AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ನಲ್ಲಿ ಹೊರಟಿದ್ದ ದಲಿತ ಯುವಕರನ್ನು ತಡೆದು, ಥಳಿಸಿ, ಮೊಬೈಲ್, ಹಣ ಕಸಿದುಕೊಂಡು, ಮೂತ್ರ ವಿಸರ್ಜನೆ ಮಾಡಿದ ದುಷ್ಕರ್ಮಿಗಳು

ಬೈಕ್​ನಲ್ಲಿ ಹೊರಟಿದ್ದ ದಲಿತ ಯುವಕನ್ನು ತಡೆದು,  ಥಳಿಸಿ, ಮೊಬೈಲ್, ಹಣ ಕಸಿದುಕೊಂಡು, ಬಟ್ಟೆ ಬಿಚ್ಚಿಸಿ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಬ್ಬರು ದಲಿತರು ಮಣಿಮೂರ್ತೀಶ್ವರಂ ಪ್ರದೇಶದ ನಿವಾಸಿಗಳು, ಹಲ್ಲೆ ಮಾಡಿದ ನಂತರ ಅವರ ಫೋನ್​ಗಳನ್ನೂ ಕಸಿದುಕೊಳ್ಳಲಾಗಿದೆ. ಇದಲ್ಲದೇ ಅವರ ಬಳಿ ಇದ್ದ 5000ರೂ.ಗಳನ್ನು ಗುಂಪು ದೋಚಿ ಪರಾರಿಯಾಗಿದೆ.

ಬೈಕ್​ನಲ್ಲಿ ಹೊರಟಿದ್ದ ದಲಿತ ಯುವಕರನ್ನು ತಡೆದು, ಥಳಿಸಿ, ಮೊಬೈಲ್, ಹಣ ಕಸಿದುಕೊಂಡು, ಮೂತ್ರ ವಿಸರ್ಜನೆ ಮಾಡಿದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Nov 03, 2023 | 2:56 PM

Share

ಬೈಕ್​ನಲ್ಲಿ ಹೊರಟಿದ್ದ ದಲಿತ ಯುವಕನ್ನು ತಡೆದು,  ಥಳಿಸಿ, ಮೊಬೈಲ್, ಹಣ ಕಸಿದುಕೊಂಡು, ಬಟ್ಟೆ ಬಿಚ್ಚಿಸಿ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಬ್ಬರು ದಲಿತರು ಮಣಿಮೂರ್ತೀಶ್ವರಂ ಪ್ರದೇಶದ ನಿವಾಸಿಗಳು, ಹಲ್ಲೆ ಮಾಡಿದ ನಂತರ ಅವರ ಫೋನ್​ಗಳನ್ನೂ ಕಸಿದುಕೊಳ್ಳಲಾಗಿದೆ. ಇದಲ್ಲದೇ ಅವರ ಬಳಿ ಇದ್ದ 5000ರೂ.ಗಳನ್ನು ಗುಂಪು ದೋಚಿ ಪರಾರಿಯಾಗಿದೆ.

ದಲಿತ ಯುವಕರ ಮೇಲೆ ಮೂತ್ರ ವಿಸರ್ಜನೆ ಈ ಯುವಕರು ಮನೆಗೆ ತೆರಳಲು ಯತ್ನಿಸಿದಾಗ ಅವರ ಬಟ್ಟೆ ಬಿಚ್ಚಿಸಿ ಮೂತ್ರ ವಿಸರ್ಜನೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಹೇಗೋ ತಮ್ಮ ಮನೆ ತಲುಪಿದರು. ಗಾಯಗೊಂಡ ಇಬ್ಬರನ್ನೂ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ಓದಿ: Dalit Atrocities: ಕೊಪ್ಪಳದಲ್ಲಿ 30 ವರ್ಷದ ದಲಿತ ಯುವತಿ ಮೇಲೆ ಚಪ್ಪಲಿಯಿಂದ ಹಲ್ಲೆ

ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 392 (ದರೋಡೆ), 397 (ನೋಯಿಸುವ ಪ್ರಯತ್ನದೊಂದಿಗೆ ದರೋಡೆ) ಮತ್ತು ಸೆಕ್ಷನ್ 3 (1)(r), 3 (1)(s), 3 (A ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಆರು ಮಂದಿಯನ್ನು ಕೂಡ ಬಂಧಿಸಿದ್ದಾರೆ.

ದಲಿತ ಯುವಕರಿಬ್ಬರೂ ತಮ್ಮ ಬಳಿ ಹಣವಿಲ್ಲ ಎಂದು ಹೇಳಿದಾಗ ದಾಳಿಕೋರರು ಬೇರೆಯವರಿಂದ ತಮ್ಮ ಖಾತೆಗೆ ಹಣ ವರ್ಗಾಯಿಸುವಂತೆ ಕೇಳಿಕೊಂಡಿದ್ದಾರೆ. ಹಣ ವರ್ಗಾವಣೆ ಆಗುತ್ತಿದ್ದಾಗ ಮತ್ತಿಬ್ಬರು ಇವರ ಬಳಿ ಬಂದರು. ಖಾತೆಗೆ ಹಣ ಬಂದ ನಂತರ ಯುವಕನೊಬ್ಬ ಡೆಬಿಟ್ ಕಾರ್ಡ್ ತೆಗೆದುಕೊಂಡು ಹಣ ತೆಗೆಯಲು ಒತ್ತಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ