AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಂಗಾ ಪ್ಯಾಕೆಟ್​ ಫ್ರೀಯಾಗಿ ಕೊಡು ಎಂದು ಅಂಗಡಿಯಲ್ಲಿ ಗಲಾಟೆ ಮಾಡ್ತಿದ್ದ ಪೊಲೀಸರ ಅಮಾನತು

ಅಂಗಡಿಗೆ ಹೋಗಿ ಶೇಂಗಾ ಪ್ಯಾಕೆಟ್​ ಉಚಿತವಾಗಿ ಕೊಡು ಎಂದು ಪೊಲೀಸರೊಬ್ಬರು ಗಲಾಟೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಇದೀಗ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಶೇಂಗಾ ಪ್ಯಾಕೆಟ್​ ಫ್ರೀಯಾಗಿ ಕೊಡು ಎಂದು ಅಂಗಡಿಯಲ್ಲಿ ಗಲಾಟೆ ಮಾಡ್ತಿದ್ದ ಪೊಲೀಸರ ಅಮಾನತು
ಪೊಲೀಸ್​
ನಯನಾ ರಾಜೀವ್
|

Updated on: Jul 03, 2024 | 2:38 PM

Share

ಅಂಗಡಿಗೆ ಹೋಗಿ ಶೇಂಗಾ ಪ್ಯಾಕೆಟ್​ ಫ್ರೀಯಾಗಿ ಕೊಡು ಎಂದು ಗಲಾಟೆ ಮಾಡುತ್ತಿದ್ದ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ತಮಿಳುನಾಡಿನ ತಿರುಚ್ಚಿಯಲ್ಲಿ ಘಟನೆ ನಡೆದಿದೆ, ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಜೂನ್ 1 ರಂದು ತಿರುಚ್ಚಿಯ ಪೊಲೀಸ್ ಠಾಣೆಯಲ್ಲಿ ನಿಯೋಜಿತವಾಗಿರುವ ವಿಶೇಷ ಸಬ್-ಇನ್‌ಸ್ಪೆಕ್ಟರ್ ರಾಧಾಕೃಷ್ಣನ್ ಅವರು ಮಾರಾಟಗಾರರಿಂದ ಉಚಿತ ಶೇಂಗಾ ಪ್ಯಾಕೆಟ್‌ಗೆ ಬೇಡಿಕೆಯಿಡುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಚಾರಣೆಗೆ ಬಾಕಿಯಿರುವ ಪೋಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಠಾಣೆಯಿಂದ ಬಂದಿದ್ದೆ, 30 ನಿಮಿಷ ಕಾಯಿಸಿದ್ದರು, ನಾನು ಕಳೆದ ಎರಡು ವರ್ಷಗಳಿಂದ ಇಲ್ಲಿಗೆ ಬರ್ತಿದ್ದೇನೆ, ನಾನು ಸ್ವಲ್ಪ ಶೇಂಗಾ ಕೇಳಿದ್ದೆ, ಅವರು ಕೊಡಬಹುದಿತ್ತಲ್ಲಾ ಎಂದು ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಅಂಗಡಿಯ ಮಾಲೀಕ ರಾಜನ್ ಮಾತನಾಡಿ, ಅಂದು ಮಗ ಅಂಗಡಿಯಲ್ಲಿದ್ದ ಅದೇ ವೇಳೆ ರಾಧಾಕೃಷ್ಣನ್ ಅವರು ಬಂದಿದ್ದರು, ಆಗ ಶೇಂಗಾ ಪ್ಯಾಕೆಟ್​ ಕೊಡು ಎಂದು ಕೇಳಿದ್ದಾರೆ, ಆಗ ಹಣ ಕೊಡಿ ಎಂದು ಮಗ ಕೇಳಿದ್ದಾನೆ, ಅದಕ್ಕೆ ಪೊಲೀಸ್​ ನಾನು ಪೊಲೀಸ್​ ಠಾಣೆಯಿಂದ ಬಂದಿರುವುದು ನನ್ನ ಬಳಿಯೇ ಹಣ ಕೇಳ್ತೀಯಾ ಎಂದು ಹೇಳಿ ಜಗಳವಾಡಿ ಹೊರಟು ಹೋಗಿದ್ದರು.

ಮತ್ತಷ್ಟು ಓದಿ: ಪೊಲೀಸ್​ ಠಾಣೆಯಲ್ಲೇ ಎಣ್ಣೆ ಪಾರ್ಟಿ; ಹೆಡ್ ಕಾನ್ಸ್‌ಟೇಬಲ್ ಅಮಾನತು

ಬಳಿಕ ಅಂಗಡಿ ಮಾಲೀಕ ರಾಜನ್ ತಿರುಚಿ ಪೊಲೀಸ್​ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ರಾಧಾಕೃಷ್ಣನ್ ಮತ್ತೆ ಇಬ್ಬರು ಪೊಲೀಸರೊಂದಿಗೆ ಬಂದು ಬೆದರಿಕೆ ಹಾಕಿದ್ದಾರೆ. ಈ ಅಂಗಡಿಯೂ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಡಿಯೋದಲ್ಲಿ ಪೊಲೀಸರು ಅಂಗಡಿಯವರೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಧಾಕೃಷ್ಣನ್ ಅವರನ್ನು ಉನ್ನತ ಅಧಿಕಾರಿಗಳು ಮುಂದಿನ ವಿಚಾರಣೆಗಾಗಿ ಅಮಾನತುಗೊಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ