AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿದಲ್ಲಿ ಕೊರೊನಾ ದೇವರಿಗೆ ವಿಶೇಷ ಪೂಜೆ; ಆಶ್ಚರ್ಯವೆನಿಸಿದರೂ ನಂಬಲೇ ಬೇಕಾದ ಸತ್ಯ!

ಕೊರೊನಾವನ್ನು ದೇವಿ ಎಂಬ ನಂಬಿಕೆಯೊಂದಿಗೆ ಪೂಜಿಸಿ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡು ಎಂದು ತಮಿಳು ನಾಡು ಜನರು ಭಕ್ತಿಯಿಂದ ಪೂಜಿಸುತ್ತಿದ್ದಾರೆ.

ತಮಿಳುನಾಡಿದಲ್ಲಿ ಕೊರೊನಾ ದೇವರಿಗೆ ವಿಶೇಷ ಪೂಜೆ; ಆಶ್ಚರ್ಯವೆನಿಸಿದರೂ ನಂಬಲೇ ಬೇಕಾದ ಸತ್ಯ!
ತಮಿಳುನಾಡಿದಲ್ಲಿ ಕೊರೊನಾ ದೇವರಿಗೆ ವಿಶೇಷ ಪೂಜೆ
shruti hegde
|

Updated on:May 21, 2021 | 11:31 AM

Share

ತಮಿಳುನಾಡು: ದೇವರ ಆರಾಧನೆ ಮಾಡುವುದರಲ್ಲಿ ತಮಿಳು ನಾಡಿಗೆ ವಿಶೇಷ ಹೆಸರಿದೆ. ವಿಶೇಷವೆಂದರೆ, ಇದೀಗ ಕೊರೊನಾ ಎಂಬ ದೇವರು ಸೃಷ್ಟಿಯಾಗಿದ್ದು ತಮಿಳುನಾಡಿನಲ್ಲಿ. ಭಕ್ತಿ, ನಂಬಿಕೆಯಲ್ಲಿ ತೊಡಗಿರುವ ಜನರು ಇದೀಗ ಕೊರೊನಾ ವೈರಸ್​ಗೆ ದೇವರ ಸ್ವರೂಪ ನೀಡಿದ್ದಾರೆ. ಕೇಳಲು ಆಶ್ಚರ್ಯವೆನಿಸಬಹುದು ಆದರೂ ನಂಬಲೇ ಬೇಕಾದ ಸತ್ಯ. ಕೊಯಿಮತ್ತೂರಿನ ಜನರು ‘ಕೊರೊನಾ ದೇವಿ’ ಎಂಬ ದೇಗುಲವನ್ನು ನಿರ್ಮಿಸಿ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡು ಎಂದು ಭಕ್ತಿಯಿಂದ ಪೂಜಿಸುತ್ತಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿನ ಭೀಕರತೆ ಜನರನ್ನು ಭಯಗೊಳಿಸಿದೆ. ಸೋಂಕು ಹರಡದಂತೆ ವಿಶೇಷ ಪೂಜೆ ಕೈಗೊಳ್ಳುವ ಮೂಲಕ ತಮಿಳು ನಾಡಿನ ಕೊಯಿಮತ್ತೂರು ಜನರು ದೇವಿಯ ಮೊರೆ ಹೋಗಿದ್ದಾರೆ. ಆಶ್ಚರ್ಯವೇನೆಂದರೆ ‘ಕೊರೊನಾ ದೇವಿ’ ಎಂಬ ದೇಗುಲವನ್ನು ನಿರ್ಮಿಸಿ ವಿಶೇಷ ಪೂಜೆ ಜತೆಗೆ ಕೊರೊನಾ ಸೋಂಕು ಬಹುಬೇಗ ನಿಲ್ಲುವಂತೆ ಪ್ರಾರ್ಥಿಸಿದ್ದಾರೆ.

ಕೊಯಿಮತ್ತೂರಿನ ಹೆಸರಾಂತ ಕಾಮಾಚಿಪುರ ಅಧೀನಂ ಪೀಠ ಕೊವಿಡ್​ ಸೋಂಕಿಗಾಗಿ ವಿಶೇಷವಾದಂತಹ ದೇವಾಲಯವೊಂದನ್ನು ನಿರ್ಮಿಸಿದೆ. ಕೊರೊನಾ ನಿವಾರಣೆಗೆಂದು ಪ್ರತಿನಿತ್ಯವೂ ವಿಶೇಷವಾದ ಪೂಜೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೊರೊನಾ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ.

ಈ ಹಿಂದೆ ಪ್ಲೇಗ್​ ಜನರನ್ನು ಕಾಡತೊಡಗಿದ್ದಾಗ ಪ್ಲೇಗ್​ ಮಾರಿಯಮ್ಮ ದೇವಾಲಯವನ್ನು ನಿರ್ಮಿಸಿ ಪೂಜೆ-ಪುನಸ್ಕಾರಗಳನ್ನು ನೆರವೇರಿಸಲಾಗಿತ್ತು. ಇದೀಗ ಕೊವಿಡ್​ -19 ಸಾಂಕ್ರಾಮಿಕ ಬಹುಬೇಗ ನಿವಾರಣೆಯಾಗಲಿ ಎಂಬ ಕಾರಣಕ್ಕೆ ಕೊಯಿಮತ್ತೂರಿನ ಜನ ದೇವಿಯ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: Rajiv Gandhi Death Anniversary 2021: ರಾಜೀವ್ ಗಾಂಧಿ ಹಂತಕರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

Published On - 11:14 am, Fri, 21 May 21

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!