AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿದಲ್ಲಿ ಕೊರೊನಾ ದೇವರಿಗೆ ವಿಶೇಷ ಪೂಜೆ; ಆಶ್ಚರ್ಯವೆನಿಸಿದರೂ ನಂಬಲೇ ಬೇಕಾದ ಸತ್ಯ!

ಕೊರೊನಾವನ್ನು ದೇವಿ ಎಂಬ ನಂಬಿಕೆಯೊಂದಿಗೆ ಪೂಜಿಸಿ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡು ಎಂದು ತಮಿಳು ನಾಡು ಜನರು ಭಕ್ತಿಯಿಂದ ಪೂಜಿಸುತ್ತಿದ್ದಾರೆ.

ತಮಿಳುನಾಡಿದಲ್ಲಿ ಕೊರೊನಾ ದೇವರಿಗೆ ವಿಶೇಷ ಪೂಜೆ; ಆಶ್ಚರ್ಯವೆನಿಸಿದರೂ ನಂಬಲೇ ಬೇಕಾದ ಸತ್ಯ!
ತಮಿಳುನಾಡಿದಲ್ಲಿ ಕೊರೊನಾ ದೇವರಿಗೆ ವಿಶೇಷ ಪೂಜೆ
shruti hegde
|

Updated on:May 21, 2021 | 11:31 AM

Share

ತಮಿಳುನಾಡು: ದೇವರ ಆರಾಧನೆ ಮಾಡುವುದರಲ್ಲಿ ತಮಿಳು ನಾಡಿಗೆ ವಿಶೇಷ ಹೆಸರಿದೆ. ವಿಶೇಷವೆಂದರೆ, ಇದೀಗ ಕೊರೊನಾ ಎಂಬ ದೇವರು ಸೃಷ್ಟಿಯಾಗಿದ್ದು ತಮಿಳುನಾಡಿನಲ್ಲಿ. ಭಕ್ತಿ, ನಂಬಿಕೆಯಲ್ಲಿ ತೊಡಗಿರುವ ಜನರು ಇದೀಗ ಕೊರೊನಾ ವೈರಸ್​ಗೆ ದೇವರ ಸ್ವರೂಪ ನೀಡಿದ್ದಾರೆ. ಕೇಳಲು ಆಶ್ಚರ್ಯವೆನಿಸಬಹುದು ಆದರೂ ನಂಬಲೇ ಬೇಕಾದ ಸತ್ಯ. ಕೊಯಿಮತ್ತೂರಿನ ಜನರು ‘ಕೊರೊನಾ ದೇವಿ’ ಎಂಬ ದೇಗುಲವನ್ನು ನಿರ್ಮಿಸಿ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡು ಎಂದು ಭಕ್ತಿಯಿಂದ ಪೂಜಿಸುತ್ತಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿನ ಭೀಕರತೆ ಜನರನ್ನು ಭಯಗೊಳಿಸಿದೆ. ಸೋಂಕು ಹರಡದಂತೆ ವಿಶೇಷ ಪೂಜೆ ಕೈಗೊಳ್ಳುವ ಮೂಲಕ ತಮಿಳು ನಾಡಿನ ಕೊಯಿಮತ್ತೂರು ಜನರು ದೇವಿಯ ಮೊರೆ ಹೋಗಿದ್ದಾರೆ. ಆಶ್ಚರ್ಯವೇನೆಂದರೆ ‘ಕೊರೊನಾ ದೇವಿ’ ಎಂಬ ದೇಗುಲವನ್ನು ನಿರ್ಮಿಸಿ ವಿಶೇಷ ಪೂಜೆ ಜತೆಗೆ ಕೊರೊನಾ ಸೋಂಕು ಬಹುಬೇಗ ನಿಲ್ಲುವಂತೆ ಪ್ರಾರ್ಥಿಸಿದ್ದಾರೆ.

ಕೊಯಿಮತ್ತೂರಿನ ಹೆಸರಾಂತ ಕಾಮಾಚಿಪುರ ಅಧೀನಂ ಪೀಠ ಕೊವಿಡ್​ ಸೋಂಕಿಗಾಗಿ ವಿಶೇಷವಾದಂತಹ ದೇವಾಲಯವೊಂದನ್ನು ನಿರ್ಮಿಸಿದೆ. ಕೊರೊನಾ ನಿವಾರಣೆಗೆಂದು ಪ್ರತಿನಿತ್ಯವೂ ವಿಶೇಷವಾದ ಪೂಜೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೊರೊನಾ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ.

ಈ ಹಿಂದೆ ಪ್ಲೇಗ್​ ಜನರನ್ನು ಕಾಡತೊಡಗಿದ್ದಾಗ ಪ್ಲೇಗ್​ ಮಾರಿಯಮ್ಮ ದೇವಾಲಯವನ್ನು ನಿರ್ಮಿಸಿ ಪೂಜೆ-ಪುನಸ್ಕಾರಗಳನ್ನು ನೆರವೇರಿಸಲಾಗಿತ್ತು. ಇದೀಗ ಕೊವಿಡ್​ -19 ಸಾಂಕ್ರಾಮಿಕ ಬಹುಬೇಗ ನಿವಾರಣೆಯಾಗಲಿ ಎಂಬ ಕಾರಣಕ್ಕೆ ಕೊಯಿಮತ್ತೂರಿನ ಜನ ದೇವಿಯ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: Rajiv Gandhi Death Anniversary 2021: ರಾಜೀವ್ ಗಾಂಧಿ ಹಂತಕರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

Published On - 11:14 am, Fri, 21 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ