ಶೇಂಗಾ ಪ್ಯಾಕೆಟ್​ ಫ್ರೀಯಾಗಿ ಕೊಡು ಎಂದು ಅಂಗಡಿಯಲ್ಲಿ ಗಲಾಟೆ ಮಾಡ್ತಿದ್ದ ಪೊಲೀಸರ ಅಮಾನತು

ಅಂಗಡಿಗೆ ಹೋಗಿ ಶೇಂಗಾ ಪ್ಯಾಕೆಟ್​ ಉಚಿತವಾಗಿ ಕೊಡು ಎಂದು ಪೊಲೀಸರೊಬ್ಬರು ಗಲಾಟೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಇದೀಗ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಶೇಂಗಾ ಪ್ಯಾಕೆಟ್​ ಫ್ರೀಯಾಗಿ ಕೊಡು ಎಂದು ಅಂಗಡಿಯಲ್ಲಿ ಗಲಾಟೆ ಮಾಡ್ತಿದ್ದ ಪೊಲೀಸರ ಅಮಾನತು
ಪೊಲೀಸ್​
Follow us
|

Updated on: Jul 03, 2024 | 2:38 PM

ಅಂಗಡಿಗೆ ಹೋಗಿ ಶೇಂಗಾ ಪ್ಯಾಕೆಟ್​ ಫ್ರೀಯಾಗಿ ಕೊಡು ಎಂದು ಗಲಾಟೆ ಮಾಡುತ್ತಿದ್ದ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ತಮಿಳುನಾಡಿನ ತಿರುಚ್ಚಿಯಲ್ಲಿ ಘಟನೆ ನಡೆದಿದೆ, ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಜೂನ್ 1 ರಂದು ತಿರುಚ್ಚಿಯ ಪೊಲೀಸ್ ಠಾಣೆಯಲ್ಲಿ ನಿಯೋಜಿತವಾಗಿರುವ ವಿಶೇಷ ಸಬ್-ಇನ್‌ಸ್ಪೆಕ್ಟರ್ ರಾಧಾಕೃಷ್ಣನ್ ಅವರು ಮಾರಾಟಗಾರರಿಂದ ಉಚಿತ ಶೇಂಗಾ ಪ್ಯಾಕೆಟ್‌ಗೆ ಬೇಡಿಕೆಯಿಡುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಚಾರಣೆಗೆ ಬಾಕಿಯಿರುವ ಪೋಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಠಾಣೆಯಿಂದ ಬಂದಿದ್ದೆ, 30 ನಿಮಿಷ ಕಾಯಿಸಿದ್ದರು, ನಾನು ಕಳೆದ ಎರಡು ವರ್ಷಗಳಿಂದ ಇಲ್ಲಿಗೆ ಬರ್ತಿದ್ದೇನೆ, ನಾನು ಸ್ವಲ್ಪ ಶೇಂಗಾ ಕೇಳಿದ್ದೆ, ಅವರು ಕೊಡಬಹುದಿತ್ತಲ್ಲಾ ಎಂದು ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಅಂಗಡಿಯ ಮಾಲೀಕ ರಾಜನ್ ಮಾತನಾಡಿ, ಅಂದು ಮಗ ಅಂಗಡಿಯಲ್ಲಿದ್ದ ಅದೇ ವೇಳೆ ರಾಧಾಕೃಷ್ಣನ್ ಅವರು ಬಂದಿದ್ದರು, ಆಗ ಶೇಂಗಾ ಪ್ಯಾಕೆಟ್​ ಕೊಡು ಎಂದು ಕೇಳಿದ್ದಾರೆ, ಆಗ ಹಣ ಕೊಡಿ ಎಂದು ಮಗ ಕೇಳಿದ್ದಾನೆ, ಅದಕ್ಕೆ ಪೊಲೀಸ್​ ನಾನು ಪೊಲೀಸ್​ ಠಾಣೆಯಿಂದ ಬಂದಿರುವುದು ನನ್ನ ಬಳಿಯೇ ಹಣ ಕೇಳ್ತೀಯಾ ಎಂದು ಹೇಳಿ ಜಗಳವಾಡಿ ಹೊರಟು ಹೋಗಿದ್ದರು.

ಮತ್ತಷ್ಟು ಓದಿ: ಪೊಲೀಸ್​ ಠಾಣೆಯಲ್ಲೇ ಎಣ್ಣೆ ಪಾರ್ಟಿ; ಹೆಡ್ ಕಾನ್ಸ್‌ಟೇಬಲ್ ಅಮಾನತು

ಬಳಿಕ ಅಂಗಡಿ ಮಾಲೀಕ ರಾಜನ್ ತಿರುಚಿ ಪೊಲೀಸ್​ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ರಾಧಾಕೃಷ್ಣನ್ ಮತ್ತೆ ಇಬ್ಬರು ಪೊಲೀಸರೊಂದಿಗೆ ಬಂದು ಬೆದರಿಕೆ ಹಾಕಿದ್ದಾರೆ. ಈ ಅಂಗಡಿಯೂ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಡಿಯೋದಲ್ಲಿ ಪೊಲೀಸರು ಅಂಗಡಿಯವರೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಧಾಕೃಷ್ಣನ್ ಅವರನ್ನು ಉನ್ನತ ಅಧಿಕಾರಿಗಳು ಮುಂದಿನ ವಿಚಾರಣೆಗಾಗಿ ಅಮಾನತುಗೊಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?