AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷಗಳಿಂದ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ್ದ ತಮಿಳುನಾಡು ಚರ್ಚ್​​​ನ ಪಾದ್ರಿ ಬಂಧನ

ತಾನು 14ರ ಹರೆಯದವಳಾಗಿದ್ದಾಗ ಕಳೆದ 5 ವರ್ಷಗಳಿಂದ ಚರ್ಚ್‌ಗೆ ಭೇಟಿ ನೀಡಿದಾಗಲೆಲ್ಲ ಪಾದ್ರಿ ಬೆದರಿಕೆಯೊಡ್ಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

5 ವರ್ಷಗಳಿಂದ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ್ದ ತಮಿಳುನಾಡು ಚರ್ಚ್​​​ನ ಪಾದ್ರಿ ಬಂಧನ
ಪೋಕ್ಸೋ
TV9 Web
| Edited By: |

Updated on:Jun 20, 2023 | 9:03 PM

Share

ತೂತುಕುಡಿ: 14 ವರ್ಷದ ಬಾಲಕಿಯಾಗಿದ್ದಾಗ ತನ್ನ ಮೇಲೆ ನಿರಂತರ ಲೈಂಗಿಕ ಕಿರುಕುಳ (sexual harassment )ನೀಡಿದ್ದಾರೆ ಎಂದು ತಮಿಳುನಾಡಿನ (Tamil Nadu) ತೂತುಕುಡಿ ಜಿಲ್ಲೆಯ ಕ್ರೈಸ್ತ ಪಾದ್ರಿಯ ವಿರುದ್ಧ ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ, 2012, (POCSO Act) ಅಡಿಯಲ್ಲಿ ಕದಂಬೂರ್ ಎಲ್ಲಾ ಮಹಿಳಾ ಪೊಲೀಸರು ಪಾದ್ರಿಯನ್ನು ಬಂಧಿಸಿದ್ದಾರೆ.ಚಿನ್ನಾಕುಲಂ ಪ್ರದೇಶದ ಸಮೀಪದ ಕೀಳಕೋಟ್ಟೈ ಚರ್ಚ್‌ನ ಪಾದ್ರಿ ವಿನೋದ್ ಜೋಶ್ವಾ (40) ವಿರುದ್ಧ ದೂರು ದಾಖಲಾಗಿದ್ದು, ಮೊಬೈಲ್ ಫೋನ್‌ಗಳಲ್ಲಿ ವಿಡಿಯೊ ಕರೆಗಳು ಮತ್ತು ಪಠ್ಯ ಸಂದೇಶಗಳ ಮೂಲಕ ಆತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ತಾನು 14ರ ಹರೆಯದವಳಾಗಿದ್ದಾಗ ಕಳೆದ 5 ವರ್ಷಗಳಿಂದ ಚರ್ಚ್‌ಗೆ ಭೇಟಿ ನೀಡಿದಾಗಲೆಲ್ಲ ಪಾದ್ರಿ ಬೆದರಿಕೆಯೊಡ್ಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಷಯವನ್ನು ಯಾರಿಗಾದರೂ ಹೇಳಿದರೆ ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.ಇದಕ್ಕೆ ಹೆದರಿ ಭಯಭೀತಳಾದ ಯುವತಿ ತನ್ನ ತಂದೆತಾಯಿಗಳಿಗೆ ಕೂಡಾ ಈ ವಿಷಯ ತಿಳಿಸಿರಲಿಲ್ಲ.

ಇದನ್ನೂ ಓದಿ: ಹೈದರಾಬಾದ್: ಅಪ್ರಾಪ್ತ ಸೋದರಳಿಯನ ಸಹಾಯದಿಂದ ಪತಿಯನ್ನು ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಆದರೆ, ಕಳೆದ ವರ್ಷ ಮದುವೆಯಾದ ನಂತರವೂ ಆತ ಕೆಟ್ಟ್ಟ ಉದ್ದೇಶದಿಂದ ಕರೆ ಮಾಡಿ ಸಂದೇಶ ಕಳುಹಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿನೋದ್ ಕಳೆದ 10 ವರ್ಷಗಳಿಂದ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದು, ಚರ್ಚ್‌ನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಸಹ ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Tue, 20 June 23

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ