AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರದೇಶ ಟೋಲ್ ಸಿಬ್ಬಂದಿ ಜತೆ ತಮಿಳುನಾಡು ವಿದ್ಯಾರ್ಥಿಗಳ ಜಗಳ, ವಾಹನ ಸಂಚಾರಕ್ಕೆ ಅಡ್ಡಿ

ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಕಾನೂನು ವಿದ್ಯಾರ್ಥಿಗಳನ್ನು ಹಿಡಿದು ನಿಲ್ಲಿಸಿ ಟೋಲ್ ಪ್ಲಾಜಾದಲ್ಲಿ ವಾಹನಗಳಿಗೆ ತೊಂದರೆಯಾಗದಂತೆ ನೋಡಿಕೊಂಡರೂ ಘರ್ಷಣೆ ಕೆಲಕಾಲ ಮುಂದುವರಿಯಿತು

ಆಂಧ್ರ ಪ್ರದೇಶ ಟೋಲ್ ಸಿಬ್ಬಂದಿ ಜತೆ ತಮಿಳುನಾಡು ವಿದ್ಯಾರ್ಥಿಗಳ ಜಗಳ, ವಾಹನ ಸಂಚಾರಕ್ಕೆ ಅಡ್ಡಿ
ಟೋಲ್ ಸಿಬ್ಬಂದಿ ಜತೆ ವಿದ್ಯಾರ್ಥಿಗಳ ಜಗಳ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 24, 2022 | 12:55 PM

Share

ಪಾವತಿ ಸಂಬಂಧಿತ ವಿಷಯಕ್ಕೆ ಆಂಧ್ರಪ್ರದೇಶದ (Andhra Pradesh) ತಿರುಪತಿಯ ಟೋಲ್ ಪ್ಲಾಜಾದಲ್ಲಿ ಭಾನುವಾರ ತಮಿಳುನಾಡಿನ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು (Tamil Nadu) ತಡೆದು ನಿಲ್ಲಿಸಿದ್ದಕ್ಕೆ ವಾಗ್ವಾದ ನಡೆದು ಪರಸ್ಪರ ಹೊಡೆದಾಡಿದ ಘಟನೆ ನಡೆದಿದೆ ವಿದ್ಯಾರ್ಥಿಗಳು ಟೋಲ್ ಬೂತ್ ಸಿಬ್ಬಂದಿಯ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ, ಅಲ್ಲಿದ್ದ ಕೆಲವು ವಾಹನಗಳಿಗೆ ಹಾನಿ ಮಾಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಕಾನೂನು ವಿದ್ಯಾರ್ಥಿಗಳನ್ನು ಹಿಡಿದು ನಿಲ್ಲಿಸಿ ಟೋಲ್ ಪ್ಲಾಜಾದಲ್ಲಿ ವಾಹನಗಳಿಗೆ ತೊಂದರೆಯಾಗದಂತೆ ನೋಡಿಕೊಂಡರೂ ಘರ್ಷಣೆ ಕೆಲಕಾಲ ಮುಂದುವರಿಯಿತು ಎಂದು ಎನ್​​ಡಿಟಿವಿ ವರದಿ ಮಾಡಿದೆ.ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದಾಗ ಕಾನೂನು ವಿದ್ಯಾರ್ಥಿಯೊಬ್ಬನ ಫಾಸ್ಟ್‌ಟ್ಯಾಗ್ ಸರಿಯಾಗಿ ನಿರ್ವಹಿಸದ ಕಾರಣ ಟೋಲ್ ಪ್ಲಾಜಾದಲ್ಲಿ ವಾಹನ ನಿಲ್ಲಿಸಲಾಗಿತ್ತು. ನಂತರ ವಿದ್ಯಾರ್ಥಿಯಲ್ಲಿ ಆತನ ಕಾರನ್ನು ಹಿಂದಕ್ಕೆ ಸರಿಸಿ ಹಿಂದೆ ಸರತಿಯಲ್ಲಿದ್ದ ಇತರ ವಾಹನಗಳಿಗೆ ದಾರಿ ಮಾಡಿಕೊಡಲು ಕೇಳಲಾಯಿತು.ಇದರಿಂದ ಕುಪಿತಗೊಂಡ ವಿದ್ಯಾರ್ಥಿಗಳು ಸಿಬ್ಬಂದಿ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಇತರ ವಾಹನಗಳಿಗೆ ತೊಂದರೆ ಮಾಡದಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ಆದರೆ ವಿದ್ಯಾರ್ಥಿಗಳು ಪಟ್ಟುಬಿಡದೆ ತಮಿಳುನಾಡು ನೋಂದಣಿ ಹೊಂದಿರುವ ವಾಹನಗಳಿಗೆ ಮಾತ್ರ ದಾರಿ ಮಾಡಿಕೊಟ್ಟು ಆಂಧ್ರಪ್ರದೇಶದ ವಾಹನಗಳನ್ನು ಹಾದು ಹೋಗದಂತೆ ತಡೆದಿದ್ದಾರೆ ಎನ್ನಲಾಗಿದೆ. ಇದು ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಗುಂಪಿನ ನಡುವೆ ಭಾರೀ ವಾಗ್ವಾದಕ್ಕೆ ಕಾರಣವಾಯಿತು.

ಘಟನೆಯ ಸಂಪೂರ್ಣ ತನಿಖೆಯನ್ನು ಪೊಲೀಸರು ಆರಂಭಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Published On - 12:54 pm, Mon, 24 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?