AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ

ತಮಿಳುನಾಡಿನ ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಚೆನ್ನೈನ ಹೊರವಲಯದಲ್ಲಿರುವ ಮಿಂಜೂರ್ ರೈಲ್ವೇ ನಿಲ್ದಾಣದಲ್ಲಿ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ. ಮಧ್ಯವಯಸ್ಕನೊಬ್ಬ ತನ್ನ ಸಾಮಾನು ಸರಂಜಾಮು ಬಿಟ್ಟು ಹೋಗಿದ್ದರಿಂದ ಆತಂಕಗೊಂಡ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಒಳಗೆ ಶವ ಪತ್ತೆಯಾಗಿದೆ.

ತಮಿಳುನಾಡು: ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ
ಸೂಟ್​ಕೇಸ್​ Image Credit source: India Today
ನಯನಾ ರಾಜೀವ್
|

Updated on: Nov 05, 2024 | 2:57 PM

Share

ತಮಿಳುನಾಡಿನ ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಚೆನ್ನೈನ ಹೊರವಲಯದಲ್ಲಿರುವ ಮಿಂಜೂರ್ ರೈಲ್ವೇ ನಿಲ್ದಾಣದಲ್ಲಿ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ. ಮಧ್ಯವಯಸ್ಕನೊಬ್ಬ ತನ್ನ ಸಾಮಾನು ಸರಂಜಾಮು ಬಿಟ್ಟು ಹೋಗಿದ್ದರಿಂದ ಆತಂಕಗೊಂಡ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಒಳಗೆ ಶವ ಪತ್ತೆಯಾಗಿದೆ.

ನವೆಂಬರ್ 4 ರ ಸೋಮವಾರ ತಡರಾತ್ರಿ 43 ವರ್ಷದ ಬಾಲಸುಬ್ರಮಣ್ಯಂ ಮತ್ತು ಅವರ 17 ವರ್ಷದ ಮಗಳು ದೊಡ್ಡ ಸೂಟ್‌ಕೇಸ್‌ನೊಂದಿಗೆ ನಿಲ್ದಾಣಕ್ಕೆ ಬಂದಿದ್ದರು. ಬಾಲಸುಬ್ರಹ್ಮಣ್ಯಂ ಆ ಸೂಟ್​ಕೇಸ್​ನ್ನು ಅಲ್ಲಿಯೇ ಬಿಟ್ಟು ರೈಲ್ವೆ ನಿಲ್ದಾಣದಿಂದ ಹೊರಹೋಗಲು ಯತ್ನಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸಾಮಾನು ಸರಂಜಾಮು ಬಿಟ್ಟು ಹೋಗಿರುವ ಬಗ್ಗೆ ಆತಂಕಗೊಂಡ ಪ್ರಯಾಣಿಕರು ಕೂಡಲೇ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸೂಟ್‌ಕೇಸ್ ತುಂಬಾ ದೊಡ್ಡದಾಗಿದ್ದ ಕಾರಣ, ಅಲ್ಲಿಂದ ಸ್ಥಳಾಂತರಗೊಳ್ಳಲು ಸಾಧ್ಯವಾಗದ ಕಾರಣ ಆರ್‌ಪಿಎಫ್ ಅಧಿಕಾರಿಗಳು ಅನುಮಾನಗೊಂಡು ಕೊರುಕ್ಕುಪೇಟೆ ಪೊಲೀಸರನ್ನು ಕೂಡಲೇ ಸಂಪರ್ಕಿಸಿದರು.

ಏನೋ ತಪ್ಪಾಗಿದೆ ಎಂದು ಗ್ರಹಿಸಿದ ಅಧಿಕಾರಿಗಳು ಸೂಟ್‌ಕೇಸ್‌ನ ವಿಷಯಗಳ ಬಗ್ಗೆ ವಿಚಾರಿಸಲು ಬಾಲಸುಬ್ರಮಣ್ಯಂ ಅವರನ್ನು ಸಂಪರ್ಕಿಸಿದರು. ಅವರು ಕೊಟ್ಟ ವಿವರಣೆ ಅಸ್ಪಷ್ಟವಾಗಿತ್ತು, ಮತ್ತಷ್ಟು ಅನುಮಾನವನ್ನು ಹುಟ್ಟುಹಾಕಿತ್ತು. ಪೊಲೀಸರು ಸೂಟ್​ಕೇಸ್​ ತೆರೆದು ನೋಡಿ ಬೆಚ್ಚಿಬಿದ್ದಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಬಾಲಸುಬ್ರಮಣ್ಯಂ ಸೂಟ್‌ಕೇಸ್‌ ಬಿಚ್ಚುತ್ತಿದ್ದಂತೆ ಪಕ್ಕದಲ್ಲಿದ್ದವರು ಪ್ಲಾಸ್ಟಿಕ್‌ ಕವರ್​ನಲ್ಲಿ ಸುತ್ತಲಾಗಿತ್ತು, ಶವದ ತಲೆಯಲ್ಲಿ  ಗಾಯಗಳಿದ್ದವು. ತಕ್ಷಣವೇ ಪೊಲೀಸರು ಬಾಲಸುಬ್ರಮಣ್ಯಂ ಮತ್ತು ಅವರ ಪುತ್ರಿ ಇಬ್ಬರನ್ನೂ ಬಂಧಿಸಿ, ಘಟನೆಯ ಬಗ್ಗೆ ವಿವರವಾದ ತನಿಖೆಯನ್ನು ಪ್ರಾರಂಭಿಸಿದರು.

ಇತ್ತೀಚೆಗೆ, ಚೆನ್ನೈನಲ್ಲಿ ಮಹಿಳೆಯ ತುಂಡು-ತುಂಡಾದ ಮಹಿಳೆಯ ದೇಹವನ್ನು ಸೂಟ್‌ಕೇಸ್‌ನಿಂದ ಹೊರತೆಗೆಯಲಾಗಿತ್ತು, ಸ್ಥಳೀಯರೊಬ್ಬರು ಬ್ಯಾಗ್‌ನಿಂದ ರಕ್ತ ಸೋರುತ್ತಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದರು. ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ