AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ರೈಲ್ವೆ ಪೊಲೀಸ್​ ಕಾನ್​ಸ್ಟೆಬಲ್ ಆತ್ಮಹತ್ಯೆ

ತಮಿಳುನಾಡಿನ ತಿರುಚ್ಚಿ ರೈಲು ನಿಲ್ದಾಣದಲ್ಲಿ ರೈಲ್ವೇ ಸಂರಕ್ಷಣಾ ಪಡೆಯ (ಆರ್‌ಪಿಎಫ್) ಹೆಡ್ ಕಾನ್‌ಸ್ಟೆಬಲ್ (40) ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2006 ರಲ್ಲಿ ಆರ್‌ಪಿಎಫ್‌ಗೆ ಸೇರ್ಪಡೆಗೊಂಡ ಮಂಜುನಾಥ್ ಅವರನ್ನು ತಿರುಚ್ಚಿ ರೈಲ್ವೆ ನಿಲ್ದಾಣಕ್ಕೆ ನಿಯೋಜಿಸಲಾಗಿತ್ತು. ಮಂಗಳವಾರ ರಾತ್ರಿ ಕೊಲ್ಲಂನಿಂದ ಚೆನ್ನೈಗೆ ತೆರಳುತ್ತಿದ್ದ ರೈಲು ಬರುತ್ತಿದ್ದಂತೆ ಕರ್ತವ್ಯ ನಿರತರಾಗಿದ್ದಾಗ ರೈಲ್ವೇ ಹಳಿ ಮೇಲೆ ತಲೆ ಇಟ್ಟಿದ್ದಾರೆ  ಇವರ ತಲೆ ಮೇಲೆ ರೈಲು ಹರಿದು ಕಾನ್​ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಮಿಳುನಾಡು: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ರೈಲ್ವೆ ಪೊಲೀಸ್​ ಕಾನ್​ಸ್ಟೆಬಲ್ ಆತ್ಮಹತ್ಯೆ
Image Credit source: India Today
ನಯನಾ ರಾಜೀವ್
|

Updated on: Nov 08, 2023 | 1:04 PM

Share

ತಮಿಳುನಾಡಿನ ತಿರುಚ್ಚಿ ರೈಲು ನಿಲ್ದಾಣದಲ್ಲಿ ರೈಲ್ವೇ ಸಂರಕ್ಷಣಾ ಪಡೆಯ (ಆರ್‌ಪಿಎಫ್) ಹೆಡ್ ಕಾನ್‌ಸ್ಟೆಬಲ್ (40) ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2006 ರಲ್ಲಿ ಆರ್‌ಪಿಎಫ್‌ಗೆ ಸೇರ್ಪಡೆಗೊಂಡ ಮಂಜುನಾಥ್ ಅವರನ್ನು ತಿರುಚ್ಚಿ ರೈಲ್ವೆ ನಿಲ್ದಾಣಕ್ಕೆ ನಿಯೋಜಿಸಲಾಗಿತ್ತು. ಮಂಗಳವಾರ ರಾತ್ರಿ ಕೊಲ್ಲಂನಿಂದ ಚೆನ್ನೈಗೆ ತೆರಳುತ್ತಿದ್ದ ರೈಲು ಬರುತ್ತಿದ್ದಂತೆ ಕರ್ತವ್ಯ ನಿರತರಾಗಿದ್ದಾಗ ರೈಲ್ವೇ ಹಳಿ ಮೇಲೆ ತಲೆ ಇಟ್ಟಿದ್ದಾರೆ  ಇವರ ತಲೆ ಮೇಲೆ ರೈಲು ಹರಿದು ಕಾನ್​ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆರ್‌ಪಿಎಫ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಂಜುನಾಥನ ಶವವನ್ನು ಹೊರತೆಗೆದ ನಂತರ ಶವಪರೀಕ್ಷೆಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

ಮತ್ತೊಂದು ಘಟನೆ: ರೈಲಿನಲ್ಲಿ ಶವದೊಂದಿಗೆ ಪ್ರಯಾಣಿಸಿದ ಜನ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ ರೈಲಿನ ಜನರಲ್​ ಕೋಚ್​ನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಉಳಿದ ಪ್ರಯಾಣಿಕರು ಅನಿವಾರ್ಯವಾಗಿ ಶವದ ಜತೆ ಸುಮಾರು 600 ಕಿಮೀ ಪ್ರಯಾಣಿಸಲು ಒತ್ತಾಯಿಸಲಾಯಿತು.

ರೈಲು ಚೆನ್ನೈನಿಂದ ಹಜರತ್ ನಿಜಾಮುದ್ದೀನ್‌ಗೆ ತೆರಳುತ್ತಿತ್ತು. ಪ್ರಯಾಣಿಕರು ರೈಲ್ವೇ ಅಧಿಕಾರಿಗಳಿಗೆ ಹಲವು ಬಾರಿ ಮುನ್ಸೂಚನೆ ನೀಡಿದರೂ, ಅವರು ಉತ್ತರ ಪ್ರದೇಶದ ಝಾನ್ಸಿ ತಲುಪುವವರೆಗೂ ಶವವನ್ನು ತೆಗೆಯಲಿಲ್ಲ, ಅಲ್ಲಿ ಅದನ್ನು ಸರ್ಕಾರಿ ರೈಲ್ವೆ ಪೊಲೀಸರು (GRP) ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಮತ್ತಷ್ಟು ಓದಿ: ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು

ಉತ್ತರ ಪ್ರದೇಶದ ಬಂದಾ ಜಿಲ್ಲೆಯ 36 ವರ್ಷದ ರಾಮ್‌ಜೀತ್ ಯಾದವ್ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಅವರ ಸೋದರ ಮಾವ ಗೋವರ್ಧನರೊಂದಿಗೆ ಮರಳಿ ಬಂದಾಗೆ ಪ್ರಯಾಣಿಸುತ್ತಿದ್ದರು.

ಭಾನುವಾರ, ರೈಲು ನಾಗ್ಪುರ ತಲುಪಿದಾಗ ರಾಮ್‌ಜೀತ್ ಅವರ ಆರೋಗ್ಯವು ಹಠಾತ್ತನೆ ಹದಗೆಟ್ಟಿತು ಮತ್ತು ಅವರು ರೈಲಿನಲ್ಲೇ ಸಾವನ್ನಪ್ಪಿದ್ದಾರೆ ಎಂದು ಗೋವರ್ಧನ್ ಹೇಳಿದರು. ಆದರೆ ಹಲವಾರು ಪ್ರಯತ್ನಗಳ ಹೊರತಾಗಿಯೂ ಅವರನ್ನು ಬದುಕಿಸುವಲ್ಲಿ ವಿಫಲರಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ