AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ದೇವಾಲಯದಲ್ಲಿ ತೃತೀಯಲಿಂಗಿ ಮಹಿಳೆಯ ಕಪಾಳಕ್ಕೆ ಹೊಡೆದ ಪೊಲೀಸ್; ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದ ಥೈ ಪೂಸಂ ಹಬ್ಬದ ಸಂದರ್ಭದಲ್ಲಿ ಪೊಲೀಸರು ತೋರಿದ ವರ್ತನೆಗೆ ವಿರೋಧ ವ್ಯಕ್ತವಾಗಿದ್ದು, ಮುರುಗನ್ ದೇವಾಲಯದಲ್ಲಿ ಜನಸಂದಣಿಯನ್ನು ನಿಯಂತ್ರಿಸುವಾಗ ತಮಿಳುನಾಡಿನ ಡಿಎಸ್‌ಪಿಯೊಬ್ಬರು ತೃತೀಯಲಿಂಗಿ ಮಹಿಳೆಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಎಸ್‌ಪಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು.

ತಮಿಳುನಾಡಿನ ದೇವಾಲಯದಲ್ಲಿ ತೃತೀಯಲಿಂಗಿ ಮಹಿಳೆಯ ಕಪಾಳಕ್ಕೆ ಹೊಡೆದ ಪೊಲೀಸ್; ಭುಗಿಲೆದ್ದ ಪ್ರತಿಭಟನೆ
Tamil Nadu Cop Caught Slapping Transgender
ಸುಷ್ಮಾ ಚಕ್ರೆ
|

Updated on:Feb 11, 2025 | 6:18 PM

Share

ಚೆನ್ನೈ: ತಮಿಳುನಾಡಿನ ಮುರುಗನ್ ದೇವಾಲಯದಲ್ಲಿ ಪೊಲೀಸರು ತೃತೀಯಲಿಂಗಿ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದು, ಇದರಿಂದ ಇಡೀ ಸಮುದಾಯ ಆಕ್ರೋಶಗೊಂಡಿದೆ. ದೇವಾಲಯದಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಶುರುವಾಗಿತ್ತು. ಅದನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತೃತೀಯ ಲಿಂಗಿ ಮಹಿಳೆಯ ಕೆನ್ನೆಗೆ ಬಾರಿಸಿದ್ದಾರೆ. ಈ ವೇಳೆ ಪೊಲೀಸರ ಸುತ್ತಲೂ ತೃತೀಯಲಿಂಗಿ ಸಮುದಾಯದ ಜನರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು.

ತಮಿಳುನಾಡಿನ ತಿರುವಳ್ಳೂರಿನ ಮುರುಗನ್ ದೇವಾಲಯದ ಹೊರಗೆ ಜನಸಂದಣಿಯನ್ನು ನಿರ್ವಹಿಸುವಾಗ ಡಿಎಸ್‌ಪಿ ತೃತೀಯಲಿಂಗಿ ಮಹಿಳೆಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ತೃತೀಯಲಿಂಗಿ ಸಮುದಾಯದಿಂದ ಪ್ರತಿಭಟನೆಗೆ ಕಾರಣವಾಯಿತು.

ಮುರುಗನ್ ದೇವರಿಗೆ ಅರ್ಪಿತವಾದ ಥೈ ಪೂಸಂ ಆಚರಣೆಯ ಸಂದರ್ಭದಲ್ಲಿ ಸಿರುವಾಪುರಿ ಮುರುಗನ್ ದೇವಾಲಯದಲ್ಲಿ ಈ ಘಟನೆ ಸಂಭವಿಸಿದೆ. ಶುಭ ಸಂದರ್ಭದಲ್ಲಿ ದರ್ಶನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಜನಸಂದಣಿಯನ್ನು ನಿರ್ವಹಿಸಲು ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ತಮಿಳುನಾಡು: ಗರ್ಭಿಣಿಗೆ ಲೈಂಗಿಕ ಕಿರುಕುಳ, ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ದುರುಳರು

ಸಾಮಾನ್ಯ ಭಕ್ತರು ದೀರ್ಘ ಸರತಿ ಸಾಲಿನಲ್ಲಿ ಕಾಯುತ್ತಿರುವಾಗ, ವಿಐಪಿಗಳಿಗೆ ದೇವಾಲಯದ ನಿರ್ಗಮನದ ಮೂಲಕ ವಿಶೇಷ ಪ್ರವೇಶ ನೀಡಲಾಗುತ್ತಿದೆ ಎಂದು ಆರೋಪಿಸಿ ತೃತೀಯಲಿಂಗಿಗಳ ಗುಂಪೊಂದು ಪ್ರತಿಭಟಿಸಿದಾಗ ಉದ್ವಿಗ್ನತೆ ಉಂಟಾಯಿತು. ಆಗ ಜನಸಂದಣಿ ನಿಯಂತ್ರಣವನ್ನು ನೋಡಿಕೊಳ್ಳುತ್ತಿದ್ದ ಉತ್ತುಕೊಟ್ಟೈ ಡಿಎಸ್‌ಪಿ ಕೆ. ಶಾಂತಿ ಮಧ್ಯಪ್ರವೇಶಿಸಿದರು. ಈ ವೇಳೆ ಆಕೆ ತೃತೀಯಲಿಂಗಿ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಎಸ್‌ಪಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Tue, 11 February 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ