AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Election 2021: ತಮಿಳುನಾಡಿನಲ್ಲಿ ಅಮಿತ್​ ಶಾ ಪ್ರಚಾರ; ಅಭಿವೃದ್ಧಿ ನಮ್ಮಿಂದ ಮಾತ್ರ ಸಾಧ್ಯವೆಂದ ಗೃಹ ಸಚಿವ

ತಮಿಳುನಾಡಿನ ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರಸೆಲ್ವಂರನ್ನು ತುಂಬ ಹೊಗಳಿದ ಅಮಿತ್​ ಶಾ, ಇವರಿಬ್ಬರೂ ಜತೆಯಾಗಿ ತಮಿಳುನಾಡಿನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಹೇಳಿದರು.

Tamil Nadu Election 2021: ತಮಿಳುನಾಡಿನಲ್ಲಿ ಅಮಿತ್​ ಶಾ ಪ್ರಚಾರ; ಅಭಿವೃದ್ಧಿ ನಮ್ಮಿಂದ ಮಾತ್ರ ಸಾಧ್ಯವೆಂದ ಗೃಹ ಸಚಿವ
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಅಮಿತ್ ಶಾ, ಖುಷ್ಬೂ ಸುಂದರ್​
Lakshmi Hegde
|

Updated on: Apr 03, 2021 | 3:20 PM

Share

ಚೆನ್ನೈ: ಗೃಹ ಸಚಿವ ಅಮಿತ್ ಶಾ ಅವರು ಇಂದು ತಮಿಳುನಾಡಿನಲ್ಲಿ ಮತ ಪ್ರಚಾರ ನಡೆಸಿದರು. ನಟಿ ಖುಷ್ಬೂ ಸುಂದರ್​ ಸ್ಪರ್ಧಿಸಿರುವ ಥೌಸಂಡ್ ಲೈಟ್ ವಿಧಾನಸಭಾ ಕ್ಷೇತ್ರದಿಂದ ಅರ್ಧ ಕಿಮೀ ದೂರ ಇರುವ ತೇನಾಂಪೇಟ್​​ನಲ್ಲಿ ರೋಡ್​ ಶೋ ನಡೆಸಿದರು. ಅಮಿತ್ ಶಾ ಜತೆ ಖುಷ್ಬೂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇತರರು ಇದ್ದರು. ಇನ್ನು ರೋಡ್ ಶೋ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್​ ಶಾ, ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್​ನ್ನು ತೊಡೆದುಹಾಕುವಂತೆ ಮತದಾರರಿಗೆ ಕರೆ ನೀಡಿದರು. ರಾಜ್ಯದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಅಭಿವೃದ್ಧಿಯಾಗುತ್ತದೆ. ಮಹಿಳೆಯರು, ನಿರುದ್ಯೋಗಿಗಳು ಮತ್ತು ಇಲ್ಲಿನ ಮೀನುಗಾರರಿಗೆ ನಾವು ಮಾತ್ರ ಸುರಕ್ಷತೆ ನೀಡಬಲ್ಲೆವು. ಅಲ್ಲದೆ, ತಮಿಳುನಾಡಿನ ಸಂಸ್ಕೃತಿ, ಸಂಪ್ರದಾಯದ ರಕ್ಷಣೆಯೂ ಆಗುತ್ತದೆ ಎಂದು ಹೇಳಿದ್ದಾರೆ.

ಡಿಎಂಕೆ- ಕಾಂಗ್ರೆಸ್​ನ ಭ್ರಷ್ಟಾಚಾರ-ವಂಶರಾಜಕಾರಣಕ್ಕೆ ಫುಲ್​ಸ್ಟಾಪ್​ ಇಡಬೇಕು. ಅಂದಾಗ ತಮಿಳುನಾಡು ಪ್ರಗತಿಯತ್ತ ಸಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶಾದ್ಯಂತ ಅನೇಕ ಕಡೆ ಅಭಿವೃದ್ಧಿ ಕಾರ್ಯಗಳು ಆಗಿವೆ. ಹಾಗೇ ತಮಿಳುನಾಡು ಕೂಡ ಅಭಿವೃದ್ಧಿಯಾಗಬೇಕು. ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಂ.ಜಿ.ರಾಮಚಂದ್ರನ್​ ಮತ್ತು ಜಯಲಲಿತಾ ಅವರು ಕನಸು ಕಂಡಂತೆ ತಮಿಳುನಾಡು ಪ್ರಗತಿಯಾಗಬೇಕು ಎಂದಿದ್ದಾರೆ. ಇನ್ನು ಥೌಸಂಡ್ ಲೈಟ್​ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಖುಷ್ಬೂಗೆ ಮತ ಹಾಕಿ, ಗೆಲ್ಲಿಸಿ. ಅವರು ಖಂಡಿತ ಇಲ್ಲಿನ ಜನರ ಕಾಳಜಿ ಮಾಡುತ್ತಾರೆ.. ಅವರ ಬೇಕು-ಬೇಡಗಳನ್ನು ಗಮನಿಸುತ್ತಾರೆ ಎಂದು ಹೇಳಿದರು.

ತಮಿಳುನಾಡಿನ ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರಸೆಲ್ವಂರನ್ನು ತುಂಬ ಹೊಗಳಿದ ಅಮಿತ್​ ಶಾ, ಇವರಿಬ್ಬರೂ ಜತೆಯಾಗಿ ತಮಿಳುನಾಡಿನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕೊವಿಡ್​-19 ಸೋಂಕು ನಿಯಂತ್ರಣಕ್ಕೂ ತುಂಬ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈ ಬಾರಿಯೂ ಬಿಜೆಪಿ-ಎಐಎಡಿಎಂಕೆ ಮೈತ್ರಿಗೆ ಮತ ಚಲಾಯಿಸಿ, ಗೆಲ್ಲಿಸಿ ಎಂದರು. ಮತಪ್ರಚಾರ ಸಭೆಯಲ್ಲಿ ಮಾತನಾಡಿದ ಖುಷ್ಬೂ ಸುಂದರ್, ತಮಿಳುನಾಡಿನಲ್ಲಿ ಅಮ್ಮನ ಆಡಳಿತ ಮರುಕಳಿಸಬೇಕು ಎಂದರೆ ಬಿಜೆಪಿ-ಎಐಎಡಿಎಂಕೆ ಮೈತ್ರಿ ಸರ್ಕಾರ ಆಡಳಿತಕ್ಕೆ ಬರಬೇಕು ಎಂದು ತಿಳಿಸಿದರು.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ