AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸರಣಿ ಸ್ಫೋಟ; ಸಾವಿನ ಸಂಖ್ಯೆ 16ಕ್ಕೆ ಏರಿಕೆ

Tamil Nadu cracker blast kills many in Virudhunagar: ತಮಿಳುನಾಡಿನ ವಿರುದುನಗರ್ ಜಿಲ್ಲೆಯಲ್ಲಿ ಏಪ್ರಿಲ್ 19ರಂದು ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಸಂಜೆ 6ರವರೆಗೆ ಬಂದಿರುವ ವರದಿಗಳ ಪ್ರಕಾರ ಸಾವಿನ ಸಂಖ್ಯೆ 16ಕ್ಕೆ ಏರಿದೆ. ಇನ್ನೂ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಬಹುದು.

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸರಣಿ ಸ್ಫೋಟ; ಸಾವಿನ ಸಂಖ್ಯೆ 16ಕ್ಕೆ ಏರಿಕೆ
ಪಟಾಕಿ ಸ್ಫೋಟImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 19, 2026 | 6:27 PM

Share

ವಿರುದುನಗರ: ತಮಿಳುನಾಡಿನ ಪಟಾಕಿ ತಯಾರಿಕಾ ಹಬ್ ಎಂದೇ ಕರೆಯಲ್ಪಡುವ ವಿರುದುನಗರ ಜಿಲ್ಲೆಯಲ್ಲಿ ಇಂದು ಭಾನುವಾರ ಸರಣಿ ಸ್ಫೋಟ (cracker blast) ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕಟ್ಟನಾರ್‌ಪಟ್ಟಿ (Kattanarpatti) ಎಂಬ ಗ್ರಾಮದಲ್ಲಿ ಈ ಘೋರ ದುರಂತ ಸಂಭವಿಸಿದೆ.

ಪಟಾಕಿ ಘಟಕದ ಒಳಗಿನ ರಾಸಾಯನಿಕ ಕೊಠಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಕಾರ್ಖಾನೆಯ ಇತರ ಭಾಗಗಳಿಗೆ ವ್ಯಾಪಿಸಿ, ನಾಲ್ಕೈದು ಭಾರಿ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ 10ಕ್ಕೂ ಹೆಚ್ಚು ಕೊಠಡಿಗಳು ಸಂಪೂರ್ಣವಾಗಿ ಧ್ವಂಸವಾಗಿವೆ.

ಘಟನೆಯಲ್ಲಿ ಇದುವರೆಗೆ 16 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸುಮಾರು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಕಾಶಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ನೋಯ್ಡಾ ಹಿಂಸಾಚಾರದ ಮಾಸ್ಟರ್​ಮೈಂಡ್ ಆದಿತ್ಯ ಆನಂದ್ ಅರೆಸ್ಟ್​

ಅಗ್ನಿಶಾಮಕ ದಳದ ಹಲವಾರು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ. ಅವಶೇಷಗಳಡಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಪತ್ತೆ ಹಚ್ಚಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮುಖ್ಯಮಂತ್ರಿಗಳ ಸಾಂತ್ವನ ಮತ್ತು ಪರಿಹಾರ

ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರು ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

“ವಿರುದುನಗರ ಜಿಲ್ಲೆಯ ಕಟ್ಟನಾರ್‌ಪಟ್ಟಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ವಾರ್ತೆ ಕೇಳಿ ನನಗೆ ಅತೀವ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು,” ಎಂದು ಅವರು ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಕ್ಷಣವೇ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿಕೊಳ್ಳಲು ಸಚಿವರಾದ ಕೆ.ಕೆ.ಎಸ್.ಎಸ್.ಆರ್ ರಾಮಚಂದ್ರನ್ ಮತ್ತು ತಂಗಂ ತೆನ್ನರಸು ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ತಕ್ಷಣದ ಪರಿಹಾರವನ್ನು ಸರ್ಕಾರ ಘೋಷಿಸಿದೆ.

ಇದನ್ನೂ ಓದಿ: ನೇಪಾಳದಲ್ಲಿ ಮಿತಿ ಮೀರಿದ ಹಿಂಸಾಚಾರ; ಪ್ರತಿಭಟನಾಕಾರರಿಂದ ಮಾಜಿ ಪ್ರಧಾನಿಯ ಪತ್ನಿಯ ಸಜೀವ ದಹನ!

ಕಳೆದ ವಾರವಷ್ಟೇ (ಏಪ್ರಿಲ್ 13) ವಿರುದುನಗರ ಜಿಲ್ಲೆಯ ಸಾತ್ತೂರು ಸಮೀಪದ ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಒಂದು ವಾರದ ಅಂತರದಲ್ಲಿ ಎರಡನೇ ದೊಡ್ಡ ದುರಂತ ಸಂಭವಿಸಿರುವುದು ಸ್ಥಳೀಯ ಕಾರ್ಮಿಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸುರಕ್ಷತಾ ನಿಯಮಗಳ ಉಲ್ಲಂಘನೆಯೇ ಈ ಅವಘಡಗಳಿಗೆ ಪ್ರಮುಖ ಕಾರಣ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ
ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ
ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ಫ್ಲ
ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ಫ್ಲ
ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!
ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!
ಸಚಿವ ಜಮೀರ್‌ ಅಹ್ಮದ್‌ JDS ಕಡೆಗೆ? ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಸಚಿವ ಜಮೀರ್‌ ಅಹ್ಮದ್‌ JDS ಕಡೆಗೆ? ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಮೇ 5ರ ನಂತರ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: HDK ಹೊಸ ಬಾಂಬ್
ಮೇ 5ರ ನಂತರ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: HDK ಹೊಸ ಬಾಂಬ್
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು