AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಸಂಸದೆಗೆ ಬಸ್​​ನಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟದ್ದಕ್ಕೆ ತಮಿಳುನಾಡಿನ ಮೊದಲ ಬಸ್ ಚಾಲಕಿಯ ಉದ್ಯೋಗಕ್ಕೇ ಕುತ್ತು

ಶರ್ಮಿಳಾ ಅವರನ್ನು ವಜಾಗೊಳಿಸಿರುವ ಕುರಿತು ಮಾಹಿತಿ ದೊರೆತ ಬಳಿಕ ಆಕೆಗೆ ದೂರವಾಣಿ ಕರೆ ಮಾಡಿದ ಕನಿಮೋಳಿ, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಜತೆಗೆ, ವೃತ್ತಿ ಜೀವನಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಡಿಎಂಕೆ ಸಂಸದೆಗೆ ಬಸ್​​ನಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟದ್ದಕ್ಕೆ ತಮಿಳುನಾಡಿನ ಮೊದಲ ಬಸ್ ಚಾಲಕಿಯ ಉದ್ಯೋಗಕ್ಕೇ ಕುತ್ತು
ತಮಿಳುನಾಡಿನ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಹಾಗೂ ಡಿಎಂಕೆ ಸಂಸದೆ ಕನಿಮೊಳಿ
Ganapathi Sharma
|

Updated on: Jun 24, 2023 | 10:45 AM

Share

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನ (Coimbatore) ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಎಂಬವರು ಕೆಲಸ ಕಳೆದುಕೊಂಡ ಒಂದು ದಿನದ ನಂತರ ಅವರಿಗೆ ಡಿಎಂಕೆ ಸಂಸದೆ ಕನಿಮೋಳಿ (DMK MP Kanimozhi) ಬೆಂಬಲ ನೀಡಿದ್ದಾರೆ. ಜೀವನೋಪಾಯಕ್ಕಾಗಿ ಬಸ್ ಓಡಿಸುತ್ತಿದ್ದ ಶರ್ಮಿಳಾ ಅವರು ಕನಿಮೊಳಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿದ್ದರು. ಇದಕ್ಕಾಗಿ ಮಹಿಳಾ ಬಸ್ ಕಂಡಕ್ಟರ್ ಜೊತೆ ವಾಗ್ವಾದಕ್ಕಿಳಿದಿದ್ದರು. ಈ ಕಾರಣಕ್ಕಾಗಿ ಆಕೆಯನ್ನು ಮಾಲೀಕರು ಕೆಲಸದಿಂದ ವಜಾಗೊಳಿಸಿದ್ದರು.

ಶರ್ಮಿಳಾ ಅವರನ್ನು ವಜಾಗೊಳಿಸಿರುವ ಕುರಿತು ಮಾಹಿತಿ ದೊರೆತ ಬಳಿಕ ಆಕೆಗೆ ದೂರವಾಣಿ ಕರೆ ಮಾಡಿದ ಕನಿಮೋಳಿ, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಜತೆಗೆ, ವೃತ್ತಿ ಜೀವನಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕನಿಮೋಳಿ ಅವರನ್ನು ಸತ್ಕರಿಸಿ ಬಸ್ಸಿನಲ್ಲಿ ಉಚಿತವಾಗಿ ಕರೆದೊಯ್ದ ಸ್ವಲ್ಪ ಸಮಯದ ನಂತರ ಶರ್ಮಿಳಾಳನ್ನು ಖಾಸಗಿ ಸಾರಿಗೆ ಕಂಪನಿಯು ಕೆಲಸದಿಂದ ವಜಾಗೊಳಿಸಿತ್ತು.

ಕನಿಮೋಳಿ ಅವರನ್ನು ಬಸ್ಸಿನಲ್ಲಿ ಕರೆದೊಯ್ಯುವ ಬಗ್ಗೆ ಚಾಲಕಿ, ನಿರ್ವಾಹಕಿ ಮಧ್ಯೆ ವಾಗ್ವಾದವೂ ನಡೆದಿತ್ತು ಎಂದು ಕೆಲವು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: Taj Mahal in Tamil Nadu: ತಾಯಿಯ ನೆನಪಿಗಾಗಿ ‘ತಾಜ್​​ ಮಹಲ್​​​​ ನಿರ್ಮಿಸಿದ ಮಗ

ಕನಿಮೋಳಿ ಅವರು ಟಿಕೆಟ್​ ಪಡೆದಿದ್ದರೂ ನಿರ್ವಾಹಕಿ ಅಗೌರವ ತೋರಿದ್ದಾರೆ. ಈ ಮಧ್ಯೆ, ಆಡಳಿತ ಮಂಡಳಿಯೂ ಪ್ರಚಾರಕ್ಕಾಗಿ ಕನಿಮೋಳಿ ಅವರನ್ನು ಬಸ್​​ನಲ್ಲಿ ಕರೆದೊಯ್ದೆ ಎಂದು ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಎಲ್ಲ ಕಾರಣಗಳಿಂದ ಬೇಸರಗೊಂಡು ಉದ್ಯೋಗಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಶರ್ಮಿಳಾ ಹೇಳಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ