AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಹೇರಿಕೆಯ ವಿರುದ್ಧ ತಮಿಳಿಗರ ‘ಚಂಡಮಾರುತ’

ದಕ್ಷಿಣ ಭಾರತದವರಿಗೆ ಅವರದೇ ಆದ ಭಾಷೆಗಳಿದ್ದು ಹಿಂದಿ ಕಲಿಯುವ ಅನಿವಾರ್ಯತೆ ಇಲ್ಲ. ಈ ರೀತಿ ಹಿಂದಿ ಹೇರಿಕೆ ಮಾಡುವುದನ್ನು ನಾವು ಎಂದೂ ಒಪ್ಪುವುದಿಲ್ಲ ಎಂದು ಅಲ್ಲಿನ ಜನರು ತಿರುಗಿಬಿದ್ದಿದ್ದಾರೆ.

ಹಿಂದಿ ಹೇರಿಕೆಯ ವಿರುದ್ಧ ತಮಿಳಿಗರ ‘ಚಂಡಮಾರುತ’
ತಮಿಳುನಾಡು / ಪುದುಚೇರಿಯ ಮೇಲೆ ಚಂಡಮಾರುತದ ಮೋಡ
Skanda
| Edited By: |

Updated on:Nov 25, 2020 | 10:48 AM

Share

ಚೆನ್ನೈ: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಚೆನ್ನೈ, ಪುದುಚೆರಿ ಭಾಗಗಳಿಗೆ ಬುಧವಾರ ಸಂಜೆಯ ವೇಳೆಗೆ ತೀವ್ರ ಚಂಡಮಾರುತ ಬಂದು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಚಂಡಮಾರುತದ ಕುರಿತು ಕ್ಷಣಕ್ಷಣದ ಮಾಹಿತಿ ಹಂಚಿಕೊಳ್ಳುತ್ತಿದೆ.

ಆದರೆ, ಈ ಮಾಹಿತಿಯನ್ನು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಲಾಗುತ್ತಿದ್ದು ಹವಾಮಾನ ಇಲಾಖೆಯ ಈ ನಡೆಯ ಕುರಿತು ತಮಿಳರು ಗರಂ ಆಗಿದ್ದಾರೆ.

ನಮಗೆ ಅರ್ಥ ಆಗೋ ಭಾಷೇಲಿ ಹೇಳ್ರೀ… ತಮಿಳುನಾಡಿಗೆ ಚಂಡಮಾರುತ ಬಂದು ಅಪ್ಪಳಿಸುವುದಾದರೆ ನೀವು ಅಲ್ಲಿಯ ಜನರಿಗೆ ಅರ್ಥವಾಗುವ ಭಾಷೆಯಲ್ಲಿ ಮಾಹಿತಿ ನೀಡಬೇಕು. ಅದನ್ನು ಬಿಟ್ಟು ಯಾರನ್ನೋ ಮೆಚ್ಚಿಸುವುದಕ್ಕಾಗಿ ಇಂತಹ ಸಂದರ್ಭದಲ್ಲೂ ನಿಮ್ಮ ಹಿಂದಿ ಪ್ರೇಮವನ್ನು ತೋರಿಸಬೇಡಿ. ದಕ್ಷಿಣ ಭಾರತದವರಿಗೆ ಅವರದೇ ಆದ ಭಾಷೆಗಳಿದ್ದು ಹಿಂದಿ ಕಲಿಯುವ ಅನಿವಾರ್ಯತೆ ಇಲ್ಲ. ಈ ರೀತಿ ಹಿಂದಿ ಹೇರಿಕೆ ಮಾಡುವುದನ್ನು ನಾವು ಎಂದೂ ಒಪ್ಪುವುದಿಲ್ಲ ಎಂದು ತಿರುಗಿಬಿದ್ದಿದ್ದಾರೆ.

ಹಿಂದಿ ಹೇರಿಕೆಯನ್ನು ವಿರೋಧಿಸಿ ಆರಂಭಿಸಿದ #StopHindiImposition ಹ್ಯಾಶ್​ಟ್ಯಾಗ್ ಸದ್ಯ ತಮಿಳುನಾಡಿನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಇನ್ನಷ್ಟು ಸುದ್ದಿ…

ನುಗ್ಗಿ ಬರ್ತಿದೆ ಡೆಡ್ಲಿ ನಿವಾರ್ ಚಂಡಮಾರುತ: ಬೆಂಗಳೂರಿನಲ್ಲಿ 2 ದಿನ ಭಾರಿ ಮಳೆ

ನಿವಾರ್ ಚಂಡಮಾರುತ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಎನ್​ಡಿಆರ್​ಎಫ್

Cyclone Nivar ಎದುರಿಸಲು ಹೇಗೆ ಸಿದ್ಧವಾಗ್ತಿದೆ ತಮಿಳುನಾಡು, ಪುದುಚೇರಿ?

ಕಡಲ ಅಬ್ಬರ, ರಸ್ತೆ ಮೇಲೆ ನೀರು, ಸೈಲೆನ್ಸರ್ ಮೂತಿಗೆ ಪ್ಲಾಸ್ಟಿಕ್ ಬ್ಯಾಗ್: #ChennaiRain ಟ್ರೆಂಡಿಂಗ್​

Published On - 10:47 am, Wed, 25 November 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ