AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ತೊಡೆಗೆ ಒದ್ದ ಶಿಕ್ಷಕ ಅರೆಸ್ಟ್​

ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ ಸರ್ಕಾರಿ ಆದಿ ದ್ರಾವಿಡರ್​ ಮಾಧ್ಯಮಿಕ ಶಾಲೆಯ ಭೌತಶಾಸ್ತ್ರ ಪ್ರಾಧ್ಯಾಪಕರು.

Video: 12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ತೊಡೆಗೆ ಒದ್ದ ಶಿಕ್ಷಕ ಅರೆಸ್ಟ್​
ವಿದ್ಯಾರ್ಥಿಗೆ ಥಳಿಸುತ್ತಿರುವ ಶಿಕ್ಷಕ
TV9 Web
| Edited By: |

Updated on: Oct 16, 2021 | 4:14 PM

Share

ಚೆನ್ನೈ: 12ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಇಲ್ಲಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ವಿಡಿಯೋ ಸೋಷಿಯಲ್​ ಮೀಡಿಯಾ (Social Media)ಗಳಲ್ಲಿ ಸಿಕ್ಕಾಪಟೆ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕರು ತಮಿಳುನಾಡು ಶಿಕ್ಷಣ ಸಚಿವ ಅಂಬಿಲ್​ ಮಹೇಶ್​ ಪೊಯ್ಯಾಮೋಜಿ ಅವರನ್ನು ಒತ್ತಾಯಿಸಿದ್ದರು.  ಇದೀಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ. 

ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ ಸರ್ಕಾರಿ ಆದಿ ದ್ರಾವಿಡರ್​ ಮಾಧ್ಯಮಿಕ ಶಾಲೆಯ ಭೌತಶಾಸ್ತ್ರ ಪ್ರಾಧ್ಯಾಪಕರು. ಇವರು 12ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಬೆತ್ತದಿಂದ ಮನಸಿಗೆ ಬಂದಂತೆ ಥಳಿಸಿದ್ದಾರೆ. ಆ ವಿದ್ಯಾರ್ಥಿಗೆ ತೊಡೆಯ ಮೇಲೆ ಒದ್ದಿದ್ದಾರೆ. ಅದೇ ಸಮಯಕ್ಕೆ ಕ್ಲಾಸ್​​ನಲ್ಲಿದ್ದ ಇನ್ನೊಬ್ಬ ವಿದ್ಯಾರ್ಥಿ ಅದನ್ನು ವಿಡಿಯೋ ಮಾಡಿ ಸೋಷಿಯಲ್​ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಇದು ಆ ಶಿಕ್ಷಕನಿಗೂ ಗೊತ್ತಿರಲಿಲ್ಲ.

ಸದ್ಯ ಶಿಕ್ಷಕನ ವಿರುದ್ಧ ಪೊಲೀಸರು ಎಸ್​ಸಿ/ಎಸ್​ಟಿ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಆ ವಿದ್ಯಾರ್ಥಿ ತಾನು ಭೌತಶಾಸ್ತ್ರ ರೆಕಾರ್ಡ್​ ನೋಟ್​ಬುಕ್​ ಸಂಗ್ರಹಿಸಲು ಅನುಮತಿ ಪಡೆದಿದ್ದ. ಆದರೆ ತರಗತಿಗೆ ಬಂಕ್​ ಮಾಡಿದ್ದ. ಇದರಿಂದ ಕೋಪಗೊಂಡು ಹೊಡೆದಿದ್ದಾಗಿ ಆ ಶಿಕ್ಷಕ ವಿಚಾರಣೆ ವೇಳೆ ತಿಳಿಸಿದ್ದಾರೆ.  ಅಷ್ಟೇ ಅಲ್ಲ, ಈತ ತಾನು ತರಗತಿಗೆ ಬಂಕ್​ ಮಾಡುವುದಲ್ಲದೆ, ಕಾಲೇಜಿನ ಮೂರನೇ ಫ್ಲೋರ್​ಗೆ ಹೋಗಿ, ಅಲ್ಲಿನ ಏಳುಮಂದಿಯನ್ನು ಕರೆದುಕೊಂಡು ಹೋಗಿದ್ದಾನೆ. ಅದಾದ ನಂತರ ಮುಖ್ಯಶಿಕ್ಷಕರು ತರಗತಿ ಪರಿಶೀಲನೆಗೆ ಬಂದು, ಈ ವಿದ್ಯಾರ್ಥಿಗಳ ಬಗ್ಗೆ ಕೇಳಿದ್ದಾರೆ. ಆದರೆ ಉಳಿದ ವಿದ್ಯಾರ್ಥಿಗಳು ಏನೂ ಉತ್ತರ ಕೊಡಲಿಲ್ಲ ಎಂದೂ ತಿಳಿಸಿದ್ದಾರೆ.  ನಾನೂ ಏಳೂ  ವಿದ್ಯಾರ್ಥಿಗಳನ್ನೂ ಹೊಡೆದಿದ್ದೇನೆ. ಆದರೆ ಈ ವಿದ್ಯಾರ್ಥಿ ಸುಳ್ಳು ಹೇಳಿದ್ದಾನೆ. ಉಳಿದವರು ಕೂಡ ತರಗತಿ ಬಂಕ್​ ಮಾಡಲು ಕಾರಣನಾಗಿದ್ದಾನೆ. ಹಾಗಾಗಿ ಸ್ವಲ್ಪ ಜಾಸ್ತಿ ಪ್ರಮಾಣದಲ್ಲಿ ಹೊಡೆದಿದ್ದೇನೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್​’ ಟೀಸರ್​ನಲ್ಲಿ ದಲಿತರ ಪರ ಧ್ವನಿ ಎತ್ತಿದ ಸೂರ್ಯ; ಸಿನಿಪ್ರಿಯರಿಂದ ಸಖತ್​ ರೆಸ್ಪಾನ್ಸ್​

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ