AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Rains: ತಮಿಳುನಾಡಿನಲ್ಲಿ ಭಾರೀ ಮಳೆ; ನಾಳೆ ಶಾಲೆಗಳಿಗೆ ರಜೆ, ರೈಲು, ವಿಮಾನಗಳ ಸಂಚಾರ ರದ್ದು

ಇಂದು ಚೆನ್ನೈ ಮತ್ತು ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದ್ದು, ಚೆನ್ನೈನ ಹಲವಾರು ಪ್ರದೇಶಗಳಲ್ಲಿ ತೀವ್ರ ಜಲಾವೃತವಾಗಿ ಸಂಚಾರ ದಟ್ಟಣೆ ಕಂಡುಬಂದಿತ್ತು. ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಹಲವೆಡೆ ವಿಮಾನಗಳು, ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

Chennai Rains: ತಮಿಳುನಾಡಿನಲ್ಲಿ ಭಾರೀ ಮಳೆ; ನಾಳೆ ಶಾಲೆಗಳಿಗೆ ರಜೆ, ರೈಲು, ವಿಮಾನಗಳ ಸಂಚಾರ ರದ್ದು
ತಮಿಳುನಾಡಿನ ಚೆನ್ನೈನಲ್ಲಿ ಮಳೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿಎಂ ಸ್ಟಾಲಿನ್
Follow us
ಸುಷ್ಮಾ ಚಕ್ರೆ
|

Updated on: Oct 15, 2024 | 9:05 PM

ಚೆನ್ನೈ: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತಮಿಳುನಾಡಿನಲ್ಲಿ ಮುಂದಿನ 24 ಗಂಟೆಗಳ ಕಾಲ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 17 ಮತ್ತು 18ರಂದು ಅತಿ ಭಾರೀ ಮಳೆಯ ಅಲರ್ಟ್​ ನೀಡಲಾಗಿದೆ. ಚೆನ್ನೈನ ಬೇಸಿನ್ ಬ್ರಿಡ್ಜ್ ಮತ್ತು ವ್ಯಾಸರಪಾಡಿ ರೈಲು ನಿಲ್ದಾಣಗಳ ನಡುವೆ ನೀರು ನಿಂತಿದ್ದರಿಂದ 4 ಎಕ್ಸ್‌ಪ್ರೆಸ್ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ಇಂದು ಚೆನ್ನೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಭಾರೀ ಮಳೆ ಸುರಿದ ಕಾರಣ ಹಲವಾರು ರೈಲುಗಳು ಮತ್ತು ದೇಶೀಯ ವಿಮಾನಗಳು ರದ್ದಾದವು ಮತ್ತು ನಗರದಲ್ಲಿ ಬಸ್ ಸೇವೆಗಳ ಮೇಲೆ ಪರಿಣಾಮ ಬೀರಿತು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ ಎಂದು IMD ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ. ಚೆನ್ನೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಜಲಾವೃತವಾಗಿದೆ.

ಇದನ್ನೂ ಓದಿ: ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅ.16ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ತಮಿಳುನಾಡು ಮುಖ್ಯಮಂತ್ರಿಗಳ ಕಚೇರಿ (CMO) ಹವಾಮಾನ ಮುನ್ಸೂಚನೆಗಳ ಕಾರಣದಿಂದಾಗಿ ನಾಳೆ (ಅಕ್ಟೋಬರ್ 16) ಸಾರ್ವಜನಿಕ ರಜೆಯನ್ನು ಘೋಷಿಸಿದೆ. ಚೆನ್ನೈನ ಕೆಲವು ಭಾಗಗಳಲ್ಲಿ 16 ಸೆಂ.ಮೀ ಮಳೆಯಾಗಿದೆ. ಈಗಾಗಲೇ NDRF (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಮತ್ತು SDRF (ರಾಜ್ಯ ವಿಪತ್ತು ರೆಸ್ಪಾನ್ಸ್ ಫೋರ್ಸ್)ನ ಸುಮಾರು 26 ತಂಡಗಳನ್ನು 5 ಕರಾವಳಿ ಜಿಲ್ಲೆಗಳಲ್ಲಿ ಇರಿಸಲಾಗಿದೆ. ಚೆನ್ನೈನಲ್ಲಿ 300 ಪರಿಹಾರ ಕೇಂದ್ರಗಳನ್ನು ಮತ್ತು ಹತ್ತಿರದ ಪ್ರದೇಶಗಳಲ್ಲಿ ಸುಮಾರು 931 ಪರಿಹಾರ ಕೇಂದ್ರಗಳನ್ನು ಗುರುತಿಸಲಾಗಿದೆ.

ರೈಲುಗಳು ಮತ್ತು ವಿಮಾನಗಳ ಜೊತೆಗೆ, ರಾಜ್ಯದ ಹಲವಾರು ಪ್ರದೇಶಗಳಲ್ಲಿ ಬಸ್ ಸೇವೆಗಳು ಸಹ ಪರಿಣಾಮ ಬೀರಿವೆ. ಜಲಾವೃತದಿಂದಾಗಿ ದಕ್ಷಿಣ ರೈಲ್ವೆಯು ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಎಕ್ಸ್‌ಪ್ರೆಸ್ ಸೇರಿದಂತೆ 4 ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಿದೆ. ಸಾಕಷ್ಟು ಸಂಖ್ಯೆಯ ಪ್ರಯಾಣಿಕರು ಸೇವೆಗಳನ್ನು ಪಡೆಯಲು ಆಗಮಿಸದ ಕಾರಣ ಹಲವು ದೇಶೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಭಾರೀ ಮಳೆಯ ಎಚ್ಚರಿಕೆಯಿಂದಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‌ಪೇಟ್ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ನಗರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಖಾಸಗಿ ಕಂಪನಿಗಳು ಕನಿಷ್ಠ ಸಿಬ್ಬಂದಿಯೊಂದಿಗೆ ಕೆಲಸ ಮಾಡಲು ಅಥವಾ ತಮ್ಮ ಉದ್ಯೋಗಿಗಳಿಗೆ ನಾಳೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಅ.19 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಸಚಿವರೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿಯನ್ನು ಪರಿಶೀಲಿಸಿದರು. ಸಿಎಂ ಪೌರ ಕಾರ್ಮಿಕರನ್ನು ಚಹಾ ಅಂಗಡಿಗೆ ಕರೆದೊಯ್ದು ಚಹಾ ಮತ್ತು ಬಿಸ್ಕತ್ತುಗಳನ್ನು ನೀಡಿದರು ಮತ್ತು ಅವರೊಂದಿಗೆ ಚಹಾ ಸೇವಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ