಿದರು.

ಜುಲೈ 8 ರಂದು ರಾಜ್ಯಪಾಲ ರವಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾದ ದಿನವೇ ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರು ಪತ್ರ ಬರೆದಿದ್ದರು. ಪತ್ರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ವಿವಿಧ ವಿಷಯಗಳನ್ನು ಸ್ಟಾಲಿನ್ ಉಲ್ಲೇಖಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ