AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನಿನ ವಾಸನೆಯೆಂದು ಮಹಿಳೆಯನ್ನು ಬಸ್​ನಿಂದ ಕೆಳಗಿಳಿಸಿದ ಕಂಡಕ್ಟರ್; ಘಟನೆ ಬಗ್ಗೆ ಸಿಎಂ ಸ್ಟಾಲಿನ್ ಕಿಡಿ

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ 'ಮೀನಿನ ವಾಸನೆ' ತಡೆಯಲು ಆಗುತ್ತಿಲ್ಲ ಎಂದು ಹೇಳಿ ಮೀನು ಮಾರುವ ಮಹಿಳೆಯನ್ನು ಕಂಡಕ್ಟರ್ ಮತ್ತು ಡ್ರೈವರ್ ಸರ್ಕಾರಿ ಬಸ್‌ನಿಂದ ಕೆಳಗಿಳಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ.

ಮೀನಿನ ವಾಸನೆಯೆಂದು ಮಹಿಳೆಯನ್ನು ಬಸ್​ನಿಂದ ಕೆಳಗಿಳಿಸಿದ ಕಂಡಕ್ಟರ್; ಘಟನೆ ಬಗ್ಗೆ ಸಿಎಂ ಸ್ಟಾಲಿನ್ ಕಿಡಿ
ಮೀನು ವ್ಯಾಪಾರಿ ಸೆಲ್ವಮೇರಿ
TV9 Web
| Updated By: ಸುಷ್ಮಾ ಚಕ್ರೆ|

Updated on:Dec 08, 2021 | 8:45 PM

Share

ಕನ್ಯಾಕುಮಾರಿ: ಬಸ್​ ಎಂದ ಮೇಲೆ ಅದರಲ್ಲಿ ಎಲ್ಲ ವರ್ಗದ ಜನರೂ ಓಡಾಡುತ್ತಾರೆ. ಅದರಲ್ಲೂ ಸರ್ಕಾರಿ ಬಸ್​ನಲ್ಲಿ ಯಾರಿಗೂ ಹತ್ತಬೇಡಿ ಎಂದು ಹೇಳಲು ಸಾಧ್ಯವಿಲ್ಲ. ಜನರ ಓಡಾಟಕ್ಕಾಗಿ ಇರುವ ಸರ್ಕಾರಿ ಬಸ್​ನಲ್ಲಿ ಮೀನಿನ ಬುಟ್ಟಿಯನ್ನು ಹೊತ್ತು ಬಂದಿದ್ದ ಮಹಿಳೆಯೊಬ್ಬರನ್ನು ಆ ಬಸ್​ನ ಕಂಡಕ್ಟರ್​ ಬಲವಂತದಿಂದ ಕೆಳಗಿಳಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ‘ಮೀನಿನ ವಾಸನೆ’ ತಡೆಯಲು ಆಗುತ್ತಿಲ್ಲ ಎಂದು ಹೇಳಿ ಮೀನು ಮಾರುವ ಮಹಿಳೆಯನ್ನು ಕಂಡಕ್ಟರ್ ಮತ್ತು ಡ್ರೈವರ್ ಸರ್ಕಾರಿ ಬಸ್‌ನಿಂದ ಕೆಳಗಿಳಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ.

ಮೀನು ವ್ಯಾಪಾರಿ ಸೆಲ್ವಮೇರಿ ಅವರು ಕನ್ಯಾಕುಮಾರಿಯ ವಾಣಿಯಕುಡಿ ಗ್ರಾಮದವರು. ಆಕೆ ಕುಳಚಲ್ ಬಸ್ ನಿಲ್ದಾಣದಿಂದ ವಾಣಿಯಕುಡಿಗೆ ಹೋಗುವ ಸರ್ಕಾರಿ ಬಸ್‌ಗೆ ಹತ್ತುತ್ತಿದ್ದಾಗ ಕಂಡಕ್ಟರ್ ಆಕೆಯನ್ನು ಬಲವಂತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ. ಇದರಿಂದ ಕೋಪಗೊಂಡ ಆಕೆ ಬಸ್ ನಿಲ್ದಾಣದಲ್ಲಿ ಜೋರಾಗಿ ಕಿರುಚಾಡಿ, ಅಳಲು ಪ್ರಾರಂಭಿಸಿದ್ದಾರೆ. ಇದನ್ನು ಅಲ್ಲಿದ್ದ ಜನರು ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋ ಸರ್ಕಾರಿ ಸಾರಿಗೆ ಅಧಿಕಾರಿಗಳ ಗಮನಕ್ಕೂ ಬಂದಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಮೀನು ಮಾರುವ ಮಹಿಳೆಯನ್ನು ಬಸ್​ನಿಂದ ಕೆಳಗೆ ಇಳಿಸಿದ ಚಾಲಕ ಮತ್ತು ಕಂಡಕ್ಟರ್ ಇಬ್ಬರನ್ನೂ ಕೆಲಸದಿಂದ ವಜಾ ಮಾಡಲಾಗಿದೆ. ಇದೇ ವೇಳೆ ತಮಿಳುನಾಡು ಸಾರಿಗೆ ಇಲಾಖೆಯ ಕನ್ಯಾಕುಮಾರಿ ಜಿಲ್ಲಾ ಉಪನಿರ್ದೇಶಕಿ ಜೆರೋಲಿನ್ ಅವರು ಆ ಮಹಿಳೆಯನ್ನು ಭೇಟಿಯಾಗಿ ತಮ್ಮ ಸಿಬ್ಬಂದಿಯಿಂದ ಆದ ತಪ್ಪಿಗೆ ಕ್ಷಮೆ ಕೋರಿದ್ದಾರೆ.

ಇಷ್ಟೇ ಅಲ್ಲದೆ, ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ತಮ್ಮ ಟ್ವಿಟರ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಕನ್ಯಾಕುಮಾರಿ ಜಿಲ್ಲೆಯಲ್ಲಿ ಮೀನು ಮಾರಾಟ ಮಾಡುತ್ತಿದ್ದ ವೃದ್ಧೆಯನ್ನು ಬಸ್ ಕಂಡಕ್ಟರ್ ಕೆಳಗಿಳಿಸಿದ್ದಾರೆ ಎಂದು ತಿಳಿದು ಆಘಾತವಾಯಿತು. ಮಹಿಳೆಯರ ಅಭ್ಯುದಯಕ್ಕಾಗಿ ರಾಜ್ಯಾದ್ಯಂತ ಕಂಡಕ್ಟರ್‌ಗಳು ಉಚಿತ ಪ್ರಯಾಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿರುವ ಈ ಸಂದರ್ಭದಲ್ಲಿ ಕಂಡಕ್ಟರ್‌ನ ಈ ಕೃತ್ಯ ಖಂಡನೀಯ. ಎಲ್ಲರೂ ಸಮಾನರು ಎಂಬ ವಿಶಾಲ ಮನೋಭಾವದಿಂದ ನಾವೆಲ್ಲರೂ ಯೋಚಿಸಿ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: Tamil Nadu Chopper Crash ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ; ಮೃತರ ಸಂಖ್ಯೆ 13ಕ್ಕೆ  ಏರಿಕೆ

Rajinikanth: ಕಾವೇರಿ ಆಸ್ಪತ್ರೆಗೆ ತೆರಳಿ ರಜಿನಿ ಆರೋಗ್ಯ ವಿಚಾರಿಸಿದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

Published On - 8:28 pm, Wed, 8 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ