AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಸಂಸದೆಗೆ ಬಸ್​​ನಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟದ್ದಕ್ಕೆ ತಮಿಳುನಾಡಿನ ಮೊದಲ ಬಸ್ ಚಾಲಕಿಯ ಉದ್ಯೋಗಕ್ಕೇ ಕುತ್ತು

ಶರ್ಮಿಳಾ ಅವರನ್ನು ವಜಾಗೊಳಿಸಿರುವ ಕುರಿತು ಮಾಹಿತಿ ದೊರೆತ ಬಳಿಕ ಆಕೆಗೆ ದೂರವಾಣಿ ಕರೆ ಮಾಡಿದ ಕನಿಮೋಳಿ, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಜತೆಗೆ, ವೃತ್ತಿ ಜೀವನಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಡಿಎಂಕೆ ಸಂಸದೆಗೆ ಬಸ್​​ನಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟದ್ದಕ್ಕೆ ತಮಿಳುನಾಡಿನ ಮೊದಲ ಬಸ್ ಚಾಲಕಿಯ ಉದ್ಯೋಗಕ್ಕೇ ಕುತ್ತು
ತಮಿಳುನಾಡಿನ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಹಾಗೂ ಡಿಎಂಕೆ ಸಂಸದೆ ಕನಿಮೊಳಿ
ಗಣಪತಿ ಶರ್ಮಾ
|

Updated on: Jun 24, 2023 | 10:45 AM

Share

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನ (Coimbatore) ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಎಂಬವರು ಕೆಲಸ ಕಳೆದುಕೊಂಡ ಒಂದು ದಿನದ ನಂತರ ಅವರಿಗೆ ಡಿಎಂಕೆ ಸಂಸದೆ ಕನಿಮೋಳಿ (DMK MP Kanimozhi) ಬೆಂಬಲ ನೀಡಿದ್ದಾರೆ. ಜೀವನೋಪಾಯಕ್ಕಾಗಿ ಬಸ್ ಓಡಿಸುತ್ತಿದ್ದ ಶರ್ಮಿಳಾ ಅವರು ಕನಿಮೊಳಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿದ್ದರು. ಇದಕ್ಕಾಗಿ ಮಹಿಳಾ ಬಸ್ ಕಂಡಕ್ಟರ್ ಜೊತೆ ವಾಗ್ವಾದಕ್ಕಿಳಿದಿದ್ದರು. ಈ ಕಾರಣಕ್ಕಾಗಿ ಆಕೆಯನ್ನು ಮಾಲೀಕರು ಕೆಲಸದಿಂದ ವಜಾಗೊಳಿಸಿದ್ದರು.

ಶರ್ಮಿಳಾ ಅವರನ್ನು ವಜಾಗೊಳಿಸಿರುವ ಕುರಿತು ಮಾಹಿತಿ ದೊರೆತ ಬಳಿಕ ಆಕೆಗೆ ದೂರವಾಣಿ ಕರೆ ಮಾಡಿದ ಕನಿಮೋಳಿ, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಜತೆಗೆ, ವೃತ್ತಿ ಜೀವನಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕನಿಮೋಳಿ ಅವರನ್ನು ಸತ್ಕರಿಸಿ ಬಸ್ಸಿನಲ್ಲಿ ಉಚಿತವಾಗಿ ಕರೆದೊಯ್ದ ಸ್ವಲ್ಪ ಸಮಯದ ನಂತರ ಶರ್ಮಿಳಾಳನ್ನು ಖಾಸಗಿ ಸಾರಿಗೆ ಕಂಪನಿಯು ಕೆಲಸದಿಂದ ವಜಾಗೊಳಿಸಿತ್ತು.

ಕನಿಮೋಳಿ ಅವರನ್ನು ಬಸ್ಸಿನಲ್ಲಿ ಕರೆದೊಯ್ಯುವ ಬಗ್ಗೆ ಚಾಲಕಿ, ನಿರ್ವಾಹಕಿ ಮಧ್ಯೆ ವಾಗ್ವಾದವೂ ನಡೆದಿತ್ತು ಎಂದು ಕೆಲವು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: Taj Mahal in Tamil Nadu: ತಾಯಿಯ ನೆನಪಿಗಾಗಿ ‘ತಾಜ್​​ ಮಹಲ್​​​​ ನಿರ್ಮಿಸಿದ ಮಗ

ಕನಿಮೋಳಿ ಅವರು ಟಿಕೆಟ್​ ಪಡೆದಿದ್ದರೂ ನಿರ್ವಾಹಕಿ ಅಗೌರವ ತೋರಿದ್ದಾರೆ. ಈ ಮಧ್ಯೆ, ಆಡಳಿತ ಮಂಡಳಿಯೂ ಪ್ರಚಾರಕ್ಕಾಗಿ ಕನಿಮೋಳಿ ಅವರನ್ನು ಬಸ್​​ನಲ್ಲಿ ಕರೆದೊಯ್ದೆ ಎಂದು ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಎಲ್ಲ ಕಾರಣಗಳಿಂದ ಬೇಸರಗೊಂಡು ಉದ್ಯೋಗಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಶರ್ಮಿಳಾ ಹೇಳಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!