AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ಎಲ್ಲರೂ ಪಾಸ್: ತಮಿಳುನಾಡು ಸಿಎಂ ಪಳನಿಸ್ವಾಮಿ

Tamil Nadu: ಇಂಟರ್​ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು.

9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ಎಲ್ಲರೂ ಪಾಸ್: ತಮಿಳುನಾಡು ಸಿಎಂ ಪಳನಿಸ್ವಾಮಿ
ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ
ರಶ್ಮಿ ಕಲ್ಲಕಟ್ಟ
|

Updated on:Feb 25, 2021 | 2:21 PM

Share

ಚೆನ್ನೈ:  9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಎಲ್ಲರನ್ನೂ ಉತ್ತೀರ್ಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕದ ನಡುವೆ ಎಸ್ಎಸ್ಎಲ್​ಸಿ ಮತ್ತು ಪ್ಲಸ್ ಒನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಹೇಳಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ ಪಳನಿಸ್ವಾಮಿ.

ಮೌಲ್ಯ ಮಾಪನ ಹೇಗೆ? ಇಂಟರ್​ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು. ಕಾಲುವಾರ್ಷಿಕ ಮತ್ತು ಅರ್ಧವಾರ್ಷಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಶೇಕಡಾ 80 ಅಂಕ ಮತ್ತು ಹಾಜರಾತಿಯನ್ನು ಪರಿಗಣಿಸಿ ಶೇಕಡಾ 20 ಅಂಕಗಳನ್ನು ನೀಡಲಾಗುವುದು. ಈ ಬಗ್ಗೆ ತಮಿಳುನಾಡು ಶಿಕ್ಷಣ ಇಲಾಖೆ ಶಾಲೆಗಳಿಗೆ ಇನ್ನೂ ಸುತ್ತೋಲೆ ಕಳುಹಿಸಿಲ್ಲ. ಆದಾಗ್ಯೂ, ತಮಿಳುನಾಡು ಸರ್ಕಾರದ ಪರೀಕ್ಷಾ ನಿರ್ದೇಶನಾಲಯ ಬಿಡುಗಡೆ ಮಾಡಿದ ವೇಳಾಪಟ್ಟಿ ಪ್ರಕಾರ 12ನೇ ತರಗತಿಗೆ ಪರೀಕ್ಷೆ ನಡೆಯಲಿದೆ.

12ನೇ ತರಗತಿಗೆ ಮೇ 3ರಿಂದ ಮೇ 21ರವರೆಗೆ ನಡೆಯಲಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ನಡೆಯುತ್ತಿದ್ದ ಪರೀಕ್ಷೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಮುಂದೂಡಿಕೆಯಾಗಿತ್ತು. 2020 ಮಾರ್ಚ್ ತಿಂಗಳಲ್ಲಿ ಕೋವಿಡ್​ನಿಂದಾಗಿ ತಮಿಳುನಾಡಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನಂತರ ಜನವರಿ 19ರಂದು 10 ಮತ್ತು 12ನೇ ತರಗತಿ ಮಕ್ಕಳಿಗೆ ಮಾತ್ರ ತರಗತಿ ಆರಂಭ ಮಾಡಲಾಗಿತ್ತು.

ತಮಿಳುನಾಡಿನಲ್ಲಿ ಬುಧವಾರ 463 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು 6 ಮಂದಿ ಸಾವಿಗೀಡಾಗಿದ್ದಾರೆ.ಇಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 8,49,629ಕ್ಕೆ ತಲುಪಿದ್ದು ಮರಣಸಂಖ್ಯೆ 12,478 ಆಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಚೆನ್ನೈನಲ್ಲ 169 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2,34,837ಕ್ಕೇರಿದೆ. ಇಲ್ಲಿಯವರೆಗೆ 4,145 ಮಂದಿ ಕೊವಿಡ್​ನಿಂದಾಗಿ ಸಾವಿಗೀಡಾಗಿದ್ದಾರೆ. ಬುಧವಾರ 50,395 ಮಾದರಿಗಳನ್ನು ಪರೀಕ್ಷೆಗೊಳಪಡಿಸಿದ್ದು ಈವರೆಗೆ 1,72,72,643 ಮಾದರಿಗಳನ್ನು ಪರೀಕ್ಷಿಸಲಾಗಿದೆ. 29 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಒಂದಂಕಿಯಾಗಿದ್ದು, 33 ಜಿಲ್ಲೆಗಳಲ್ಲಿ ಇಲ್ಲಿಯವರಿಗೆ ಯಾವುದೇ ಸಾವು ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್​ನಲ್ಲಿ ಹೇಳಿದೆ.

 ಇದನ್ನೂ ಓದಿ: ಅಸೆಂಬ್ಲಿ ಚುನಾವಣೆಗೂ ಮುನ್ನ.. ತಮಿಳುನಾಡಿನಲ್ಲಿ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಏರಿಕೆ ಮಾಡಿದ ಸರ್ಕಾರ

Published On - 1:51 pm, Thu, 25 February 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ