AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Rain: ಮಳೆಯಿಂದ ಚೆನ್ನೈ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​; ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂನಲ್ಲಿ ಶಾಲೆಗಳಿಗೆ ರಜೆ ಘೋಷಣೆ

Rain Updates: ಚೆನ್ನೈ, ತಿರುವಳ್ಳೂರ್ ಮತ್ತು ಕಾಂಚೀಪುರಂ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ನವೆಂಬರ್ 13ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ

Tamil Nadu Rain: ಮಳೆಯಿಂದ ಚೆನ್ನೈ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​; ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂನಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮಳೆ
TV9 Web
| Edited By: |

Updated on: Nov 11, 2022 | 8:21 AM

Share

ಚೆನ್ನೈ: ತಮಿಳುನಾಡಿನ (Tamil Nadu Rains) ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು (ನವೆಂಬರ್ 11) ರಜೆ ಘೋಷಿಸಲಾಗಿದೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ಚೆನ್ನೈ (Chennai Rain), ತಿರುವಳ್ಳೂರ್ ಮತ್ತು ಕಾಂಚೀಪುರಂ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಿದೆ. ನವೆಂಬರ್ 13ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ ಕೆಲವು ದಿನಗಳಲ್ಲಿ ಚೆನ್ನೈ ಮತ್ತು ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಹೀಗಾಗಿ, ತಿರುವಳ್ಳೂರು ಶಾಲೆಗಳಿಗೆ ರಜೆ ನೀಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆಯಿಂದ ಭಾರೀ ಮಳೆ ಉಂಟಾಗಲಿದೆ ಎಂದು IMD ಸೂಚನೆ ನೀಡಿದೆ.

ಈ ತಿಂಗಳಲ್ಲಿ ಇದು ಎರಡನೇ ಬಾರಿಗೆ ತಮಿಳುನಾಡಿನಲ್ಲಿ ಮಳೆಯಿಂದಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನವೆಂಬರ್ 2ರಂದು ಚೆನ್ನೈ, ರಾಣಿಪೇಟ್, ತಿರುವಳ್ಳೂರು, ವೆಲ್ಲೂರು, ಕಾಂಚೀಪುರಂ, ವಿಲ್ಲುಪುರಂ, ತಿರುವಣ್ಣಾಮಲೈ ಮತ್ತು ಚೆಂಗಲ್ಪಟ್ಟು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಶಾಲೆಗಳನ್ನು ಮುಚ್ಚಲಾಗಿತ್ತು.

ಇದನ್ನೂ ಓದಿ: Karnataka Rain: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಮಳೆ; ಬೆಂಗಳೂರು ಸೇರಿ ಹಲವೆಡೆ ಹಳದಿ ಅಲರ್ಟ್​ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನವೆಂಬರ್ 13ರವರೆಗೆ ಭಾರಿ ಮಳೆ ಮುಂದುವರಿಯಲಿದ್ದು, ನ. 14ರ ವೇಳೆಗೆ ಕಡಿಮೆಯಾಗುವ ಸಾಧ್ಯತೆ ಇದೆ.

ಇಂದು ತಿರುವಳ್ಳೂರು, ಕಾಂಚೀಪುರಂ ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಮುಂದುವರಿದಿರುವುದರಿಂದ ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ಕಲ್ಲಾಕುರಿಚಿ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ತಮಿಳುನಾಡು ಮಾತ್ರವಲ್ಲದೆ ಇಂದು ದಕ್ಷಿಣ ಭಾರತದ ಬೇರೆ ರಾಜ್ಯಗಳಲ್ಲೂ ಮಳೆ ಹೆಚ್ಚಾಗಲಿದೆ. ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಇಂದಿನಿಂದ ನವೆಂಬರ್ 13ರವರೆಗೆ ಆರೆಂಜ್ ಅಲರ್ಟ್‌ ನೀಡಲಾಗಿದೆ. ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಅಂಡಮಾನ್ ಮತ್ತು ನಿಕೋಬಾರ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲೂ ಭಾರೀ ಮಳೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ