AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ಸಿಗ್ನಲ್ ಬಾಕ್ಸನ್ನೇ ಒಡೆದು ಹಾಕಿದ ವ್ಯಕ್ತಿ

ಜೂನ್ 2ರಂದು ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತವನ್ನು ಮರೆಯಲು ನಮಗೆ ಇನ್ನೂ ಸಮಯ ಬೇಕಿದೆ. ಈ ನಡುವೆ ಮತ್ತೊಂದು ಸುದ್ದಿ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಗರ್ಲ್​ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ಸಿಗ್ನಲ್ ಬಾಕ್ಸನ್ನೇ ಒಡೆದು ಹಾಕಿದ ವ್ಯಕ್ತಿ
ರೈಲ್ವೆ ಸಿಗ್ನಲ್Image Credit source: India Today
ನಯನಾ ರಾಜೀವ್
|

Updated on:Jun 07, 2023 | 3:33 PM

Share

ಜೂನ್ 2 ರಂದು ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತವನ್ನು ಮರೆಯಲು ನಮಗೆ ಇನ್ನೂ ಸಮಯ ಬೇಕಿದೆ. ಈ ನಡುವೆ ಮತ್ತೊಂದು ಸುದ್ದಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಗರ್ಲ್​ ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ನಿಲ್ದಾಣದ ಸಿಗ್ನಲ್​ ಬಾಕ್ಸ್​ನ್ನೇ ಒಡೆದು ಹಾಕಿದ್ದಾನೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ.

ಮಂಗಳವಾರ ರೈಲ್ವೇ ಅಧಿಕಾರಿಗಳು ತಿರುಪತ್ತೂರಿನಲ್ಲಿ ರೈಲು ಹಳಿಗಳನ್ನು ಪರಿಶೀಲಿಸಿದಾಗ ಸಿಗ್ನಲ್ ಬಾಕ್ಸ್ ಹಾಳಾಗಿರುವುದು ಕಂಡುಬಂದಿದೆ. ರೈಲ್ವೇ ಪೊಲೀಸ್ ಪಡೆ ಸ್ಥಳಕ್ಕಾಗಮಿಸಿದಾಗ ಗೋಕುಲ್ ಕುಡಿದ ಸ್ಥಿತಿಯಲ್ಲಿದ್ದರು.

ಆರ್‌ಪಿಎಫ್ ಮತ್ತು ಸರ್ಕಾರಿ ರೈಲ್ವೇ ಪೊಲೀಸ್‌ನ ಹಿರಿಯ ಅಧಿಕಾರಿಗಳು ಗೋಕುಲ್‌ನನ್ನು ವಿಚಾರಣೆಗೊಳಪಡಿಸಿದರು, ಅವರು ಆರಂಭದಲ್ಲಿ ಸಿಗ್ನಲ್ ಬಾಕ್ಸ್‌ಗೆ ಹಾನಿ ಮಾಡಿರುವುದನ್ನು ನಿರಾಕರಿಸಿದರು ಆದರೆ ನಂತರ ಅವರು ತಮ್ಮ ಗೆಳತಿಯೊಂದಿಗೆ ಜಗಳವಾಡಿದ ನಂತರ ಕೋಪಗೊಂಡಿದ್ದ ಸಂದರ್ಭದಲ್ಲಿ ಈ ರೀತಿ ನಡೆದುಕೊಂಡಿರುವುದಾಗಿ ಬಾಯ್ಬಿಟ್ಟಿದ್ದಾರೆ. ವಿಚಾರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: Breaking News Today Highlights: ಒಡಿಶಾ ರೈಲು ದುರಂತ: ಬೋಗಿಗಳ ತೆರವು ಕಾರ್ಯಾಚರಣೆಗೆ ಮುಂದಾದ ರೈಲ್ವೆ ಇಲಾಖೆ ಸಿಬ್ಬಂದಿ

ಇತ್ತೀಚೆಗೆ ಒಡಿಶಾದಲ್ಲಿ ನಡೆದಿದ್ದ ತ್ರಿವಳಿ ರೈಲು ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಕೇವಲ ಆಸ್ಪತ್ರೆ ಮಾತ್ರವಲ್ಲದೆ ಬಾಲಸೋರ್​ನ ಶಾಲೆಯನ್ನು ಕೂಡ ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಇನ್ನೂ 90 ಕ್ಕೂ ಅಧಿಕ ಮೃತದೇಹಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:32 pm, Wed, 7 June 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ