AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilnadu: ತೃತೀಯ ಲಿಂಗಿಯ ಮೇಲೆ ಹಲ್ಲೆ, ಬಲವಂತವಾಗಿ ಕೂದಲು ಕತ್ತರಿಸಿದ ಇಬ್ಬರು ಆರೋಪಿಗಳ ಬಂಧನ

ತೃತೀಯಲಿಂಗಿಯ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯನ್ನು ಅಪಹಾಸ್ಯ, ರೀತಿಯಲ್ಲಿ ಆಕೆಯನ್ನು ನಡೆಸುಕೊಳ್ಳಲಾಗಿದೆ ಎಂದು ಹೇಳಲಾಗಿದೆ ಮತ್ತು ಆಕೆಯ ಕೂದಲನ್ನು ಇಬ್ಬರು ಪುರುಷರು ಕತ್ತರಿಸಿದ್ದಾರೆ

Tamilnadu: ತೃತೀಯ ಲಿಂಗಿಯ ಮೇಲೆ ಹಲ್ಲೆ, ಬಲವಂತವಾಗಿ ಕೂದಲು ಕತ್ತರಿಸಿದ ಇಬ್ಬರು ಆರೋಪಿಗಳ ಬಂಧನ
Tamilnadu: Arrest of two accused of assaulting transgender, forcibly cutting hair
TV9 Web
| Edited By: |

Updated on:Oct 13, 2022 | 11:58 AM

Share

ಚೆನ್ನೈ: ಇಂದು (ಗುರುವಾರ) ತಮಿಳುನಾಡಿನ (Tamilnadu) ಟ್ಯುಟಿಕೋರಿನ್​ನಲ್ಲೊಂದು ಅವಮಾನಿಯ ಘಟನೆಯೊಂದು ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೃತೀಯಲಿಂಗಿಯ (transgender) ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯನ್ನು ಅಪಹಾಸ್ಯ, ರೀತಿಯಲ್ಲಿ ಆಕೆಯನ್ನು ನಡೆಸುಕೊಳ್ಳಲಾಗಿದೆ ಎಂದು ಹೇಳಲಾಗಿದೆ ಮತ್ತು ಆಕೆಯ ಕೂದಲನ್ನು ಇಬ್ಬರು ಪುರುಷರು ಕತ್ತರಿಸಿದ್ದಾರೆ. ಈ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ತೃತೀಯಲಿಂಗಿಗಳ ಹಕ್ಕುಗಳ ಕಾರ್ಯಕರ್ತ ಗ್ರೇಸ್ ಬಾನು ಅವರು ಹಂಚಿಕೊಂಡ 19 ಸೆಕೆಂಡುಗಳ ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ರೇಜರ್ ಬಳಸಿ ತೃತೀಯಲಿಂಗಿಯ ಉದ್ದನೆಯ ಕೂದಲನ್ನು ಕತ್ತರಿಸುತ್ತಾನೆ. ತೃತೀಯಲಿಂಗಿ ಮತ್ತು ಆಕೆಯ ಪಕ್ಕದಲ್ಲಿ ಕುಳಿತಿರುವ ಇನ್ನೊಬ್ಬ ತೃತೀಯಲಿಂಗಿಯನ್ನು ನಿಂದಿಸುತ್ತಿರುವ ಮತ್ತು ಕೊದಲು ಕತ್ತರಿಸಿ ಎಸೆಯುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಇವರಗಳು (ಮಂಗಳಮುಖಿಗಳು) ಗಂಡಸರನ್ನು ಹಣಕ್ಕಾಗಿ ಪೀಡಿಸುತ್ತಾರೆ. ನಾವು ಅವರನ್ನು ಏನು ಮಾಡಬೇಕು? ಇನ್ನೂ ಮುಂದೆ ಈ ರೀತಿಯ ವರ್ತನೆ ನಡೆಯಬಾರದು ಅದಕ್ಕೆ ಈ ಶಿಕ್ಷೆ, ನೀವು ಚೆನ್ನಾಗಿ ಕಾಣುತ್ತೀರಿ, ಸುಂದರವಾಗಿ ಕಾಣುತ್ತೀರಿ, ಎಂದು ಅವರು ಹೇಳುವುದನ್ನು ಕೇಳಲಾಗುತ್ತದೆ.

ಮತ್ತೊಂದು ವೀಡಿಯೊದಲ್ಲಿ, ತೃತೀಯಲಿಂಗಿಯು ಅಸಹಾಯಕಳಾಗಿ ಒಂದು ಕಣ್ಣು ಊದಿಕೊಂಡಂತೆ ನೆಲದ ಮೇಲೆ ಕುಳಿತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇಂತಹ ಹಿಂಸಾಚಾರ ಯಾವಾಗ ಕೊನೆಗೊಳ್ಳುತ್ತದೆ ಎಂದು ಬಾನು ತಮ್ಮ ಟ್ವೀಟ್‌ನಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಪಾಕಿಸ್ತಾನದ ಕರಾಚಿಯಲ್ಲಿ ಪ್ರವಾಹ ಸಂತ್ರಸ್ತರು ಪ್ರಯಾಣಿಸುತ್ತಿದ್ದ ಬಸ್​ಗೆ ಬೆಂಕಿ; 21 ಜನ ಸಜೀವ ದಹನ

ತಮಿಳುನಾಡು ದಕ್ಷಿಣ ವಲಯ ಪೊಲೀಸರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಾನು ಟ್ವೀಟ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅವರನ್ನು ನೋವಾ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ಇಬ್ಬರೂ ಪುರುಷರು ಇಬ್ಬರು ಮಂಗಳಮುಖಿಗಳಿಗೆ ಮಹಿಳೆಯರಿಗೆ ಚಿರಪರಿಚಿತರು. ಈ ಇಬ್ಬರು ಆರೋಪಿಗಳಲ್ಲಿ ಒಬ್ಬರು ಅವಳೊಂದಿಗೆ ಸಂಬಂಧ ಹೊಂದಿದ್ದರು, ಆದರೆ ಇದೀಗ ಅವರಿಬ್ಬರೂ ದೂರವಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Published On - 11:47 am, Thu, 13 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ