AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ತೊಡೆಗೆ ಒದ್ದ ಶಿಕ್ಷಕ ಅರೆಸ್ಟ್​

ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ ಸರ್ಕಾರಿ ಆದಿ ದ್ರಾವಿಡರ್​ ಮಾಧ್ಯಮಿಕ ಶಾಲೆಯ ಭೌತಶಾಸ್ತ್ರ ಪ್ರಾಧ್ಯಾಪಕರು.

Video: 12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ತೊಡೆಗೆ ಒದ್ದ ಶಿಕ್ಷಕ ಅರೆಸ್ಟ್​
ವಿದ್ಯಾರ್ಥಿಗೆ ಥಳಿಸುತ್ತಿರುವ ಶಿಕ್ಷಕ
TV9 Web
| Edited By: |

Updated on: Oct 16, 2021 | 4:14 PM

Share

ಚೆನ್ನೈ: 12ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಇಲ್ಲಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ವಿಡಿಯೋ ಸೋಷಿಯಲ್​ ಮೀಡಿಯಾ (Social Media)ಗಳಲ್ಲಿ ಸಿಕ್ಕಾಪಟೆ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕರು ತಮಿಳುನಾಡು ಶಿಕ್ಷಣ ಸಚಿವ ಅಂಬಿಲ್​ ಮಹೇಶ್​ ಪೊಯ್ಯಾಮೋಜಿ ಅವರನ್ನು ಒತ್ತಾಯಿಸಿದ್ದರು.  ಇದೀಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ. 

ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ ಸರ್ಕಾರಿ ಆದಿ ದ್ರಾವಿಡರ್​ ಮಾಧ್ಯಮಿಕ ಶಾಲೆಯ ಭೌತಶಾಸ್ತ್ರ ಪ್ರಾಧ್ಯಾಪಕರು. ಇವರು 12ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಬೆತ್ತದಿಂದ ಮನಸಿಗೆ ಬಂದಂತೆ ಥಳಿಸಿದ್ದಾರೆ. ಆ ವಿದ್ಯಾರ್ಥಿಗೆ ತೊಡೆಯ ಮೇಲೆ ಒದ್ದಿದ್ದಾರೆ. ಅದೇ ಸಮಯಕ್ಕೆ ಕ್ಲಾಸ್​​ನಲ್ಲಿದ್ದ ಇನ್ನೊಬ್ಬ ವಿದ್ಯಾರ್ಥಿ ಅದನ್ನು ವಿಡಿಯೋ ಮಾಡಿ ಸೋಷಿಯಲ್​ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಇದು ಆ ಶಿಕ್ಷಕನಿಗೂ ಗೊತ್ತಿರಲಿಲ್ಲ.

ಸದ್ಯ ಶಿಕ್ಷಕನ ವಿರುದ್ಧ ಪೊಲೀಸರು ಎಸ್​ಸಿ/ಎಸ್​ಟಿ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಆ ವಿದ್ಯಾರ್ಥಿ ತಾನು ಭೌತಶಾಸ್ತ್ರ ರೆಕಾರ್ಡ್​ ನೋಟ್​ಬುಕ್​ ಸಂಗ್ರಹಿಸಲು ಅನುಮತಿ ಪಡೆದಿದ್ದ. ಆದರೆ ತರಗತಿಗೆ ಬಂಕ್​ ಮಾಡಿದ್ದ. ಇದರಿಂದ ಕೋಪಗೊಂಡು ಹೊಡೆದಿದ್ದಾಗಿ ಆ ಶಿಕ್ಷಕ ವಿಚಾರಣೆ ವೇಳೆ ತಿಳಿಸಿದ್ದಾರೆ.  ಅಷ್ಟೇ ಅಲ್ಲ, ಈತ ತಾನು ತರಗತಿಗೆ ಬಂಕ್​ ಮಾಡುವುದಲ್ಲದೆ, ಕಾಲೇಜಿನ ಮೂರನೇ ಫ್ಲೋರ್​ಗೆ ಹೋಗಿ, ಅಲ್ಲಿನ ಏಳುಮಂದಿಯನ್ನು ಕರೆದುಕೊಂಡು ಹೋಗಿದ್ದಾನೆ. ಅದಾದ ನಂತರ ಮುಖ್ಯಶಿಕ್ಷಕರು ತರಗತಿ ಪರಿಶೀಲನೆಗೆ ಬಂದು, ಈ ವಿದ್ಯಾರ್ಥಿಗಳ ಬಗ್ಗೆ ಕೇಳಿದ್ದಾರೆ. ಆದರೆ ಉಳಿದ ವಿದ್ಯಾರ್ಥಿಗಳು ಏನೂ ಉತ್ತರ ಕೊಡಲಿಲ್ಲ ಎಂದೂ ತಿಳಿಸಿದ್ದಾರೆ.  ನಾನೂ ಏಳೂ  ವಿದ್ಯಾರ್ಥಿಗಳನ್ನೂ ಹೊಡೆದಿದ್ದೇನೆ. ಆದರೆ ಈ ವಿದ್ಯಾರ್ಥಿ ಸುಳ್ಳು ಹೇಳಿದ್ದಾನೆ. ಉಳಿದವರು ಕೂಡ ತರಗತಿ ಬಂಕ್​ ಮಾಡಲು ಕಾರಣನಾಗಿದ್ದಾನೆ. ಹಾಗಾಗಿ ಸ್ವಲ್ಪ ಜಾಸ್ತಿ ಪ್ರಮಾಣದಲ್ಲಿ ಹೊಡೆದಿದ್ದೇನೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್​’ ಟೀಸರ್​ನಲ್ಲಿ ದಲಿತರ ಪರ ಧ್ವನಿ ಎತ್ತಿದ ಸೂರ್ಯ; ಸಿನಿಪ್ರಿಯರಿಂದ ಸಖತ್​ ರೆಸ್ಪಾನ್ಸ್​

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್