3 ಕೋಟಿ ರೂ. ವಿಮೆ ಹಣ ಪಡೆಯಲು, ತಂದೆಗೆ ಹಾವು ಕಚ್ಚಿಸಿದ ಮಕ್ಕಳು

ತಮಿಳುನಾಡಿನ ತಿರುವಳ್ಳೂರಿನಲ್ಲಿ 3 ಕೋಟಿ ರೂ. ವಿಮೆ ಹಣಕ್ಕಾಗಿ ಮಕ್ಕಳೇ ತಂದೆಗೆ ಹಾವು ಕಚ್ಚಿಸಿ ಕೊಲೆ ಮಾಡಿದ್ದಾರೆ. ಸರ್ಕಾರಿ ನೌಕರ ಗಣೇಶ್ ಅವರನ್ನು ಉದ್ದೇಶಪೂರ್ವಕವಾಗಿ ಹಾವು ಕಡಿತಕ್ಕೆ ಗುರಿಪಡಿಸಿ ಕೊಲೆ ಮಾಡಲಾಗಿದೆ. ಆರಂಭದಲ್ಲಿ ಆಕಸ್ಮಿಕವೆಂದು ನಂಬಲಾಗಿತ್ತು, ಆದರೆ ತನಿಖೆಯಲ್ಲಿ ಇದು ಕೊಲೆ ಸಂಚು ಎಂದು ಬಯಲಾಯಿತು. ಪೊಲೀಸರು ಮೃತರ ಇಬ್ಬರು ಮಕ್ಕಳೂ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ

3 ಕೋಟಿ ರೂ. ವಿಮೆ ಹಣ ಪಡೆಯಲು, ತಂದೆಗೆ ಹಾವು ಕಚ್ಚಿಸಿದ ಮಕ್ಕಳು
ಹಾವು-ಸಾಂದರ್ಭಿಕ ಚಿತ್ರ

Updated on: Dec 30, 2025 | 9:25 AM

ತಿರುವಲ್ಲೂರು, ಡಿಸೆಂಬರ್ 30: ವಿಮಾ ಹಣ ಪಡೆಯಲು ಮಕ್ಕಳೇ ತಂದೆಗೆ ಹಾವು(Snake) ಕಚ್ಚಿಸಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಸುಮಾರು 3 ಕೋಟಿ ರೂಪಾಯಿ ಮೌಲ್ಯದ ವಿಮಾ ಹಣವನ್ನು ಪಡೆಯಲು ಹಾವು ಕಚ್ಚಿಸಿ ಸರ್ಕಾರಿ ನೌಕರನ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಮೃತ ವ್ಯಕ್ತಿಯ ಇಬ್ಬರು ಪುತ್ರರು ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಅಕ್ಟೋಬರ್ 22 ರಂದು ತಿರುವಲ್ಲೂರು ಬಳಿಯ ಪೋಥತುರ್ಪೆಟ್ಟೈನಲ್ಲಿ ನಡೆದಿದ್ದು, ಮೃತರನ್ನು ಗಣೇಶ್ (56) ಸರ್ಕಾರಿ ಸಂಸ್ಥೆಯಲ್ಲಿ ಪ್ರಯೋಗಾಲಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಗಣೇಶ್ ನಿದ್ದೆ ಮಾಡುತ್ತಿದ್ದಾಗ ಕುತ್ತಿಗೆಗೆ ಹಾವು ಕಚ್ಚಿ ಸಾವನ್ನಪ್ಪಿದ್ದರು. ಆರಂಭದಲ್ಲಿ ಈ ಸಾವನ್ನು ಆಕಸ್ಮಿಕ ಎಂದು ಪರಿಗಣಿಸಲಾಗಿತ್ತು. ಆದಾಗ್ಯೂ, ವಿಮಾ ಕಂಪನಿಗಳು ಪ್ರಕರಣ ದಾಖಲಿಸಿದ ನಂತರ ಅನುಮಾನ ಹುಟ್ಟಿಕೊಂಡಿತ್ತು.

ಗಣೇಶ್ ಸುಮಾರು 3 ಕೋಟಿ ರೂಪಾಯಿಗಳ ಒಟ್ಟು ವಿಮಾ ರಕ್ಷಣೆಯೊಂದಿಗೆ 11 ವಿಮಾ ಪಾಲಿಸಿಗಳನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಸಾವಿಗೆ ಕೆಲವು ವಾರಗಳ ಮೊದಲು ಅವರು ಅಪಘಾತಕ್ಕೀಡಾಗಿದ್ದರು ಎಂದು ತನಿಖಾಧಿಕಾರಿಗಳು ಕಂಡುಕೊಂಡರು, ಇದು ಮತ್ತಷ್ಟು ಕಳವಳ ಮೂಡಿಸಿತ್ತು.

ಮತ್ತಷ್ಟು ಓದಿ: Video: ಜಸ್ಟ್‌ ಮಿಸ್; ಸ್ನೇಹಿತರೊಂದಿಗೆ ನೀರಿನಲ್ಲಿ ಆಡುತ್ತಿರುವಾಗ ಯುವಕನ ಮೇಲೆ ದಾಳಿ ಮಾಡಿದ ದೈತ್ಯ ಹಾವು

ತನಿಖೆಯ ಸಮಯದಲ್ಲಿ, ಪೊಲೀಸರು ಕರೆ ವಿವರ ದಾಖಲೆಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಪರಿಶೀಲಿಸಿದ್ದಾರೆ.ಆಗ ಇದು ಕೊಲೆ ಎಂಬುದು ತಿಳಿದುಬಂದಿದೆ. ತನಿಖೆಯಲ್ಲಿ ಆರೋಪಿಗಳು ಹಾವು ಕಚ್ಚಿದ್ದು ಆಕಸ್ಮಿಕ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ನಿರಂತರ ವಿಚಾರಣೆ ಮತ್ತು ತಾಂತ್ರಿಕ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಇಲ್ಲಿಯವರೆಗೆ ಆರು ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಮೃತ ವ್ಯಕ್ತಿಯ ಪುತ್ರರು ಮತ್ತು ಅಪರಾಧಕ್ಕೆ ಬಳಸಿದ ಹಾವನ್ನು ಕೊಟ್ಟು ಸಹಾಯ ಮಾಡಿದ ಇತರರು ಸೇರಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us