AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ತೊಡೆಗೆ ಒದ್ದ ಶಿಕ್ಷಕ ಅರೆಸ್ಟ್​

ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ ಸರ್ಕಾರಿ ಆದಿ ದ್ರಾವಿಡರ್​ ಮಾಧ್ಯಮಿಕ ಶಾಲೆಯ ಭೌತಶಾಸ್ತ್ರ ಪ್ರಾಧ್ಯಾಪಕರು.

Video: 12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ತೊಡೆಗೆ ಒದ್ದ ಶಿಕ್ಷಕ ಅರೆಸ್ಟ್​
ವಿದ್ಯಾರ್ಥಿಗೆ ಥಳಿಸುತ್ತಿರುವ ಶಿಕ್ಷಕ
TV9 Web
| Edited By: |

Updated on: Oct 16, 2021 | 4:14 PM

Share

ಚೆನ್ನೈ: 12ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಇಲ್ಲಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ವಿಡಿಯೋ ಸೋಷಿಯಲ್​ ಮೀಡಿಯಾ (Social Media)ಗಳಲ್ಲಿ ಸಿಕ್ಕಾಪಟೆ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕರು ತಮಿಳುನಾಡು ಶಿಕ್ಷಣ ಸಚಿವ ಅಂಬಿಲ್​ ಮಹೇಶ್​ ಪೊಯ್ಯಾಮೋಜಿ ಅವರನ್ನು ಒತ್ತಾಯಿಸಿದ್ದರು.  ಇದೀಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ. 

ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ ಸರ್ಕಾರಿ ಆದಿ ದ್ರಾವಿಡರ್​ ಮಾಧ್ಯಮಿಕ ಶಾಲೆಯ ಭೌತಶಾಸ್ತ್ರ ಪ್ರಾಧ್ಯಾಪಕರು. ಇವರು 12ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಬೆತ್ತದಿಂದ ಮನಸಿಗೆ ಬಂದಂತೆ ಥಳಿಸಿದ್ದಾರೆ. ಆ ವಿದ್ಯಾರ್ಥಿಗೆ ತೊಡೆಯ ಮೇಲೆ ಒದ್ದಿದ್ದಾರೆ. ಅದೇ ಸಮಯಕ್ಕೆ ಕ್ಲಾಸ್​​ನಲ್ಲಿದ್ದ ಇನ್ನೊಬ್ಬ ವಿದ್ಯಾರ್ಥಿ ಅದನ್ನು ವಿಡಿಯೋ ಮಾಡಿ ಸೋಷಿಯಲ್​ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಇದು ಆ ಶಿಕ್ಷಕನಿಗೂ ಗೊತ್ತಿರಲಿಲ್ಲ.

ಸದ್ಯ ಶಿಕ್ಷಕನ ವಿರುದ್ಧ ಪೊಲೀಸರು ಎಸ್​ಸಿ/ಎಸ್​ಟಿ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಆ ವಿದ್ಯಾರ್ಥಿ ತಾನು ಭೌತಶಾಸ್ತ್ರ ರೆಕಾರ್ಡ್​ ನೋಟ್​ಬುಕ್​ ಸಂಗ್ರಹಿಸಲು ಅನುಮತಿ ಪಡೆದಿದ್ದ. ಆದರೆ ತರಗತಿಗೆ ಬಂಕ್​ ಮಾಡಿದ್ದ. ಇದರಿಂದ ಕೋಪಗೊಂಡು ಹೊಡೆದಿದ್ದಾಗಿ ಆ ಶಿಕ್ಷಕ ವಿಚಾರಣೆ ವೇಳೆ ತಿಳಿಸಿದ್ದಾರೆ.  ಅಷ್ಟೇ ಅಲ್ಲ, ಈತ ತಾನು ತರಗತಿಗೆ ಬಂಕ್​ ಮಾಡುವುದಲ್ಲದೆ, ಕಾಲೇಜಿನ ಮೂರನೇ ಫ್ಲೋರ್​ಗೆ ಹೋಗಿ, ಅಲ್ಲಿನ ಏಳುಮಂದಿಯನ್ನು ಕರೆದುಕೊಂಡು ಹೋಗಿದ್ದಾನೆ. ಅದಾದ ನಂತರ ಮುಖ್ಯಶಿಕ್ಷಕರು ತರಗತಿ ಪರಿಶೀಲನೆಗೆ ಬಂದು, ಈ ವಿದ್ಯಾರ್ಥಿಗಳ ಬಗ್ಗೆ ಕೇಳಿದ್ದಾರೆ. ಆದರೆ ಉಳಿದ ವಿದ್ಯಾರ್ಥಿಗಳು ಏನೂ ಉತ್ತರ ಕೊಡಲಿಲ್ಲ ಎಂದೂ ತಿಳಿಸಿದ್ದಾರೆ.  ನಾನೂ ಏಳೂ  ವಿದ್ಯಾರ್ಥಿಗಳನ್ನೂ ಹೊಡೆದಿದ್ದೇನೆ. ಆದರೆ ಈ ವಿದ್ಯಾರ್ಥಿ ಸುಳ್ಳು ಹೇಳಿದ್ದಾನೆ. ಉಳಿದವರು ಕೂಡ ತರಗತಿ ಬಂಕ್​ ಮಾಡಲು ಕಾರಣನಾಗಿದ್ದಾನೆ. ಹಾಗಾಗಿ ಸ್ವಲ್ಪ ಜಾಸ್ತಿ ಪ್ರಮಾಣದಲ್ಲಿ ಹೊಡೆದಿದ್ದೇನೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್​’ ಟೀಸರ್​ನಲ್ಲಿ ದಲಿತರ ಪರ ಧ್ವನಿ ಎತ್ತಿದ ಸೂರ್ಯ; ಸಿನಿಪ್ರಿಯರಿಂದ ಸಖತ್​ ರೆಸ್ಪಾನ್ಸ್​

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್