AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಳ್ಳತನ ಮಾಡಲು ಗೋಡೆ ಕೊರೆದು ಮದ್ಯದಂಗಡಿಗೆ ನುಗ್ಗಿದ ಕಳ್ಳರು ಕಂಠಪೂರ್ತಿ ಕುಡಿದು ಸಿಕ್ಕಿಬಿದ್ದ ವಿಡಿಯೋ ವೈರಲ್

ಮದ್ಯದಂಗಡಿಯನ್ನು ಪ್ರವೇಶಿಸಲು ಗೋಡೆಗೆ ದೊಡ್ಡ ರಂಧ್ರವನ್ನು ಕೊರೆದ ಕಳ್ಳರು ಒಳಗೆ ಹೋದ ನಂತರ ಅಂಗಡಿಯಲ್ಲಿ ಇಟ್ಟಿದ್ದ ಮದ್ಯವನ್ನು ಕುಡಿಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ಪ್ರಜ್ಞೆಯನ್ನು ಕಳೆದುಕೊಂಡರು.

Viral Video: ಕಳ್ಳತನ ಮಾಡಲು ಗೋಡೆ ಕೊರೆದು ಮದ್ಯದಂಗಡಿಗೆ ನುಗ್ಗಿದ ಕಳ್ಳರು ಕಂಠಪೂರ್ತಿ ಕುಡಿದು ಸಿಕ್ಕಿಬಿದ್ದ ವಿಡಿಯೋ ವೈರಲ್
ಕಳ್ಳತನ ಮಾಡಲು ಗೋಡೆ ಕೊರೆದು ಮದ್ಯದಂಗಡಿಗೆ ನುಗ್ಗಿದ ಕಳ್ಳರು
TV9 Web
| Updated By: ಸುಷ್ಮಾ ಚಕ್ರೆ|

Updated on:Sep 05, 2022 | 3:47 PM

Share

ಚೆನ್ನೈ: ಏನೇನೋ ಮಾಸ್ಟರ್ ಪ್ಲಾನ್ ಮಾಡಿ ಕಳ್ಳತನ ಮಾಡುವ ಎಷ್ಟೋ ಕಳ್ಳರಿದ್ದಾರೆ. ಆದರೆ, ತಮಿಳುನಾಡಿನ ತಿರುವಳ್ಳೂರಿನಲ್ಲಿ ಕುಡಿತದ ನಶೆಯಲ್ಲಿ ಮೈಮರೆತು ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇಬ್ಬರು ಕಳ್ಳರು ಮದ್ಯದಂಗಡಿಯ ಗೋಡೆ ಕೊರೆದು, ಒಳಗೆ ನುಗ್ಗಿ ಅಲ್ಲಿದ್ದ ಮದ್ಯ ಸೇವಿಸಿದ್ದಾರೆ. ಕೊನೆಗೆ ಮೈಮೇಲೆ ಪ್ರಜ್ಞೆಯೇ ಇಲ್ಲದಂತೆ ಬಿದ್ದಿದ್ದ ಅವರನ್ನು ತಮಿಳುನಾಡಿನ ಪೊಲೀಸರು ಹೊರಗೆ ಎಳೆದು ತಂದಿದ್ದಾರೆ.

ಕದಿಯಲು ಹೋಗಿ, ಕುಡಿಯುತ್ತಾ ಕುಳಿತು ಸಿಕ್ಕಿಬಿದ್ದ ಈ ಇಬ್ಬರು ಕಳ್ಳರನ್ನು ಪಳ್ಳಿಕರಣೈ ನಿವಾಸಿ ಸತೀಶ್ ಮತ್ತು ವಿಲುಪುರಂ ಮೂಲದ ಮುನಿಯನ್ ಎಂದು ಗುರುತಿಸಲಾಗಿದೆ. ಇವರಿಬ್ಬರಿಂದ 14,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಕವರಾಯಪೆಟ್ಟೈನಲ್ಲಿರುವ ಸರ್ಕಾರಿ ಟಾಸ್ಮಾಕ್ ಮದ್ಯದ ಅಂಗಡಿಯ ಬಾಗಿಲು ಮುಚ್ಚಿದ ನಂತರ ಇಬ್ಬರು ಕಳ್ಳರು ಗೋಡೆ ಕೊರೆದು ಅದರೊಳಗೆ ಪ್ರವೇಶಿಸಿದ್ದರು.

ಇದನ್ನೂ ಓದಿ: ವೈರಲ್ ವಿಡಿಯೋ: ರೆಸ್ಟೊರೆಂಟ್ ನಲ್ಲಿ ಪ್ರೇಮ ನಿವೇದನೆ.. ಹುಡುಗಿ ರಿಜೆಕ್ಟ್ ಮಾಡಿದಾಗ ಹುಡುಗ ಮಾಡಿದ್ದೇನು? ಗೊತ್ತಾದ್ರೆ ನೀವು ಶಾಕ್ ಆಗ್ತೀರಾ!

ಮದ್ಯದಂಗಡಿಯನ್ನು ಪ್ರವೇಶಿಸಲು ಗೋಡೆಗೆ ದೊಡ್ಡ ರಂಧ್ರವನ್ನು ಕೊರೆದ ಕಳ್ಳರು ಒಳಗೆ ಹೋದ ನಂತರ ಅಂಗಡಿಯಲ್ಲಿ ಇಟ್ಟಿದ್ದ ಮದ್ಯವನ್ನು ಕುಡಿಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ಪ್ರಜ್ಞೆಯನ್ನು ಕಳೆದುಕೊಂಡರು. ಅಷ್ಟರಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಗೋಡೆಯ ದೊಡ್ಡ ರಂಧ್ರ ಮತ್ತು ಒಳಗೆ ಮದ್ಯದ ಬಾಟಲಿಗಳೊಂದಿಗೆ ಕುಳಿತಿದ್ದ ಕಳ್ಳರಿಬ್ಬರನ್ನು ನೋಡಿ ಆಘಾತಕ್ಕೊಳಗಾದರು. ನಂತರ ಅವರಿಬ್ಬರನ್ನೂ ಅದೇ ರಂಧ್ರದ ಮೂಲಕ ಹೊರಗೆ ಎಳೆದುಕೊಂಡು ಬರಲಾಯಿತು.

ಕಳ್ಳರನ್ನು ಪಳ್ಳಿಕರಣೈ ನಿವಾಸಿ ಸತೀಶ್ ಮತ್ತು ವಿಲುಪುರಂ ನಿವಾಸಿ ಮುನಿಯನ್ ಎಂದು ಗುರುತಿಸಲಾಗಿದೆ. ಮದ್ಯದಂಗಡಿ ಪ್ರದೇಶದ ಬಳಿಯೇ ಉಳಿದುಕೊಂಡು ಅವರಿಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳ್ಳರು ಗೋಡೆಗೆ ದೊಡ್ಡ ರಂಧ್ರ ಮಾಡಿ ನಗದನ್ನು ದೋಚಲು ಮುಂದಾಗಿದ್ದರು ಎಂಬುದು ವೈರಲ್ ಆಗಿರುವ ವಿಡಿಯೋಗಳಿಂದ ತಿಳಿದು ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Mon, 5 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!