AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಸತ್ತರೆ ಮಕ್ಕಳಿಗೆ ಪರಿಹಾರ ಧನ ಸಿಗುತ್ತದೆ ಎಂದು ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮ್ಮ

ಸಿಂಗಲ್ ಮದರ್ ಆಗಿರುವ ಪಾಪ್ಪತಿ ಅವರ ಮಕ್ಕಳು ಕಾಲೇಜಿನಲ್ಲಿ ಓದುತ್ತಿದ್ದಾರೆ. ಮಗಳು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಓದುತ್ತಿದ್ದು ಮಗ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಓದುತ್ತಿದ್ದಾನೆ. ಆಕೆ ಬಡ ಕುಟುಂಬದವಳು. ಯಾರೋ ಅವಳನ್ನು ದಾರಿ ತಪ್ಪಿಸಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾನು ಸತ್ತರೆ ಮಕ್ಕಳಿಗೆ ಪರಿಹಾರ ಧನ ಸಿಗುತ್ತದೆ ಎಂದು ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮ್ಮ
ಸೇಲಂ ಮಹಿಳೆ
ರಶ್ಮಿ ಕಲ್ಲಕಟ್ಟ
|

Updated on:Jul 18, 2023 | 4:44 PM

Share

ಚೆನ್ನೈ ಜುಲೈ 18: ತಮಿಳುನಾಡಿನ  ಸೇಲಂನಲ್ಲಿ (Salem )ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಸಿಗುವ ಪರಿಹಾರದಿಂದ ತನ್ನ ಮಕ್ಕಳ ಕಾಲೇಜು ಶುಲ್ಕವನ್ನು ಪಾವತಿಸಬಹುದು ಎಂಬ ಉದ್ದೇಶದಿಂದ ಆಕೆ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಸೇಲಂ ಕಲೆಕ್ಟರೇಟ್‌ನಲ್ಲಿ ತಾತ್ಕಾಲಿಕ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ಪಾಪ್ಪತಿ ಈ ರೀತಿ ಬಸ್ಸಿನ ಮುಂದೆ ಹಾರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯ 48 ಸೆಕೆಂಡ್‌ಗಳ ಸಿಸಿಟಿವಿ ವಿಡಿಯೊದಲ್ಲಿ ಮಹಿಳೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಾಣಿಸುತ್ತದೆ. ನಂತರ ವೇಗವಾಗಿ ಬರುತ್ತಿದ್ದ ಬಸ್‌ನ ಕಡೆಗೆ ಇದ್ದಕ್ಕಿದ್ದಂತೆ ರಸ್ತೆ ದಾಟುತ್ತಿರುವುದನ್ನು ತೋರಿಸುತ್ತದೆ. ಬಸ್ಸು ಆಕೆಗೆ ಡಿಕ್ಕಿ ಹೊಡೆದು ಆಕೆ ರಸ್ತೆಯಲ್ಲಿ ಬೀಳುತ್ತಿರುವುದು ಕಾಣಿಸುತ್ತದೆ

“ಕಳೆದ ತಿಂಗಳು ಈ ಘಟನೆ ನಡೆದಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಆರಂಭದಲ್ಲಿ, ನಾವು ಅಪಘಾತದಿಂದ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ. ಈಗ ನಾವು ಅದನ್ನು ಬದಲಾಯಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಸಿಂಗಲ್ ಮದರ್ ಆಗಿರುವ ಪಾಪ್ಪತಿ ಅವರ ಮಕ್ಕಳು ಕಾಲೇಜಿನಲ್ಲಿ ಓದುತ್ತಿದ್ದಾರೆ. ಮಗಳು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಓದುತ್ತಿದ್ದು ಮಗ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಓದುತ್ತಿದ್ದಾನೆ. ಆಕೆ ಬಡ ಕುಟುಂಬದವಳು. ಯಾರೋ ಅವಳನ್ನು ದಾರಿ ತಪ್ಪಿಸಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯೇ ವಿಜಯ್ ಅನ್ನು ಕಣಕ್ಕಿಳಿಸಿದೆಯೇ? ತಮಿಳುನಾಡು ರಾಜಕೀಯದಲ್ಲಿ ಹೀಗೊಂದು ಚರ್ಚೆ

ಆದಾಗ್ಯೂ, ಪಾಪ್ಪತಿ ಅವರ ಮಗ ಈ ವರದಿಗಳನ್ನು ನಿರಾಕರಿಸಿದ್ದು, ಅದು “ನಕಲಿ ಸುದ್ದಿ” ಎಂದಿದ್ದಾರೆ. ನಮ್ಮ ಸಂಬಂಧಿಕರು ಶುಲ್ಕ ಪಾವತಿಗೆ ನಮಗೆ ಸಹಾಯ ಮಾಡುತ್ತಿದ್ದಾರೆ. ನಾಳೆ, ಸತ್ಯಗಳು ಹೊರಬರುತ್ತವೆ”ಎಂದು ಆತ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Tue, 18 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ