ಗರ್ಲ್​ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ಸಿಗ್ನಲ್ ಬಾಕ್ಸನ್ನೇ ಒಡೆದು ಹಾಕಿದ ವ್ಯಕ್ತಿ

ಜೂನ್ 2ರಂದು ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತವನ್ನು ಮರೆಯಲು ನಮಗೆ ಇನ್ನೂ ಸಮಯ ಬೇಕಿದೆ. ಈ ನಡುವೆ ಮತ್ತೊಂದು ಸುದ್ದಿ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಗರ್ಲ್​ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ಸಿಗ್ನಲ್ ಬಾಕ್ಸನ್ನೇ ಒಡೆದು ಹಾಕಿದ ವ್ಯಕ್ತಿ
ರೈಲ್ವೆ ಸಿಗ್ನಲ್
Image Credit source: India Today

Updated on: Jun 07, 2023 | 3:33 PM

ಜೂನ್ 2 ರಂದು ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತವನ್ನು ಮರೆಯಲು ನಮಗೆ ಇನ್ನೂ ಸಮಯ ಬೇಕಿದೆ. ಈ ನಡುವೆ ಮತ್ತೊಂದು ಸುದ್ದಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಗರ್ಲ್​ ಫ್ರೆಂಡ್​ ಜತೆ ಜಗಳವಾಡಿ ಕೋಪದಲ್ಲಿ ರೈಲ್ವೆ ನಿಲ್ದಾಣದ ಸಿಗ್ನಲ್​ ಬಾಕ್ಸ್​ನ್ನೇ ಒಡೆದು ಹಾಕಿದ್ದಾನೆ. ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ.

ಮಂಗಳವಾರ ರೈಲ್ವೇ ಅಧಿಕಾರಿಗಳು ತಿರುಪತ್ತೂರಿನಲ್ಲಿ ರೈಲು ಹಳಿಗಳನ್ನು ಪರಿಶೀಲಿಸಿದಾಗ ಸಿಗ್ನಲ್ ಬಾಕ್ಸ್ ಹಾಳಾಗಿರುವುದು ಕಂಡುಬಂದಿದೆ. ರೈಲ್ವೇ ಪೊಲೀಸ್ ಪಡೆ ಸ್ಥಳಕ್ಕಾಗಮಿಸಿದಾಗ ಗೋಕುಲ್ ಕುಡಿದ ಸ್ಥಿತಿಯಲ್ಲಿದ್ದರು.

ಆರ್‌ಪಿಎಫ್ ಮತ್ತು ಸರ್ಕಾರಿ ರೈಲ್ವೇ ಪೊಲೀಸ್‌ನ ಹಿರಿಯ ಅಧಿಕಾರಿಗಳು ಗೋಕುಲ್‌ನನ್ನು ವಿಚಾರಣೆಗೊಳಪಡಿಸಿದರು, ಅವರು ಆರಂಭದಲ್ಲಿ ಸಿಗ್ನಲ್ ಬಾಕ್ಸ್‌ಗೆ ಹಾನಿ ಮಾಡಿರುವುದನ್ನು ನಿರಾಕರಿಸಿದರು ಆದರೆ ನಂತರ ಅವರು ತಮ್ಮ ಗೆಳತಿಯೊಂದಿಗೆ ಜಗಳವಾಡಿದ ನಂತರ ಕೋಪಗೊಂಡಿದ್ದ ಸಂದರ್ಭದಲ್ಲಿ ಈ ರೀತಿ ನಡೆದುಕೊಂಡಿರುವುದಾಗಿ ಬಾಯ್ಬಿಟ್ಟಿದ್ದಾರೆ. ವಿಚಾರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: Breaking News Today Highlights: ಒಡಿಶಾ ರೈಲು ದುರಂತ: ಬೋಗಿಗಳ ತೆರವು ಕಾರ್ಯಾಚರಣೆಗೆ ಮುಂದಾದ ರೈಲ್ವೆ ಇಲಾಖೆ ಸಿಬ್ಬಂದಿ

ಇತ್ತೀಚೆಗೆ ಒಡಿಶಾದಲ್ಲಿ ನಡೆದಿದ್ದ ತ್ರಿವಳಿ ರೈಲು ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಕೇವಲ ಆಸ್ಪತ್ರೆ ಮಾತ್ರವಲ್ಲದೆ ಬಾಲಸೋರ್​ನ ಶಾಲೆಯನ್ನು ಕೂಡ ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಇನ್ನೂ 90 ಕ್ಕೂ ಅಧಿಕ ಮೃತದೇಹಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:32 pm, Wed, 7 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us