AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Election 2021: ತಮಿಳುನಾಡಿನಲ್ಲಿ ಅಮಿತ್​ ಶಾ ಪ್ರಚಾರ; ಅಭಿವೃದ್ಧಿ ನಮ್ಮಿಂದ ಮಾತ್ರ ಸಾಧ್ಯವೆಂದ ಗೃಹ ಸಚಿವ

ತಮಿಳುನಾಡಿನ ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರಸೆಲ್ವಂರನ್ನು ತುಂಬ ಹೊಗಳಿದ ಅಮಿತ್​ ಶಾ, ಇವರಿಬ್ಬರೂ ಜತೆಯಾಗಿ ತಮಿಳುನಾಡಿನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಹೇಳಿದರು.

Tamil Nadu Election 2021: ತಮಿಳುನಾಡಿನಲ್ಲಿ ಅಮಿತ್​ ಶಾ ಪ್ರಚಾರ; ಅಭಿವೃದ್ಧಿ ನಮ್ಮಿಂದ ಮಾತ್ರ ಸಾಧ್ಯವೆಂದ ಗೃಹ ಸಚಿವ
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಅಮಿತ್ ಶಾ, ಖುಷ್ಬೂ ಸುಂದರ್​
Follow us
Lakshmi Hegde
|

Updated on: Apr 03, 2021 | 3:20 PM

ಚೆನ್ನೈ: ಗೃಹ ಸಚಿವ ಅಮಿತ್ ಶಾ ಅವರು ಇಂದು ತಮಿಳುನಾಡಿನಲ್ಲಿ ಮತ ಪ್ರಚಾರ ನಡೆಸಿದರು. ನಟಿ ಖುಷ್ಬೂ ಸುಂದರ್​ ಸ್ಪರ್ಧಿಸಿರುವ ಥೌಸಂಡ್ ಲೈಟ್ ವಿಧಾನಸಭಾ ಕ್ಷೇತ್ರದಿಂದ ಅರ್ಧ ಕಿಮೀ ದೂರ ಇರುವ ತೇನಾಂಪೇಟ್​​ನಲ್ಲಿ ರೋಡ್​ ಶೋ ನಡೆಸಿದರು. ಅಮಿತ್ ಶಾ ಜತೆ ಖುಷ್ಬೂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇತರರು ಇದ್ದರು. ಇನ್ನು ರೋಡ್ ಶೋ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್​ ಶಾ, ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್​ನ್ನು ತೊಡೆದುಹಾಕುವಂತೆ ಮತದಾರರಿಗೆ ಕರೆ ನೀಡಿದರು. ರಾಜ್ಯದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಅಭಿವೃದ್ಧಿಯಾಗುತ್ತದೆ. ಮಹಿಳೆಯರು, ನಿರುದ್ಯೋಗಿಗಳು ಮತ್ತು ಇಲ್ಲಿನ ಮೀನುಗಾರರಿಗೆ ನಾವು ಮಾತ್ರ ಸುರಕ್ಷತೆ ನೀಡಬಲ್ಲೆವು. ಅಲ್ಲದೆ, ತಮಿಳುನಾಡಿನ ಸಂಸ್ಕೃತಿ, ಸಂಪ್ರದಾಯದ ರಕ್ಷಣೆಯೂ ಆಗುತ್ತದೆ ಎಂದು ಹೇಳಿದ್ದಾರೆ.

ಡಿಎಂಕೆ- ಕಾಂಗ್ರೆಸ್​ನ ಭ್ರಷ್ಟಾಚಾರ-ವಂಶರಾಜಕಾರಣಕ್ಕೆ ಫುಲ್​ಸ್ಟಾಪ್​ ಇಡಬೇಕು. ಅಂದಾಗ ತಮಿಳುನಾಡು ಪ್ರಗತಿಯತ್ತ ಸಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶಾದ್ಯಂತ ಅನೇಕ ಕಡೆ ಅಭಿವೃದ್ಧಿ ಕಾರ್ಯಗಳು ಆಗಿವೆ. ಹಾಗೇ ತಮಿಳುನಾಡು ಕೂಡ ಅಭಿವೃದ್ಧಿಯಾಗಬೇಕು. ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಂ.ಜಿ.ರಾಮಚಂದ್ರನ್​ ಮತ್ತು ಜಯಲಲಿತಾ ಅವರು ಕನಸು ಕಂಡಂತೆ ತಮಿಳುನಾಡು ಪ್ರಗತಿಯಾಗಬೇಕು ಎಂದಿದ್ದಾರೆ. ಇನ್ನು ಥೌಸಂಡ್ ಲೈಟ್​ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಖುಷ್ಬೂಗೆ ಮತ ಹಾಕಿ, ಗೆಲ್ಲಿಸಿ. ಅವರು ಖಂಡಿತ ಇಲ್ಲಿನ ಜನರ ಕಾಳಜಿ ಮಾಡುತ್ತಾರೆ.. ಅವರ ಬೇಕು-ಬೇಡಗಳನ್ನು ಗಮನಿಸುತ್ತಾರೆ ಎಂದು ಹೇಳಿದರು.

ತಮಿಳುನಾಡಿನ ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರಸೆಲ್ವಂರನ್ನು ತುಂಬ ಹೊಗಳಿದ ಅಮಿತ್​ ಶಾ, ಇವರಿಬ್ಬರೂ ಜತೆಯಾಗಿ ತಮಿಳುನಾಡಿನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕೊವಿಡ್​-19 ಸೋಂಕು ನಿಯಂತ್ರಣಕ್ಕೂ ತುಂಬ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈ ಬಾರಿಯೂ ಬಿಜೆಪಿ-ಎಐಎಡಿಎಂಕೆ ಮೈತ್ರಿಗೆ ಮತ ಚಲಾಯಿಸಿ, ಗೆಲ್ಲಿಸಿ ಎಂದರು. ಮತಪ್ರಚಾರ ಸಭೆಯಲ್ಲಿ ಮಾತನಾಡಿದ ಖುಷ್ಬೂ ಸುಂದರ್, ತಮಿಳುನಾಡಿನಲ್ಲಿ ಅಮ್ಮನ ಆಡಳಿತ ಮರುಕಳಿಸಬೇಕು ಎಂದರೆ ಬಿಜೆಪಿ-ಎಐಎಡಿಎಂಕೆ ಮೈತ್ರಿ ಸರ್ಕಾರ ಆಡಳಿತಕ್ಕೆ ಬರಬೇಕು ಎಂದು ತಿಳಿಸಿದರು.

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ