AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವು

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ(A Ganeshamoorthi) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ.

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವು
ಎ ಗಣೇಶಮೂರ್ತಿ
ನಯನಾ ರಾಜೀವ್
|

Updated on: Mar 28, 2024 | 8:44 AM

Share

ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ(A Ganeshamoorthi) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಈರೋಡ್‌ನಿಂದ ಡಿಎಂಕೆ ಟಿಕೆಟ್‌ನಲ್ಲಿ ಆಯ್ಕೆಯಾದ ಗಣೇಶಮೂರ್ತಿ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತ್ತು ಆಸ್ಪತ್ರೆಗೆ ದಾಖಲಿಸಿದ ಬಳಿಕ ಕೀಟನಾಶಕ ಸೇವಿಸಿರುವ ವಿಚಾರ ಬೆಳಕಿಗೆ ಬಂದಿತ್ತು.

ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದೆ ಎಂದು ಹೇಳಿದ್ದಾರೆ.

ಸಚಿವ ಎಸ್.ಮುತ್ತುಸಾಮಿ, ಮೊಡಕುರಿಚಿಯ ಬಿಜೆಪಿ ಶಾಸಕ ಡಾ.ಸಿ.ಸರಸ್ವತಿ, ಎಐಎಡಿಎಂಕೆಯ ಕೆ.ವಿ.ರಾಮಲಿಂಗಂ ಮುಂತಾದ ರಾಜಕೀಯ ಮುಖಂಡರು ಆಸ್ಪತ್ರೆಗೆ ಧಾವಿಸಿ ಗಣೇಶಮೂರ್ತಿ ಅವರ ಆರೋಗ್ಯ ವಿಚಾರಿಸಿದರು. ಅವರ ಈ ನಿರ್ಧಾರಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ತಮಿಳುನಾಡು ಸಂಸದ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 19ರಿಂದ ಆರಂಭವಾಗಿ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಜೂನ್ 4ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ