AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಎನ್​ಸಿಸಿ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, 9 ಮಂದಿ ಬಂಧನ

ಶಾಲೆಯೊಂದರಲ್ಲಿ ನಡೆದ ಎನ್​ಸಿಸಿ ಶಿಬಿರದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬರ್ಗೂರಿನ ಶಾಲೆಯ ಶಿಬಿರವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಎನ್‌ಟಿಕೆ ಕಾರ್ಯಕರ್ತ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ.

ತಮಿಳುನಾಡು: ಎನ್​ಸಿಸಿ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, 9 ಮಂದಿ ಬಂಧನ
ಬಾಲಕಿ
ನಯನಾ ರಾಜೀವ್
|

Updated on: Aug 19, 2024 | 11:21 AM

Share

ತಮಿಳುನಾಡಿನಲ್ಲಿ ನಡೆದ ಎನ್​ಸಿಸಿ ಶಿಬಿರದಲ್ಲಿ 12 ಮಂದಿ ವಿದ್ಯಾರ್ಥಿನಿಯರಿಗೆ ನೀಡಿದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 13 ವರ್ಷದ ಬಾಲಕಿ ಮೇಲೆ ಎನ್​ಟಿಕೆ ಪಕ್ಷದ ಕಾರ್ಯಕರ್ತ ಶಿವರಾಮನ್​ನನ್ನು ಬಂಧಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬರ್ಗೂರಿನ ಶಾಲೆಯ ಶಿಬಿರವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಎನ್‌ಟಿಕೆ ಕಾರ್ಯಕರ್ತ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ. ಆಗಸ್ಟ್ 9 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳು ಎನ್‌ಸಿಸಿ ಶಿಬಿರದಲ್ಲಿ ಭಾಗವಹಿಸಿದ್ದರು. ಶಿಬಿರದಲ್ಲಿ 12 ವರ್ಷದ ವಿದ್ಯಾರ್ಥಿ ಸೇರಿದಂತೆ 17 ವಿದ್ಯಾರ್ಥಿಗಳು ಇದ್ದರು ಮತ್ತು ಶಾಲೆಯ ಸಭಾಂಗಣದಲ್ಲಿ ಮಲಗಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 16 ರಂದು ಬಾಲಕಿ ಅಸ್ವಸ್ಥಳಾಗಿದ್ದು, ಆಕೆಯ ಪೋಷಕರು ಆಕೆಯ ಆರೋಗ್ಯದ ಬಗ್ಗೆ ಕೇಳಿದಾಗ, ಶಿಬಿರದ ಭಾಗವಾಗಿದ್ದ ಶಿವರಾಮನ್ ತನ್ನನ್ನು ಎಬ್ಬಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ಎನ್‌ಟಿಕೆಯಲ್ಲಿ ಪದಾಧಿಕಾರಿಯೂ ಆಗಿರುವ ಶಿವರಾಮನ್‌ರನ್ನು ಈ ಘಟನೆ ಬೆಳಕಿಗೆ ಬಂದ ನಂತರ ಪಕ್ಷದಿಂದ ಹೊರಹಾಕಲಾಯಿತು.

ಮತ್ತಷ್ಟು ಓದಿ: ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

ಈ ಕುರಿತು ತನ್ನ ಶಾಲಾ ಶಿಕ್ಷಕ ಮತ್ತು ಪ್ರಾಂಶುಪಾಲ ಸತೀಶ್ ಕುಮಾರ್ ಅವರಿಗೆ ದೂರು ನೀಡಿದ್ದು, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಲಕಿ ಆರೋಪಿಸಿದ್ದಾಳೆ. 12 ವರ್ಷದ ಬಾಲಕಿಯನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ಸತೀಶ್ ಕುಮಾರ್, ಶಿವರಾಮನ್, ಜೆನ್ನಿಫರ್, ಸ್ಯಾಮ್ಸನ್ ವೆಸ್ಲಿ, ಶಕ್ತಿವೇಲ್, ಸಿಂಧು, ಸತ್ಯ ಮತ್ತು ಸುಬ್ರಮಣಿಯನ್ನು ಬಂಧಿಸಿದ್ದಾರೆ. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಪರಾರಿಯಾಗಿದ್ದ ಶಿವರಾಮನ್ ಮತ್ತು ಸುಧಾಕರ್ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಮೂಲಗಳ ಪ್ರಕಾರ, ಶಿವರಾಮನ್ ಐದಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದುಬಂದಿದೆ. ವಿಶೇಷ ತಂಡ ಕೊಯಮತ್ತೂರಿನಲ್ಲಿ ಶಿವರಾಮನ್‌ನನ್ನು ಬಂಧಿಸಿದ್ದು, ಸುಧಾಕರ್‌ಗಾಗಿ ಹುಡುಕಾಟ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು