Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilnadu: ತೃತೀಯ ಲಿಂಗಿಯ ಮೇಲೆ ಹಲ್ಲೆ, ಬಲವಂತವಾಗಿ ಕೂದಲು ಕತ್ತರಿಸಿದ ಇಬ್ಬರು ಆರೋಪಿಗಳ ಬಂಧನ

ತೃತೀಯಲಿಂಗಿಯ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯನ್ನು ಅಪಹಾಸ್ಯ, ರೀತಿಯಲ್ಲಿ ಆಕೆಯನ್ನು ನಡೆಸುಕೊಳ್ಳಲಾಗಿದೆ ಎಂದು ಹೇಳಲಾಗಿದೆ ಮತ್ತು ಆಕೆಯ ಕೂದಲನ್ನು ಇಬ್ಬರು ಪುರುಷರು ಕತ್ತರಿಸಿದ್ದಾರೆ

Tamilnadu: ತೃತೀಯ ಲಿಂಗಿಯ ಮೇಲೆ ಹಲ್ಲೆ, ಬಲವಂತವಾಗಿ ಕೂದಲು ಕತ್ತರಿಸಿದ ಇಬ್ಬರು ಆರೋಪಿಗಳ ಬಂಧನ
Tamilnadu: Arrest of two accused of assaulting transgender, forcibly cutting hair
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 13, 2022 | 11:58 AM

ಚೆನ್ನೈ: ಇಂದು (ಗುರುವಾರ) ತಮಿಳುನಾಡಿನ (Tamilnadu) ಟ್ಯುಟಿಕೋರಿನ್​ನಲ್ಲೊಂದು ಅವಮಾನಿಯ ಘಟನೆಯೊಂದು ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೃತೀಯಲಿಂಗಿಯ (transgender) ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯನ್ನು ಅಪಹಾಸ್ಯ, ರೀತಿಯಲ್ಲಿ ಆಕೆಯನ್ನು ನಡೆಸುಕೊಳ್ಳಲಾಗಿದೆ ಎಂದು ಹೇಳಲಾಗಿದೆ ಮತ್ತು ಆಕೆಯ ಕೂದಲನ್ನು ಇಬ್ಬರು ಪುರುಷರು ಕತ್ತರಿಸಿದ್ದಾರೆ. ಈ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ತೃತೀಯಲಿಂಗಿಗಳ ಹಕ್ಕುಗಳ ಕಾರ್ಯಕರ್ತ ಗ್ರೇಸ್ ಬಾನು ಅವರು ಹಂಚಿಕೊಂಡ 19 ಸೆಕೆಂಡುಗಳ ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ರೇಜರ್ ಬಳಸಿ ತೃತೀಯಲಿಂಗಿಯ ಉದ್ದನೆಯ ಕೂದಲನ್ನು ಕತ್ತರಿಸುತ್ತಾನೆ. ತೃತೀಯಲಿಂಗಿ ಮತ್ತು ಆಕೆಯ ಪಕ್ಕದಲ್ಲಿ ಕುಳಿತಿರುವ ಇನ್ನೊಬ್ಬ ತೃತೀಯಲಿಂಗಿಯನ್ನು ನಿಂದಿಸುತ್ತಿರುವ ಮತ್ತು ಕೊದಲು ಕತ್ತರಿಸಿ ಎಸೆಯುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಇವರಗಳು (ಮಂಗಳಮುಖಿಗಳು) ಗಂಡಸರನ್ನು ಹಣಕ್ಕಾಗಿ ಪೀಡಿಸುತ್ತಾರೆ. ನಾವು ಅವರನ್ನು ಏನು ಮಾಡಬೇಕು? ಇನ್ನೂ ಮುಂದೆ ಈ ರೀತಿಯ ವರ್ತನೆ ನಡೆಯಬಾರದು ಅದಕ್ಕೆ ಈ ಶಿಕ್ಷೆ, ನೀವು ಚೆನ್ನಾಗಿ ಕಾಣುತ್ತೀರಿ, ಸುಂದರವಾಗಿ ಕಾಣುತ್ತೀರಿ, ಎಂದು ಅವರು ಹೇಳುವುದನ್ನು ಕೇಳಲಾಗುತ್ತದೆ.

ಮತ್ತೊಂದು ವೀಡಿಯೊದಲ್ಲಿ, ತೃತೀಯಲಿಂಗಿಯು ಅಸಹಾಯಕಳಾಗಿ ಒಂದು ಕಣ್ಣು ಊದಿಕೊಂಡಂತೆ ನೆಲದ ಮೇಲೆ ಕುಳಿತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇಂತಹ ಹಿಂಸಾಚಾರ ಯಾವಾಗ ಕೊನೆಗೊಳ್ಳುತ್ತದೆ ಎಂದು ಬಾನು ತಮ್ಮ ಟ್ವೀಟ್‌ನಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಪಾಕಿಸ್ತಾನದ ಕರಾಚಿಯಲ್ಲಿ ಪ್ರವಾಹ ಸಂತ್ರಸ್ತರು ಪ್ರಯಾಣಿಸುತ್ತಿದ್ದ ಬಸ್​ಗೆ ಬೆಂಕಿ; 21 ಜನ ಸಜೀವ ದಹನ

ತಮಿಳುನಾಡು ದಕ್ಷಿಣ ವಲಯ ಪೊಲೀಸರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಾನು ಟ್ವೀಟ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅವರನ್ನು ನೋವಾ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ಇಬ್ಬರೂ ಪುರುಷರು ಇಬ್ಬರು ಮಂಗಳಮುಖಿಗಳಿಗೆ ಮಹಿಳೆಯರಿಗೆ ಚಿರಪರಿಚಿತರು. ಈ ಇಬ್ಬರು ಆರೋಪಿಗಳಲ್ಲಿ ಒಬ್ಬರು ಅವಳೊಂದಿಗೆ ಸಂಬಂಧ ಹೊಂದಿದ್ದರು, ಆದರೆ ಇದೀಗ ಅವರಿಬ್ಬರೂ ದೂರವಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Published On - 11:47 am, Thu, 13 October 22

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ