Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ದೇವಾಲಯದಲ್ಲಿ ತೃತೀಯಲಿಂಗಿ ಮಹಿಳೆಯ ಕಪಾಳಕ್ಕೆ ಹೊಡೆದ ಪೊಲೀಸ್; ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದ ಥೈ ಪೂಸಂ ಹಬ್ಬದ ಸಂದರ್ಭದಲ್ಲಿ ಪೊಲೀಸರು ತೋರಿದ ವರ್ತನೆಗೆ ವಿರೋಧ ವ್ಯಕ್ತವಾಗಿದ್ದು, ಮುರುಗನ್ ದೇವಾಲಯದಲ್ಲಿ ಜನಸಂದಣಿಯನ್ನು ನಿಯಂತ್ರಿಸುವಾಗ ತಮಿಳುನಾಡಿನ ಡಿಎಸ್‌ಪಿಯೊಬ್ಬರು ತೃತೀಯಲಿಂಗಿ ಮಹಿಳೆಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಎಸ್‌ಪಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು.

ತಮಿಳುನಾಡಿನ ದೇವಾಲಯದಲ್ಲಿ ತೃತೀಯಲಿಂಗಿ ಮಹಿಳೆಯ ಕಪಾಳಕ್ಕೆ ಹೊಡೆದ ಪೊಲೀಸ್; ಭುಗಿಲೆದ್ದ ಪ್ರತಿಭಟನೆ
Tamil Nadu Cop Caught Slapping Transgender
Follow us
ಸುಷ್ಮಾ ಚಕ್ರೆ
|

Updated on:Feb 11, 2025 | 6:18 PM

ಚೆನ್ನೈ: ತಮಿಳುನಾಡಿನ ಮುರುಗನ್ ದೇವಾಲಯದಲ್ಲಿ ಪೊಲೀಸರು ತೃತೀಯಲಿಂಗಿ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದು, ಇದರಿಂದ ಇಡೀ ಸಮುದಾಯ ಆಕ್ರೋಶಗೊಂಡಿದೆ. ದೇವಾಲಯದಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಶುರುವಾಗಿತ್ತು. ಅದನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತೃತೀಯ ಲಿಂಗಿ ಮಹಿಳೆಯ ಕೆನ್ನೆಗೆ ಬಾರಿಸಿದ್ದಾರೆ. ಈ ವೇಳೆ ಪೊಲೀಸರ ಸುತ್ತಲೂ ತೃತೀಯಲಿಂಗಿ ಸಮುದಾಯದ ಜನರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು.

ತಮಿಳುನಾಡಿನ ತಿರುವಳ್ಳೂರಿನ ಮುರುಗನ್ ದೇವಾಲಯದ ಹೊರಗೆ ಜನಸಂದಣಿಯನ್ನು ನಿರ್ವಹಿಸುವಾಗ ಡಿಎಸ್‌ಪಿ ತೃತೀಯಲಿಂಗಿ ಮಹಿಳೆಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ತೃತೀಯಲಿಂಗಿ ಸಮುದಾಯದಿಂದ ಪ್ರತಿಭಟನೆಗೆ ಕಾರಣವಾಯಿತು.

ಮುರುಗನ್ ದೇವರಿಗೆ ಅರ್ಪಿತವಾದ ಥೈ ಪೂಸಂ ಆಚರಣೆಯ ಸಂದರ್ಭದಲ್ಲಿ ಸಿರುವಾಪುರಿ ಮುರುಗನ್ ದೇವಾಲಯದಲ್ಲಿ ಈ ಘಟನೆ ಸಂಭವಿಸಿದೆ. ಶುಭ ಸಂದರ್ಭದಲ್ಲಿ ದರ್ಶನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಜನಸಂದಣಿಯನ್ನು ನಿರ್ವಹಿಸಲು ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ತಮಿಳುನಾಡು: ಗರ್ಭಿಣಿಗೆ ಲೈಂಗಿಕ ಕಿರುಕುಳ, ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ದುರುಳರು

ಸಾಮಾನ್ಯ ಭಕ್ತರು ದೀರ್ಘ ಸರತಿ ಸಾಲಿನಲ್ಲಿ ಕಾಯುತ್ತಿರುವಾಗ, ವಿಐಪಿಗಳಿಗೆ ದೇವಾಲಯದ ನಿರ್ಗಮನದ ಮೂಲಕ ವಿಶೇಷ ಪ್ರವೇಶ ನೀಡಲಾಗುತ್ತಿದೆ ಎಂದು ಆರೋಪಿಸಿ ತೃತೀಯಲಿಂಗಿಗಳ ಗುಂಪೊಂದು ಪ್ರತಿಭಟಿಸಿದಾಗ ಉದ್ವಿಗ್ನತೆ ಉಂಟಾಯಿತು. ಆಗ ಜನಸಂದಣಿ ನಿಯಂತ್ರಣವನ್ನು ನೋಡಿಕೊಳ್ಳುತ್ತಿದ್ದ ಉತ್ತುಕೊಟ್ಟೈ ಡಿಎಸ್‌ಪಿ ಕೆ. ಶಾಂತಿ ಮಧ್ಯಪ್ರವೇಶಿಸಿದರು. ಈ ವೇಳೆ ಆಕೆ ತೃತೀಯಲಿಂಗಿ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಎಸ್‌ಪಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Tue, 11 February 25

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ