AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Rains: ತಮಿಳುನಾಡಿನಲ್ಲಿ ಭಾರೀ ಮಳೆ; ನಾಳೆ ಶಾಲೆಗಳಿಗೆ ರಜೆ, ರೈಲು, ವಿಮಾನಗಳ ಸಂಚಾರ ರದ್ದು

ಇಂದು ಚೆನ್ನೈ ಮತ್ತು ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದ್ದು, ಚೆನ್ನೈನ ಹಲವಾರು ಪ್ರದೇಶಗಳಲ್ಲಿ ತೀವ್ರ ಜಲಾವೃತವಾಗಿ ಸಂಚಾರ ದಟ್ಟಣೆ ಕಂಡುಬಂದಿತ್ತು. ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಹಲವೆಡೆ ವಿಮಾನಗಳು, ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

Chennai Rains: ತಮಿಳುನಾಡಿನಲ್ಲಿ ಭಾರೀ ಮಳೆ; ನಾಳೆ ಶಾಲೆಗಳಿಗೆ ರಜೆ, ರೈಲು, ವಿಮಾನಗಳ ಸಂಚಾರ ರದ್ದು
ತಮಿಳುನಾಡಿನ ಚೆನ್ನೈನಲ್ಲಿ ಮಳೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿಎಂ ಸ್ಟಾಲಿನ್
ಸುಷ್ಮಾ ಚಕ್ರೆ
|

Updated on: Oct 15, 2024 | 9:05 PM

Share

ಚೆನ್ನೈ: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತಮಿಳುನಾಡಿನಲ್ಲಿ ಮುಂದಿನ 24 ಗಂಟೆಗಳ ಕಾಲ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 17 ಮತ್ತು 18ರಂದು ಅತಿ ಭಾರೀ ಮಳೆಯ ಅಲರ್ಟ್​ ನೀಡಲಾಗಿದೆ. ಚೆನ್ನೈನ ಬೇಸಿನ್ ಬ್ರಿಡ್ಜ್ ಮತ್ತು ವ್ಯಾಸರಪಾಡಿ ರೈಲು ನಿಲ್ದಾಣಗಳ ನಡುವೆ ನೀರು ನಿಂತಿದ್ದರಿಂದ 4 ಎಕ್ಸ್‌ಪ್ರೆಸ್ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ಇಂದು ಚೆನ್ನೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಭಾರೀ ಮಳೆ ಸುರಿದ ಕಾರಣ ಹಲವಾರು ರೈಲುಗಳು ಮತ್ತು ದೇಶೀಯ ವಿಮಾನಗಳು ರದ್ದಾದವು ಮತ್ತು ನಗರದಲ್ಲಿ ಬಸ್ ಸೇವೆಗಳ ಮೇಲೆ ಪರಿಣಾಮ ಬೀರಿತು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ ಎಂದು IMD ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ. ಚೆನ್ನೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಜಲಾವೃತವಾಗಿದೆ.

ಇದನ್ನೂ ಓದಿ: ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅ.16ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ತಮಿಳುನಾಡು ಮುಖ್ಯಮಂತ್ರಿಗಳ ಕಚೇರಿ (CMO) ಹವಾಮಾನ ಮುನ್ಸೂಚನೆಗಳ ಕಾರಣದಿಂದಾಗಿ ನಾಳೆ (ಅಕ್ಟೋಬರ್ 16) ಸಾರ್ವಜನಿಕ ರಜೆಯನ್ನು ಘೋಷಿಸಿದೆ. ಚೆನ್ನೈನ ಕೆಲವು ಭಾಗಗಳಲ್ಲಿ 16 ಸೆಂ.ಮೀ ಮಳೆಯಾಗಿದೆ. ಈಗಾಗಲೇ NDRF (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಮತ್ತು SDRF (ರಾಜ್ಯ ವಿಪತ್ತು ರೆಸ್ಪಾನ್ಸ್ ಫೋರ್ಸ್)ನ ಸುಮಾರು 26 ತಂಡಗಳನ್ನು 5 ಕರಾವಳಿ ಜಿಲ್ಲೆಗಳಲ್ಲಿ ಇರಿಸಲಾಗಿದೆ. ಚೆನ್ನೈನಲ್ಲಿ 300 ಪರಿಹಾರ ಕೇಂದ್ರಗಳನ್ನು ಮತ್ತು ಹತ್ತಿರದ ಪ್ರದೇಶಗಳಲ್ಲಿ ಸುಮಾರು 931 ಪರಿಹಾರ ಕೇಂದ್ರಗಳನ್ನು ಗುರುತಿಸಲಾಗಿದೆ.

ರೈಲುಗಳು ಮತ್ತು ವಿಮಾನಗಳ ಜೊತೆಗೆ, ರಾಜ್ಯದ ಹಲವಾರು ಪ್ರದೇಶಗಳಲ್ಲಿ ಬಸ್ ಸೇವೆಗಳು ಸಹ ಪರಿಣಾಮ ಬೀರಿವೆ. ಜಲಾವೃತದಿಂದಾಗಿ ದಕ್ಷಿಣ ರೈಲ್ವೆಯು ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಎಕ್ಸ್‌ಪ್ರೆಸ್ ಸೇರಿದಂತೆ 4 ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಿದೆ. ಸಾಕಷ್ಟು ಸಂಖ್ಯೆಯ ಪ್ರಯಾಣಿಕರು ಸೇವೆಗಳನ್ನು ಪಡೆಯಲು ಆಗಮಿಸದ ಕಾರಣ ಹಲವು ದೇಶೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಭಾರೀ ಮಳೆಯ ಎಚ್ಚರಿಕೆಯಿಂದಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‌ಪೇಟ್ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ನಗರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಖಾಸಗಿ ಕಂಪನಿಗಳು ಕನಿಷ್ಠ ಸಿಬ್ಬಂದಿಯೊಂದಿಗೆ ಕೆಲಸ ಮಾಡಲು ಅಥವಾ ತಮ್ಮ ಉದ್ಯೋಗಿಗಳಿಗೆ ನಾಳೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಅ.19 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಸಚಿವರೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿಯನ್ನು ಪರಿಶೀಲಿಸಿದರು. ಸಿಎಂ ಪೌರ ಕಾರ್ಮಿಕರನ್ನು ಚಹಾ ಅಂಗಡಿಗೆ ಕರೆದೊಯ್ದು ಚಹಾ ಮತ್ತು ಬಿಸ್ಕತ್ತುಗಳನ್ನು ನೀಡಿದರು ಮತ್ತು ಅವರೊಂದಿಗೆ ಚಹಾ ಸೇವಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ