AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Rain: ಕನ್ಯಾಕುಮಾರಿ ಸೇರಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

Weather Today: ಕನ್ಯಾಕುಮಾರಿ, ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿಯಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

Tamil Nadu Rain: ಕನ್ಯಾಕುಮಾರಿ ಸೇರಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ತಮಿಳುನಾಡಿನಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 28, 2022 | 1:20 PM

ಚೆನ್ನೈ: ತಮಿಳುನಾಡಿನ (Tamil Nadu Rains) 4 ಜಿಲ್ಲೆಗಳಲ್ಲಿ ಇಂದು (ಬುಧವಾರ) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕನ್ಯಾಕುಮಾರಿ (Kanyakumari), ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿಯಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಚೆನ್ನೈ ಸುತ್ತಮುತ್ತ ಕೂಡ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ (Karnataka Weather) ಹಲವೆಡೆ ಕೂಡ ಇಂದು ಮಳೆ ಮುಂದುವರೆದಿದೆ.

ಇಂದು ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆ ಸಂಭವಿಸಬಹುದು. ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಶೀತದ ಅಲೆಯ ಪರಿಸ್ಥಿತಿಗಳು ಉಂಟಾಗಲಿದೆ. ಪಂಜಾಬ್‌ನಲ್ಲಿ ದಟ್ಟವಾದ ಮಂಜು ತುಂಬಿರುವ ಸಾಧ್ಯತೆಯಿದೆ. ಒಡಿಶಾ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಆಂಧ್ರಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಚಂಡೀಗಢಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Bangalore Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಲ್ಲಿ ಮುಂದಿನ 2 ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೂಡ ಇಂದು ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಹೆಚ್ಚಾಗಲಿದೆ. ಅದರ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿ, ಉತ್ತರ ಕರ್ನಾಟಕದಲ್ಲಿ ಒಣಹವೆ

ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 2 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ